Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPS ಅಧಿಕಾರಿ ಪೂರನ್‌ ಆತ್ಮಹತ್ಯೆ ಕೇಸ್‌ ತನಿಖೆ ಮಾಡುತ್ತಿದ್ದ ಪೊಲೀಸ್‌ ಅಧಿಕಾರಿ ಕೂಡ ಸೂಸೈಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | IPS ಅಧಿಕಾರಿ ಪೂರನ್‌ ಆತ್ಮಹತ್ಯೆ ಕೇಸ್‌ ತನಿಖೆ ಮಾಡುತ್ತಿದ್ದ ಪೊಲೀಸ್‌ ಅಧಿಕಾರಿ ಕೂಡ ಸೂಸೈಡ್‌

Crime

IPS ಅಧಿಕಾರಿ ಪೂರನ್‌ ಆತ್ಮಹತ್ಯೆ ಕೇಸ್‌ ತನಿಖೆ ಮಾಡುತ್ತಿದ್ದ ಪೊಲೀಸ್‌ ಅಧಿಕಾರಿ ಕೂಡ ಸೂಸೈಡ್‌

Public TV
Last updated: October 14, 2025 7:40 pm
Public TV
Share
2 Min Read
Haryana IPS Officer Puran Kumar Suicide Case
SHARE

ಚಂಡೀಗಢ: ಹರಿಯಾಣ (Haryana IPS Officer) ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಶಾಕಿಂಗ್‌ ಸುದ್ದಿ ಎದುರಾಗಿದೆ. ಇದೇ ಪ್ರಕರಣದ ತನಿಖೆಯಲ್ಲಿದ್ದ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೋಹ್ಟಕ್‌ನ ಸೈಬರ್ ಸೆಲ್‌ನಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದ ಸಂದೀಪ್ ಕುಮಾರ್, ವೈ.ಪೂರನ್ ಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಅವರು‌, ‘ಸತ್ಯಕ್ಕಾಗಿ’ ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜಾತಿ ಕಿರುಕುಳಕ್ಕೆ ಬೇಸತ್ತು IPS ಅಧಿಕಾರಿ ಸಾವು – IAS ಪತ್ನಿ ದೂರು ನೀಡಿದ್ರೂ FIR ದಾಖಲಿಸದ ಪೊಲೀಸರು

ರೋಹ್ಟಕ್‌ನ ಹೊಲವೊಂದರಲ್ಲಿ ಸಂದೀಪ್ ಕುಮಾರ್ ತನ್ನ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವೀಡಿಯೊ ಮತ್ತು ಮೂರು ಪುಟಗಳ ಡೆತ್‌ನೋಟ್‌ ಬಿಟ್ಟು ಹೋಗಿದ್ದಾರೆ. ವೈ.ಪೂರನ್ ಕುಮಾರ್ ಒಬ್ಬ ‘ಭ್ರಷ್ಟ ಪೊಲೀಸ್’ ಆಗಿದ್ದರು. ತಮ್ಮ ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡರು ಎಂದು ಸಂದೀಪ್ ಕುಮಾರ್ ಆರೋಪಿಸಿದ್ದಾರೆ.

Haryana ADGP Y.Poorn Kumar Suicide

ಭ್ರಷ್ಟಾಚಾರದ ಆರೋಪಗಳು ಬೆಳಕಿಗೆ ಬಂದ ನಂತರ ವೈ ಪೂರನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಪೂರನ್ ಕುಮಾರ್ ಅವರ ಗನ್‌ಮ್ಯಾನ್ ಮದ್ಯ ಗುತ್ತಿಗೆದಾರರಿಂದ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಸಂದೀಪ್ ಕುಮಾರ್ ಅವರನ್ನು ಹಿಡಿದಿದ್ದರು ಎಂದು ತಿಳಿದುಬಂದಿದೆ. ಗ್ಯಾಂಗ್‌ಸ್ಟರ್ ಬೆದರಿಕೆ ಹಾಕಿದ ನಂತರ ಗುತ್ತಿಗೆದಾರ ಪೂರನ್ ಅವರನ್ನು ಭೇಟಿಯಾಗಿದ್ದ. ಲಂಚದ ಆರೋಪಗಳು ಬೆಳಕಿಗೆ ಬಂದಾಗ, ಐಪಿಎಸ್ ಅಧಿಕಾರಿ ಅದಕ್ಕೆ ಜಾತಿ ಬಣ್ಣ ನೀಡಲು ಪ್ರಯತ್ನಿಸಿದ್ದರು. ಕೊನೆಗೆ ಭ್ರಷ್ಟಾಚಾರ ಬೆಳಕಿಗೆ ಬರುತ್ತೆಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಪೂರನ್‌ ಅವರನ್ನು ರೋಹ್ಟಕ್ ವ್ಯಾಪ್ತಿಯಲ್ಲಿ ನಿಯೋಜಿಸಿದ ನಂತರ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳನ್ನು ಭ್ರಷ್ಟ ಅಧಿಕಾರಿಗಳಾಗಿ ಬದಲಾಯಿಸಿದರು. ಇವರೆಲ್ಲ ಈ ಜನರು ಫೈಲ್‌ಗಳನ್ನು ನಿರ್ಬಂಧಿಸಿದರು. ಅರ್ಜಿದಾರರಿಗೆ ಕರೆ ಮಾಡಿ ಹಣ ಕೇಳುವ ಮೂಲಕ ಮಾನಸಿಕವಾಗಿ ಹಿಂಸೆ ನೀಡಿದರು. ವರ್ಗಾವಣೆಗೆ ಪ್ರತಿಯಾಗಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಯಿತು ಎಂದು ಸಂದೀಪ್‌ ತಮ್ಮ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಗುಂಡು ಹಾರಿಸಿಕೊಂಡು ಎಡಿಜಿಪಿ ಆತ್ಮಹತ್ಯೆ – ಜಪಾನ್‌ ಪ್ರವಾಸದಲ್ಲಿರೋ ಪತ್ನಿ ಐಎಎಸ್‌ ಅಧಿಕಾರಿ

ಅವರ ಭ್ರಷ್ಟಾಚಾರದ ಬೇರುಗಳು ತುಂಬಾ ಆಳವಾಗಿ ಬೇರೂರಿವೆ. ತಮ್ಮ ವಿರುದ್ಧದ ದೂರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆಸ್ತಿಗಳ ತನಿಖೆಯಾಗಬೇಕು. ಇದು ಜಾತಿ ಸಮಸ್ಯೆಯಲ್ಲ. ಸತ್ಯ ಹೊರಬರಬೇಕು. ಅವರು ಭ್ರಷ್ಟರಾಗಿದ್ದರು ಎಂದು ಸಂದೀಪ್‌ ಗಂಭೀರ ಆರೋಪ ಮಾಡಿದ್ದಾರೆ.

ನಾನು ಈ ಸತ್ಯಕ್ಕಾಗಿ ನನ್ನ ಪ್ರಾಣವನ್ನೇ ತ್ಯಾಗ ಮಾಡುತ್ತಿದ್ದೇನೆ. ನಾನು ಪ್ರಾಮಾಣಿಕತೆಯೊಂದಿಗೆ ನಿಲ್ಲುತ್ತೇನೆ ಎಂದು ನನಗೆ ಹೆಮ್ಮೆ ಇದೆ. ದೇಶವನ್ನು ಜಾಗೃತಗೊಳಿಸಲು ಇದು ಮುಖ್ಯವಾಗಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಐಪಿಎಸ್‌ ಅಧಿಕಾರಿಯಾಗಿದ್ದ ವೈ.ಪೂರನ್‌ ಆತ್ಮಹತ್ಯೆಗೂ ಮುನ್ನ ಆರೋಪ ಮಾಡಿದ್ದ 10 ಪೊಲೀಸ್‌ ಅಧಿಕಾರಿಗಳ ಪೈಕಿ ರೋಹ್ಟಕ್‌ ಪೊಲೀಸ್‌ ಮುಖ್ಯಸ್ಥ ನರೇಂದ್ರ ಬಿಜಾರ್ನಿಯಾ ಹೆಸರು ಕೂಡ ಇತ್ತು. ನರೇಂದ್ರ ಅವರನ್ನು ಸಂದೀಪ್‌ ಹೊಗಳಿದ್ದಾರೆ.

TAGGED:HaryanaIPS Officer Suicide Caseಆತ್ಮಹತ್ಯೆಐಪಿಎಸ್ ಅಧಿಕಾರಿಹರಿಯಾಣ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

SIR
Latest

ಪ.ಬಂಗಾಳ ಹೊರತುಪಡಿಸಿ ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಣೆ

Public TV
By Public TV
17 minutes ago
narendra modi trump
Latest

ಪುಟಿನ್‌ ಭಾರತ ಭೇಟಿ ಬಳಿಕ ಟ್ರಂಪ್‌ಗೆ ಮೋದಿ ಫಸ್ಟ್‌ ಕಾಲ್ – ಇಂಧನ, ವ್ಯಾಪಾರ ಕುರಿತು‌ ದೀರ್ಘ ಚರ್ಚೆ

Public TV
By Public TV
50 minutes ago
Anurag Thakur
Latest

ಲೋಕಸಭೆಯಲ್ಲಿ ನಿಷೇಧಿತ ಇ-ಸಿಗರೇಟ್ ಸೇವನೆ – ಟಿಎಂಸಿ ಸಂಸದರ ವಿರುದ್ಧ ಅನುರಾಗ್ ಠಾಕೂರ್ ಆರೋಪ

Public TV
By Public TV
2 hours ago
Ingaleshwar Swamiji
Districts

ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ – ಸಿಎಂ ಸೇರಿ ಗಣ್ಯರ ಸಂತಾಪ

Public TV
By Public TV
2 hours ago
BDA Operation
Bengaluru City

ಬಿಡಿಎ ಕಾರ್ಯಾಚರಣೆ – ಸುಮಾರು 140 ಕೋಟಿ ರೂ. ಆಸ್ತಿ ವಶ

Public TV
By Public TV
2 hours ago
Siddaramaiah Helicopter
Belgaum

ಸಿದ್ದರಾಮಯ್ಯ ವಾಯುಯಾನಕ್ಕೆ 47 ಕೋಟಿ ಖರ್ಚು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?