Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಬೋಸರಾಜು ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಬೋಸರಾಜು ಆಹ್ವಾನ

World

ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಬೋಸರಾಜು ಆಹ್ವಾನ

Public TV
Last updated: October 13, 2025 7:14 pm
Public TV
Share
4 Min Read
Project Quantum NS Boseraju
SHARE

ಬರ್ನ್: 2035ರ ವೇಳೆಗೆ ರಾಜ್ಯವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿಪಡಿಸಲು ದಿಟ್ಟ ಹೆಜ್ಜೆಗಳನ್ನು ಕರ್ನಾಟಕ ಸರ್ಕಾರ ಇಟ್ಟಿದೆ. ಬೆಂಗಳೂರು ನಗರದಲ್ಲಿ ಕ್ಯೂ-ಸಿಟಿ (Q- ಕ್ವಾಂಟಮ್‌ ಸಿಟಿ) ಸ್ಥಾಪಿಸಲು ಅಗತ್ಯ ಭೂಮಿಯನ್ನು ನಿಗದಿಪಡಿಸಲಾಗಿದೆ. ಕ್ವಾಂಟಮ್ (Quantum) ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ವಿಫುಲ ಅವಕಾಶಗಳಿದ್ದು, ಸಹಭಾಗಿತ್ವದ ಸಂಶೋಧನೆಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಜೊತೆ ಕೈಜೋಡಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ಎಸ್ ಬೋಸರಾಜು (NS Boseraju) ಕರೆ ನೀಡಿದರು.

ಇಂದು ಸ್ವಿಟ್ಜರ್ಲೆಂಡ್‌ನ ಜಿನೆವಾದ ಬಯೋಟೆಕ್ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದ್ದ ‘ಸ್ವಿಸ್‌ನೆಕ್ಸ್ ಕ್ವಾಂಟಮ್ ಸಮಿಟ್ 2025’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಯಲ್ಲಿ ರಾಜ್ಯ ಸರ್ಕಾರ ಇಟ್ಟಿರುವಂತಹ ದಿಟ್ಟ ಹೆಜ್ಜೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಭಾರತ ಸರ್ಕಾರವು ಸುಮಾರು 6,000 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಕ್ವಾಂಟಮ್ ಮಿಷನ್ (NQM) ಆರಂಭಿಸಿದೆ. ಈ ಮಿಷನ್ ನಾವೀನ್ಯತೆ, ಕೌಶಲ್ಯ ಮತ್ತು ಸ್ಟಾರ್ಟ್-ಅಪ್ ಬೆಂಬಲದ ಮೂಲಕ 50ರಿಂದ 1000ಕ್ಯೂ ಬಿಟ್ ಕ್ವಾಂಟಮ್ ಕಂಪ್ಯೂಟರ್‌ಗಳನ್ನು ಅಭಿವೃದ್ಧಿಪಡಿಸುವುದು, ಸುರಕ್ಷಿತ ಕ್ವಾಂಟಮ್ ಸಂವಹನ ಜಾಲಗಳನ್ನು ನಿರ್ಮಿಸುವುದು ಮತ್ತು ಕಂಪ್ಯೂಟಿಂಗ್, ಸಂವಹನ, ಸಂವೇದನೆ ಮತ್ತು ಸಾಮಗ್ರಿಗಳಿಗಾಗಿ ರಾಷ್ಟ್ರೀಯ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಕರ್ನಾಟಕ ರಾಜ್ಯವು ಈ ರಾಷ್ಟ್ರೀಯ ದೃಷ್ಟಿಕೋನವನ್ನು ಅಳವಡಿಸಿಕೊಂಡಿರುವ ಪ್ರಮುಖ ರಾಜ್ಯವಾಗಿ ಹೊರಹೊಮ್ಮಿದೆ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಅನ್ಯಕೋಮಿನ ವ್ಯಕ್ತಿಯಿಂದ ಪದವೀಧರೆ ಮೇಲೆ ರೇಪ್‌ – ಸಂತ್ರಸ್ತೆ ನೆರವಿಗೆ ಧಾವಿಸಿದ ಮಹಿಳೆ ಹೇಳಿದ್ದೇನು?

Project Quantum NS Boseraju 2

ವಿಶ್ವವಿಖ್ಯಾತ ಸಂಶೋಧನಾ ಸಂಸ್ಥೆಯಾಗಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISc) ಈಗಾಗಲೇ ಕ್ವಾಂಟಮ್ ರಿಸರ್ಚ್ ಪಾರ್ಕನ್ನು ಸ್ಥಾಪಿಸಿದ್ದು, ಕರ್ನಾಟಕ ಸರ್ಕಾರ ಅಗತ್ಯ ಅನುದಾನ ನೀಡಿದೆ. ಈ ಮೂಲಕ ತಂತ್ರಜ್ಞಾನಕ್ಕೆ ಈಗಾಗಲೇ ಮಹತ್ವದ ಬದ್ಧತೆಯನ್ನು ತೋರಿದೆ. ಈ ಸೌಲಭ್ಯವು 55ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳು ಮತ್ತು 13 ಸ್ಟಾರ್ಟ್ಅಪ್‌ಗಳನ್ನು ಬೆಂಬಲಿಸಿದೆ. ವಾರ್ಷಿಕ 1,000ಕ್ಕೂ ಹೆಚ್ಚು ಕ್ವಾಂಟಮ್ ತಜ್ಞರಿಗೆ ತರಬೇತಿ ನೀಡುತ್ತಿದೆ. ದೀರ್ಘಾವಧಿಯಲ್ಲಿ ಇದನ್ನು ಮುಂದುವರಿಸಲು ನಮ್ಮ ಸರ್ಕಾರವು 48 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಮೇಲೆ ಕೇಸ್ ದಾಖಲಿಸಲಿ: ಅಶ್ವಥ್ ನಾರಾಯಣ್

ಜುಲೈ 31 ಹಾಗೂ ಆಗಸ್ಟ್ 1, 2025ರಂದು ಎರಡು ದಿನಗಳ ಕಾಲ ಭಾರತ ದೇಶದ ಮೊದಲ ಕ್ವಾಂಟಮ್ ಇಂಡಿಯಾ ಶೃಂಗಸಭೆಯನ್ನು ಬೆಂಗಳೂರು ನಗರದಲ್ಲಿ ಆಯೋಜಿಸಲಾಯಿತು. ಕ್ವಾಂಟಮ್ ಇಂಡಿಯಾ ಸಮಿಟ್, ಇಬ್ಬರು ನೋಬೆಲ್ ಪ್ರಶಸ್ತಿ ಪುರಸ್ಕೃರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಸಂಶೋಧಕರು, ಹಾಗೂ ಕ್ವಾಂಟಮ್ ಕ್ಷೇತ್ರದ ಉದ್ಯಮಿಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿತ್ತು. ಆ ಸಮ್ಮೇಳನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಕ್ವಾಂಟಮ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಮೀಸಲಿರಿಸುವ ಘೋಷಣೆಯನ್ನು ಮಾಡಿದ್ದಾರೆ. ಸಮಾವೇಶದಲ್ಲಿ ನೀಡಿದ್ದ ಭರವಸೆಯಂತೆ ಕ್ಯೂ-ಸಿಟಿ ನಿರ್ಮಾಣಕ್ಕೆ ಅಗತ್ಯವಿರುವಂತಹ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನೀವು ಪಿತೂರಿಯಲ್ಲಿ ತೊಡಗಿದ್ದೀರಿ – ರೈಲ್ವೇ ಹಗರಣದಲ್ಲಿ ಲಾಲು, ರಾಬ್ಡಿ, ತೇಜಸ್ವಿ ವಿರುದ್ಧ ದೋಷಾರೋಪ ನಿಗದಿ

Project Quantum NS Boseraju 1

ಪ್ರತಿವರ್ಷ ಸುಮಾರು 90 ಸಾವಿರಕ್ಕೂ ಹೆಚ್ಚು ಕ್ವಾಂಟಮ್ ಎಂಜಿನಿಯರ್‌ಗಳನ್ನು ತಯಾರಿಸುವ ಮೂಲಕ ವಿಶ್ವದಲ್ಲೇ ಅತ್ಯತ್ತಮ ಮಾನವ ಸಂಪನ್ಮೂಲ ಹೊಂದಿರುವ ದೇಶವಾಗಿದೆ. ಸಂಶೋಧನೆ ಹಾಗೂ ಆವಿಷ್ಕಾರದಲ್ಲಿ ಭಾರತ ದೇಶ ವಿಶ್ವ ಭೂಫಟದಲ್ಲಿ ತನ್ನದೇ ಆದ ವಿಶೇಷ ಸ್ಥಾನಮಾನ ಹೊಂದಿದೆ. ಕರ್ನಾಟಕ ರಾಜ್ಯ ಕ್ವಾಂಟಮ್ ಕ್ಷೇತ್ರದ ಅಭಿವೃದ್ಧಿಗೆ ರೂಟ್ ಮ್ಯಾಪ್ ಸಿದ್ಧಪಡಿಸಿಕೊಂಡಿದೆ. ಸಿಲಿಕಾನ್ ವ್ಯಾಲಿ ಎಂದೇ ಹೆಸರುವಾಸಿಯಾಗಿರುವ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ವಿಫುಲ ಅವಕಾಶಗಳನ್ನು ಹೊಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಈ ಕ್ಷೇತ್ರಗಳಲ್ಲಿ ಕೈಜೋಡಿಸಲು ಮುಂದಾಗುವರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಕರೆ ನೀಡಿದರು. ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಸಲಿಲ್ಲ ಅಂದ್ರೆ ಮುಖಕ್ಕೆ ಹೊಡೆಯುತ್ತೇನೆ – ಅಧಿಕಾರಿಗಳಿಗೆ ಶಾಸಕ ಬಾಲಕೃಷ್ಣ ತರಾಟೆ

ಶೃಂಗಸಭೆಯ ಸಂದರ್ಭದಲ್ಲಿ, ಸಚಿವ ಎನ್.ಎಸ್. ಬೋಸರಾಜು ಅವರು ʼಕ್ಯೂ-ಸಿಟಿ – ಫೇಸ್ ಒನ್ʼ ಪರಿಕಲ್ಪನೆಯ ವೀಡಿಯೋವನ್ನು ಅನಾವರಣಗೊಳಿಸಿದರು. ಇದು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಾಂಟಮ್ ತಂತ್ರಜ್ಞಾನ ಕ್ಯಾಂಪಸ್‌ನ ಮೊದಲ ನೋಟವನ್ನು ನೀಡುತ್ತದೆ. ಪ್ರಸ್ತಾವಿತ ಕ್ಯೂ-ಸಿಟಿ ಹಾರ್ಡ್ವೇರ್ ಉತ್ಪಾದನಾ ಘಟಕಗಳು, ಸುಧಾರಿತ ಸಂಶೋಧನೆ ಮತ್ತು ಅಭಿವೃದ್ಧಿ ಸೌಲಭ್ಯಗಳು, ಇನ್‌ಕ್ಯುಬೇಶನ್ ಕೇಂದ್ರಗಳು ಮತ್ತು ಪ್ರಯೋಗಾಲಯದಿಂದ ಮಾರುಕಟ್ಟೆಗೆ ಕ್ವಾಂಟಮ್ ನಾವೀನ್ಯತೆಯನ್ನು ಅಭಿವೃದ್ಧಿಗೊಳಿಸಲು ವಿನ್ಯಾಸಗೊಳಿಸಲಾದ ಸಹಯೋಗದ ಕಾರ್ಯಕ್ಷೇತ್ರಗಳನ್ನು ಸಂಯೋಜಿಸುತ್ತದೆ. ಇದನ್ನೂ ಓದಿ: RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಪ್ರಿಯಾಂಕ್‌ಗೆ ಆಗುತ್ತಾ? – ಯತ್ನಾಳ್ ಕಿಡಿ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು, ಐಎಎಸ್, ಭಾರತೀಯ ವಿಜ್ಞಾನ ಸಂಸ್ಥೆ (IISc) ಕ್ವಾಂಟಮ್ ರಿಸರ್ಚ್ ಪಾರ್ಕನ ಅಧ್ಯಕ್ಷರಾದ ಪ್ರೊ. ಅರಿಂದಮ್ ಘೋಷ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಸಮಾವೇಶದಲ್ಲಿ ಭಾಗವಹಿಸಿದೆ. ಇದನ್ನೂ ಓದಿ: ಕೊಡಗು | ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ

TAGGED:GenevakarnatakaNS BoserajuQuantumswitzerlandಎನ್‌ಎಸ್ ಬೋಸರಾಜುಕರ್ನಾಟಕಕ್ವಾಂಟಮ್‌ಜಿನೆವಾಸ್ವಿಟ್ಜರ್ಲೆಂಡ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
11 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
29 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
30 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
47 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
47 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?