ಉತ್ತರಾಖಂಡದ (Uttarakhand) ಬದರಿನಾಥ (Badrinath) ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ (Actor Rajanikanth) ಭೇಟಿ ನೀಡಿ, ದರ್ಶನ ಪಡೆದಿದ್ದಾರೆ.
ಸೋಮವಾರ (ಅ.6) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು. ಜೊತೆಗೆ ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ರಜನಿಕಾಂತ್ಗೆ ನೀಡಿದರು.ಇದನ್ನೂ ಓದಿ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೋನಂ ಕಪೂರ್
ಚಳಿಗಾಲದ ಹಿನ್ನೆಲೆ ದೇಗುಲದ ಬಾಗಿಲುಗಳನ್ನು ಇನ್ನು ಕೆಲ ದಿನಗಳಲ್ಲಿ ಮುಚ್ಚಲಾಗುತ್ತಿದ್ದು, ಅದಕ್ಕೂ ಮುನ್ನವೇ ರಜನಿಕಾಂತ್ ದರ್ಶನ ಪಡೆದುಕೊಂಡಂತಾಗಿದೆ. ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು ಯಾತ್ರಾ ಮಾರ್ಗದಲ್ಲಿ ಸಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಇದಕ್ಕೂ ಮುನ್ನ ಶನಿವಾರ (ಟ.4) ಋಷಿಕೇಶದ ಗಂಗಾ ನದಿಯ ದಡದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದರು.ಇದನ್ನೂ ಓದಿ: ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ್ದೇವೆ : ಪಾಕ್