ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ (Govt Hospitals) ಯಾವುದೇ ರೀತಿಯ ಔಷಧಿಗಳ ಕೊರತೆ ಎದ್ದು ಕಾಣದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ.
ಕೆಲವು ದೂರು ಬಂದ ಕಾರಣ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಸುಮಾರು 75ರಷ್ಟು ಔಷಧಗಳು ಇಲ್ಲಿ ಸಿಗುತ್ತವೆ. ಉಳಿದವನ್ನು ಸರ್ಕಾರ ಒದಗಿಸಬೇಕಿದೆ. ಬಡವರಿಗೆ ಔಷಧಿ ಅಂಗಡಿಗಳಲ್ಲಿ ಹೋಗಿ ಕೊಳ್ಳುವ ಶಕ್ತಿ ಇರುವುದಿಲ್ಲ. ಇದನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬಿಗ್ ಬಾಸ್ಗೆ 10 ದಿನ ಕಾಲಾವಕಾಶ; ನಮಗೆ ಯಾವುದೇ ರೀತಿ ಮನವಿ ಬಂದಿಲ್ಲ: ನರೇಂದ್ರಸ್ವಾಮಿ
ವೈದ್ಯರ ಕೆಲವು ಕೊರತೆಗಳೂ ಎದ್ದು ಕಾಣುತ್ತವೆ, ಅವರನ್ನು ಕೇಳಿದ್ದೇನೆ. ಕೆಲವು ಭಾಗಗಳಲ್ಲಿ ಹಿರಿಯ ವೈದ್ಯರು ರೋಗಿಗಳನ್ನು ಸರಿಯಾಗಿ ನೋಡುವುದಿಲ್ಲ ಎಂಬ ದೂರುಗಳಿತ್ತು. ನಮ್ಮ ಮುತುವರ್ಜಿಯಲ್ಲೇ ಎಲ್ಲವೂ ನಡೆಯುತ್ತದೆ. ಎಂಬಿಬಿಎಸ್ ತರಬೇತಿಗೆ ಬಂದವರಿಗೆ ಪಾಠ ಹೇಳುವಾಗ ಜೊತೆಯಲ್ಲಿ ಇಟ್ಟುಕೊಳ್ಳುತ್ತೇವೆ. ನಾವೇ ಚಿಕಿತ್ಸೆ ಕೊಡುತ್ತೇವೆ ಎಂದಿದ್ದಾಗಿ ವಿವರಿಸಿದರು. ಇದನ್ನೂ ಓದಿ: Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ
ತುಂಬಾ ಹಿರಿಯ ವೈದ್ಯರು ಕೆಲವೊಮ್ಮೆ ಇಲ್ಲಿಂದ ಬೇರೆ ಬೇರೆ ಆಸ್ಪತ್ರೆಗೆ ಹೊರಟು ಹೋಗುತ್ತಾರೆ. ಇದನ್ನು ಸರ್ಕಾರ ತಡೆಯಬೇಕಿದೆ. ಇಲ್ಲಿ ಬರುವ ಅನಾರೋಗ್ಯಪೀಡಿತರನ್ನು ಕಾಪಾಡುವುದು ಹಿರಿಯ ವೈದ್ಯರ ಕರ್ತವ್ಯ. ಅವರನ್ನು ಹೊರಗಡೆ ಹೋಗಲು ಬಿಡಬಾರದು. ವೈದ್ಯರ ಕೊರತೆ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ನರ್ಸ್ ಮತ್ತಿತರ ಸಿಬ್ಬಂದಿ ಕೊರತೆ ಇದ್ದು ಅದನ್ನು ಸರಿಪಡಿಸುವ ಕೆಲಸ ಮಾಡಬೇಕು. ಕೆಲವು ಸಂದರ್ಭಗಳಲ್ಲಿ ಸ್ವಚ್ಛತೆಯ ಕೊರತೆ ಇದೆ. ಆ ಕಡೆ ಗಮನ ಕೊಡಬೇಕು. ಶುಶ್ರೂಷೆ ಕೊಡುವ ಜಾಗದಲ್ಲಿ ಸ್ವಚ್ಛತೆಯ ಕೊರತೆಯಿಂದ ರೋಗ ರುಜಿನಗಳು ಹರಡುವ ಹಾಗೆ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು