ಬೆಂಗಳೂರು: ಬಿಹಾರ ಚುನಾವಣೆಯಲ್ಲಿ (Bihar Election) ಇಂಡಿ ಕೂಟ ಗೆದ್ದರೆ ಪ್ರತಿ ಮನೆಗೆ ಸರ್ಕಾರಿ ಉದ್ಯೋಗ ಕೊಡುವ ಗ್ಯಾರಂಟಿ ಘೋಷಣೆಯನ್ನ ಗೃಹಸಚಿವ ಪರಮೇಶ್ವರ್ (Parameshwar) ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಜನಗಳಿಗೆ ಏನು ಬೇಕಾಗುತ್ತೆ ಅನ್ನೋದನ್ನ ತಿಳಿದುಕೊಂಡು ಚುನಾವಣೆ ಸಮಯದಲ್ಲಿ ಘೋಷಣೆ ಮಾಡುತ್ತೇವೆ. ಎಲ್ಲರೂ ಮಾಡೋದು ಅದೇ ಕೆಲಸ. ನಮ್ಮ ಮೈತ್ರಿ ಪಕ್ಷದವರು ಪ್ರತಿ ಮನೆಗೆ ಉದ್ಯೋಗ ಕೊಡ್ತೀನಿ ಅಂತ ಘೋಷಣೆ ಮಾಡಿದ್ದಾರೆ. ಉದ್ಯೋಗ ಅನ್ನೋದು ಬಹಳ ಮುಖ್ಯ. ಎಲ್ಲಾ ಕಡೆ ನಿರುದ್ಯೋಗದ ಸಮಸ್ಯೆ ಬಹಳ ಕಾಡ್ತಿದೆ. ಯುವಕರಿಗೆ ಉದ್ಯೋಗ ಸಿಕ್ತಿಲ್ಲ ಅನ್ನೋದು ದೊಡ್ಡ ಪ್ರಶ್ನೆ. ಹಾಗಾಗಿ ಚುನಾವಣೆ ಪ್ರಣಾಳಿಕೆ ಮಾಡಬೇಕು ಅಂತ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್
3 ಕೋಟಿ ಉದ್ಯೋಗ ಸೃಷ್ಟಿ ಸಾಧ್ಯನಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಂತ ಹಂತವಾಗಿ ಮಾಡ್ತಾರೆ. ಒಂದೇ ದಿನ ಘೋಷಣೆ ಮಾಡಿ, ಒಂದೇ ದಿನ ಕೆಲಸ ಕೊಡೋಕೆ ಆಗುತ್ತಾ? ನಾವು ಕರ್ನಾಟಕದಲ್ಲಿ 2.5 ಲಕ್ಷ ಖಾಲಿ ಇರೋ ಹುದ್ದೆ ಭರ್ತಿ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹೇಳಿದ್ವಿ. ನಾವು ಒಂದೇ ಬಾರಿ ಹುದ್ದೆ ಭರ್ತಿ ಮಾಡ್ತೀವಿ ಅಂತ ಅಲ್ಲ. ಈಗ ಪ್ರಾರಂಭ ಮಾಡಿದ್ದೇವೆ. ಒಳ ಮೀಸಲಾತಿ ತೊಂದರೆ ಆಗಿತ್ತು. ಈಗ ಅದೆಲ್ಲ ಬಗೆಹರಿಸಿಕೊಂಡು ನೇಮಕಾತಿ ಪ್ರಾರಂಭ ಮಾಡ್ತಿದ್ದೇವೆ. ಪೊಲೀಸ್ ಇಲಾಖೆ ಸೇರಿ ಬೇರೆ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ ಎಂದಿದ್ದಾರೆ.
ಪ್ರಧಾನಿ ಮೋದಿ 2 ಕೋಟಿ ಉದ್ಯೋಗ ಕೊಡ್ತೀನಿ ಅಂದ್ರು. ಅವರು ಕೊಡಲಿಲ್ಲ. ಅವರು ಮಾಡಿದ್ರೆ ನಾವು ಯಾಕೆ ಟೀಕೆ ಮಾಡ್ತಿದ್ವಿ. ಮೋದಿ ಚುನಾವಣೆ ಸಮಯದಲ್ಲಿ ಹೇಳಿದ್ದು ನಿಜ. ಹೇಳಿದ್ದು ಮಾಡಿದ್ರೆ ಯಾರು ಕೇಳ್ತಿದ್ರು? ಅವರು ಮಾಡಿದ್ರೆ ಹೊಗಳುತಿದ್ವಿ. ನಾವು 5 ಗ್ಯಾರಂಟಿ ಕೊಡ್ತೀವಿ ಅಂತ ಹೇಳಿದ್ವಿ ನಾವು ಮಾಡಿದ್ದೇವೆ ಎಂದು ಹೇಳಿದ್ದಾರೆ.
 


 
		 
		 
		 
		 
		
 
		 
		 
		 
		