ವಿಜಯಪುರ: ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಅಕ್ಷಯ್ ಜುಲಜುಲೆ ಬಂಧಿತ ಆರೋಪಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ
ಭಾನುವಾರ (ಅ.12) ರಾತ್ರಿ ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬ ಇಬ್ಬರ ಹತ್ಯೆ ನಡೆದಿತ್ತು. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗಿಳಿದ ಪೊಲೀಸರು 5 ಜನ ಆರೋಪಿಗಳನ್ನ ಸೆರೆಹಿಡಿಯಲು ಕನ್ನೂರು ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸದ್ಯ ಆರೋಪಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೂ 2023ರಲ್ಲಿ ಈರಣ್ಣಗೌಡ ಎಂಬಾತನ ಮೇಲೆ ಈಗ ಮೃತ ಸಾಗರ್ ಹಾಗೂ ಇಸಾಕ್ ಟೈಲ್ಸ್ನಿಂದ ಹಲ್ಲೆ ನಡೆಸಿದ್ದರು. ಈರಣ್ಣಗೌಡ 8 ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ನಂತರ ಮೃತಪಟ್ಟಿದ್ದ. ಇದೇ ದ್ವೇಷದಿಂದಲೇ ಸದ್ಯ ಅಕ್ಷಯ್ ಹಾಗೂ ಈರಣ್ಣಗೌಡ ಮಕ್ಕಳು ಸೇರಿ ಸಾಗರ್, ಇಸಾಕ್ನ್ನು ಹತ್ಯೆ ಮಾಡಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ – ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಹ ಕಲಾವಿದರು