ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಂದು ಅಹಮದಾಬಾದ್ ಏರ್ಪೋರ್ಟ್ನಲ್ಲಿ ಮುಖಾಮುಖಿಯಾಗಿ ಪರಸ್ಪರ ಕುಶಲೋಪರಿ ವಿಚಾರಿಸಿದ್ರು.
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾದ ಇಬ್ಬರೂ ಕೆಲ ಕಾಲ ಪರಸ್ಪದ ಚರ್ಚೆ ನಡೆಸಿದರು. ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನದ ಅನುಭವಗಳನ್ನ ಆಲಿಸಿದ ಸಚಿವ ಜೋಶಿ (Pralhad Joshi) ಹರ್ಷ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ದುಶ್ಯಂತ್-ಆಶಿಕಾ ನಟನೆಯ `ಗತವೈಭವ’ದ ಫಸ್ಟ್ ಸಾಂಗ್ ರಿಲೀಸ್
ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶದಲ್ಲಿ ನಡೆಸಿದ ಮೊಳಕೆ ಕಾಳುಗಳ ಪ್ರಯೋಗವನ್ನು ಐಐಟಿ ಧಾರವಾಡ ಮತ್ತು ಯುಎಎಸ್ ಧಾರವಾಡ ಸಂಯೋಜಿಸಿ ರೂಪಿಸಿದ್ದರ ಬಗ್ಗೆ ಸಂತಸ ಹಂಚಿಕೊಂಡರು. ಇದನ್ನೂ ಓದಿ: ಸ್ಪರ್ಧಿಗಳು ಮನೆಯೊಳಗೆ ಎಂಟ್ರಿ ಕೊಡ್ತಿರುವ ವೀಡಿಯೋ ರಿಲೀಸ್ ಮಾಡಿದ ಬಿಗ್ಬಾಸ್ ಟೀಂ
ಶುಕ್ಲಾ ಅವರ ಈ ಸ್ಫೂರ್ತಿದಾಯಕ ಪ್ರಯಾಣವು ಬಾಹ್ಯಾಕಾಶ ಯಾನದಲ್ಲಿ ಭಾರತದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಅವರ ಸಾಧನೆಗೆ ಇಡೀ ಭಾರತವೇ ಹೆಮ್ಮೆಪಡುತ್ತದೆ ಎಂದು ಸಚಿವ ಜೋಶಿ ಇದೇ ವೇಳೆ ಸಂತಸ ವ್ಯಕ್ತಪಡಿಸುತ್ತಾ ಶುಕ್ಲಾರನ್ನ ಅಭಿನಂದಿಸಿದರು. ಇದನ್ನೂ ಓದಿ: ಕಾರವಾರ| ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ