Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ

Districts

ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ

Public TV
Last updated: October 11, 2025 8:43 am
Public TV
Share
3 Min Read
DK Shivakumar 1
SHARE

– ನ್ಯಾಯಾಲಯದ ತೀರ್ಪಿನ ನಂತರ ಕಸ ವಿಲೇವಾರಿಗಾಗಿ 33 ಪ್ಯಾಕೇಜ್‌ಗಳ ಪ್ರಕ್ರಿಯೆ ಆರಂಭ
– ಪಾಲಿಕೆಗಳ ವತಿಯಿಂದಲೇ ಜಿಬಿಎಯು ಕಸ ವಿಲೇವಾರಿ, ಮೇಲ್ವಿಚಾರಣೆ

ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಶನಿವಾರ ಗುಡ್‌ನ್ಯೂಸ್‌ ಕೊಡ್ತಾರಾ ಡಿಕೆಶಿ – ಎ-ಖಾತಾ ವಿತರಣೆ ಬಗ್ಗೆ ಸುಳಿವು ಕೊಟ್ಟ ಡಿಸಿಎಂ

ಬೆಂಗಳೂರಿನಲ್ಲಿ ಈ ಹಿಂದೆ ಶಾಂತಿನಗರದಲ್ಲಿ ಈ ಪ್ರಯತ್ನಕ್ಕೆ ಮುಂದಾಗಿದ್ದೆವು. ಅದು ಯಶಸ್ವಿಯಾಗಲಿಲ್ಲ. ಹೀಗಾಗಿ, ಜನರು ಈ ವಿಚಾರದಲ್ಲಿ ಹಿಂಜರಿಯುತ್ತಾರೆ. ಅದಕ್ಕಾಗಿ ಈ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ ಎಂದು ತಿಳಿಸಿದರು. ಇದನ್ನೂ ಓದಿ: ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

ನಮ್ಮ ಕ್ಷೇತ್ರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಪರಿಹಾರಬೇಕು. ಇದನ್ನು ಜಿಬಿಎ ನಿಭಾಯಿಸುವುದೇ ಅಥವಾ ಪಾಲಿಕೆ ನಿಭಾಯಿಸುವುದೇ ಎಂದು ಶಾಸಕ ಎ.ಸಿ.ಶ್ರೀನಿವಾಸ್ ಅವರು ಕೇಳಿದಾಗ, ಕಸ ವಿಲೇವಾರಿ ವಿಚಾರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 33 ಪ್ಯಾಕೇಜ್ ಟೆಂಡರ್ ಕರೆಯಲಾಗುವುದು. ಈ ವಿಚಾರ ನ್ಯಾಯಾಲಯದಲ್ಲಿದ್ದು, ಶೀಘ್ರವೇ ತೀರ್ಪು ಬರಲಿದ್ದು, ನಂತರ ಈ ಕಾರ್ಯ ಮಾಡಲಾಗುವುದು. ಕಸ ವಿಲೇವಾರಿ ಜವಾಬ್ದಾರಿ ಸ್ಥಳೀಯ ಪಾಲಿಕೆಗಳು ನಿಭಾಯಿಸಲಿವೆ. ಇದರ ಸಮನ್ವಯತೆಯನ್ನು ಜಿಬಿಎ ಪಾಲಿಸಲಿದೆ ಎಂದು ಹೇಳಿದರು.

ಸಂಪೂರ್ಣ ಆನೇಕಲ್ ಜಿಬಿಎ ವ್ಯಾಪ್ತಿಗೆ ಸೇರಿಸುವುದು ಕಷ್ಟ
ಆನೇಕಲ್ ಶಾಸಕರು ತಮ್ಮ ಪ್ರದೇಶವನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಈಗ ಘೋಷಣೆ ಆಗಿರುವ ಜಿಬಿಎ ವ್ಯಾಪ್ತಿಯಲ್ಲಿ ಮೊದಲು ಚುನಾವಣೆ ಆಗಲಿದೆ. ನಂತರ ಎಲ್ಲೆಲ್ಲಿ ಅಭಿವೃದ್ಧಿ ಆಗಿದೆ ಆ ಜಾಗಗಳನ್ನು ಜಿಬಿಎ ವ್ಯಾಪ್ತಿಗೆ ಸೇರಿಸಲು ಸಮಿತಿ ರಚಿಸಿ ಯಾವ ಪ್ರದೇಶ ಸೇರಿಸಬೇಕು ಎಂದು ತೀರ್ಮಾನ ಮಾಡಲಾಗುವುದು. ಚುನಾವಣೆ ನಂತರ ಈ ಪ್ರಕ್ರಿಯೆಗೆ ಕೈ ಹಾಕಲಾಗುವುದು. ಈಗ ಜಿಬಿಎ ವ್ಯಾಪ್ತಿಗೆ ಸೇರಿಸಿದರೆ ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು ಪಾಲಿಕೆ ಸದಸ್ಯರಾಗುತ್ತಾರೆ. ಇನ್ನು ಅಲ್ಲಿನ ಜನರು ಕೂಡ ಬೆಂಗಳೂರಿನವರಂತೆ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಇಡೀ ಆನೇಕಲ್ ತಾಲೂಕನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿದರೆ 110 ಹಳ್ಳಿಗಳಿಗೆ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಯಾವ ಪ್ರದೇಶ ನಗರದಂತೆ ಅಭಿವೃದ್ಧಿಯಾಗಿದೆಯೋ ಆ ಪ್ರದೇಶಗಳನ್ನು ಮಾತ್ರ ಜಿಬಿಎ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.

ಬೀದಿ ವ್ಯಾಪಾರಿಗಳಿಗೆ ಶೀಘ್ರವೇ ವಾಹನ ವ್ಯವಸ್ಥೆ
ಪರಿಷತ್ ಸದಸ್ಯ ಗೋವಿಂದರಾಜು ಅವರು ಬೀದಿ ವ್ಯಾಪಾರಿಗಳಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಸುದೀರ್ಘ ಚರ್ಚೆ ಮಾಡಿದ್ದು, ಬೀದಿ ವ್ಯಾಪಾರಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದೇವೆ. 30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿಯಾಗಿದ್ದು, ಅವರಿಗೆ ನಾಲ್ಕು ರೀತಿಯ ವಾಹನ ನೀಡಲು ಸಿದ್ಧತೆ ಮಾಡುತ್ತಿದ್ದೇವೆ. ಈ ವಾಹನಗಳಲ್ಲಿ ಅವರು ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಅನಾಥ ವಾಹನಗಳನ್ನು ನಗರದ ಹೊರಗೆ ಸ್ಥಳಾಂತರಿಸಬೇಕು
ಶಾಸಕ ರಿಜ್ವಾನ್ ಅರ್ಷದ್ ಅವರು ಬೆಂಗಳೂರಿನಲ್ಲಿ ಅನಾಥ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಸಂಚಾರ ದಟ್ಟಣೆ ಹಾಗೂ ಕಸದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ನಗರದ ಹೊರಗೆ 10 ಎಕ್ರೆ ಪ್ರದೇಶ ಗುರುತಿಸಿ, ಅಲ್ಲಿ ಈ ವಾಹನಗಳನ್ನು ಸ್ಥಳಾಂತರ ಮಾಡಬೇಕು ಎಂದು ವಿಚಾರ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಜಾಗಗಳನ್ನು ಗುರುತಿಸಿ ಅಲ್ಲಿ ಕಾಂಪೌಂಡ್ ಹಾಕಿ ವಾಹನಗಳನ್ನು ಸ್ಥಳಾಂತರಿಸಲಾಗುವುದು. ಆಗ ಆ ವಾಹನಗಳನ್ನು ಬೇರೆಯವರು ಕದಿಯಲು ಆಗುವುದಿಲ್ಲ ಎಂದರು.

TAGGED:bengaluruDK ShivakumarGBAGBA Meetingಜಿಬಿಎಜಿಬಿಎ ಮೀಟಿಂಗ್‌ಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories
Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema

You Might Also Like

Siddaramaiah DK Shivakumar Cabinet
Bengaluru City

ರಾಜ್ಯದ ಎಲ್ಲ ಕಡೆ ಅಕ್ಕ ಪಡೆ, 33 ಜೀವಾವಧಿ ಶಿಕ್ಷಾ ಬಂಧಿಗಳಿಗೆ ಸನ್ನಡೆ ಬಿಡುಗಡೆಗೆ ಕ್ಯಾಬಿನೆಟ್ ತೀರ್ಮಾನ

Public TV
By Public TV
17 minutes ago
siddaramaiah dk shivakumar
Bengaluru City

ಜಿ ರಾಮ್ ಜಿ ಕಾಯ್ದೆ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್, ಜನತಾ ನ್ಯಾಯಾಲಯದಲ್ಲಿ ಹೋರಾಟಕ್ಕೆ ಕ್ಯಾಬಿನೆಟ್ ತೀರ್ಮಾನ

Public TV
By Public TV
24 minutes ago
Lakshmi Hebbalkar 2 1
Bengaluru City

ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಫೆಬ್ರವರಿ, ಮಾರ್ಚ್‌ ತಿಂಗಳ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌

Public TV
By Public TV
1 hour ago
Mysuru Minor Suicide copy
Crime

ಪ್ರೀತಿಸುವಂತೆ ಪಾಗಲ್‌ ಪ್ರೇಮಿ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ

Public TV
By Public TV
1 hour ago
A Khata
Bengaluru City

ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಕ್ಯಾಬಿನೆಟ್ ಮಹತ್ವದ ತೀರ್ಮಾನ

Public TV
By Public TV
2 hours ago
SIDDARAMAIAH PRATAP SIMHA
Kodagu

ಸಿದ್ದರಾಮಯ್ಯ ಅವ್ರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?