ಗುಂಪು ಚದುರಿಸಲು ಬೂಟ್‍ನಿಂದ ಬಾರಿಸಿದ ಪಿಎಸ್‍ಐ: ವಿಡಿಯೋ ವೈರಲ್

Public TV
1 Min Read
KPL SHOE

ಕೊಪ್ಪಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆಯೇ ಕೈ ಕೈ ಮಿಲಾಯಿಸಿದ ವೇಳೆ ಪಿಎಸ್‍ಐ ಬೂಟ್‍ನಿಂದ ಹೊಡೆದು ದರ್ಪ ತೋರಿಸಿದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.

ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಇಪ್ಪತ್ತೈದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಮಾಧ್ಯಮಗಳಿಗೆ ತಡವಾಗಿ ವಿಡಿಯೋ ಲಭ್ಯವಾಗಿದೆ. ಸಿಂಗನಾಳ ಗ್ರಾಮದ ಶಿವಬಸಪ್ಪ ಹಾಗೂ ವೀರಭದ್ರಪ್ಪ ನಡುವೆ ಭೂವಿವಾದಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದಿತ್ತು. ಆಗ ಗಂಗಾವತಿ ಗ್ರಾಮೀಣ ಠಾಣೆ ಪಿಎಸ್‍ಐ ಪ್ರಕಾಶ ಮಾಳೆ ಬೂಟ್ ನಿಂದ ಸಾರ್ವಜನಿಕವಾಗಿ ಥಳಿಸಿದ್ದಾರೆ. ಬೂಟ್ ನಿಂದ ಹೊಡೆದು ಗುಂಪನ್ನ ಚದುರಿಸಿದ್ದಾರೆ.

ಗುಂಪು ಚದುರಿಸಬೇಕಾದ್ರೆ ಲಾಠಿ ಬಳಸಬೇಕು ಆದ್ರೆ ಪಿಎಸ್‍ಐ ಪ್ರಕಾಶ ಮಾಳೆ ಬೂಟ್ ಬಳಸಿರೋದು ವಿವಾದಕ್ಕೆ ಕಾರಣವಾಗಿದೆ. ಇದೀಗ ಪಿಎಸ್‍ಐ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *