Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್‌

World

ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್‌

Public TV
Last updated: October 18, 2025 1:27 pm
Public TV
Share
2 Min Read
Khawaja Asif
SHARE

– ಭಾರತದ ನೆರವಿನಿಂದ ನಮ್ಮ ವಿರುದ್ಧವೇ ತಾಲಿಬಾನ್‌ ಪಿತೂರಿ ಮಾಡ್ತಿದೆ ಎಂದು ಆರೋಪ

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೆ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಪಾಕ್‌ ವಾಯುದಾಳಿ (Pakistan AirStrike) ನಡೆಸಿದ ಬಳಿಕ ಅಫ್ಘಾನಿಸ್ತಾನ ಪ್ರತಿದಾಳಿಗೆ ಮುಂದಾಗಿದೆ. ತಡರಾತ್ರಿ ಪಾಕ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನ್‌ನ 10 ಮಂದಿ ಮೃತಪಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif), ಪಾಕ್‌ನಲ್ಲಿರುವ ಆಫ್ಘನ್ನರು ದೇಶ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನ (Afghanistan) ಸರ್ಕಾರ ನೆರೆಹೊರೆಯವರೊಂದಿಗೆ ಇದ್ದ ಹಳೆಯ ಸಂಬಂಧಗಳನ್ನ ಕಳೆದುಕೊಂಡಿದೆ. ಇಲ್ಲಿನ ದೇಶದ ಸಂಪನ್ಮೂಲಗಳು 2.50 ಕೋಟಿ ಪಾಕಿಸ್ತಾನಿಯರಿಗೆ ಸೇರಿದ್ದೇ ಹೊರತು, ಆಫ್ಘನ್ನರಿಗೆ ಅಲ್ಲ. ಹಾಗಾಗಿ ಕೂಡಲೇ ಆಫ್ಘನ್ನರು ಪಾಕ್‌ ತೊರೆದು ತಾಯ್ನಾಡಿಗೆ ಮರಳಬೇಕು. ಈಗ ಅಲ್ಲಿ ತಮ್ಮದೇ ಸರ್ಕಾರವನ್ನ ಅವರು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಉಲ್ಲಂಘಿಸಿ ಪಾಕ್ ಏರ್‌ಸ್ಟ್ರೈಕ್‌ – ಮೂವರು ಅಫ್ಘಾನ್‌ ಕ್ರಿಕೆಟಿಗರು ಸಾವು; ರಶೀದ್‌ ಖಾನ್‌ ಖಂಡನೆ

Afghanistan Cricketers

ಪಾಕಿಸ್ತಾನ ಹಲವು ವರ್ಷಗಳಿಂದ ತಾಳ್ಮೆ ವಹಿಸುತ್ತಲೇ ಬಂದಿದೆ. ಗಡಿಯಾಚೆಗಿನ ಭಯೋತ್ಪಾದನಾ ಘಟನೆಗಳ ಕುರಿತು 836 ಪ್ರತಿಭಟನಾ ಟಿಪ್ಪಣಿಗಳನ್ನ ಕಳಿಸಿದೆ. ಆದ್ರೆ ಅಫ್ಘಾನ್‌ನಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಇನ್ಮುಂದೆ ನಮ್ಮ ಮನವಿಗಳು ಶಾಂತಿಯುತವಾಗಿರಲ್ಲ. ಪಾಕಿಸ್ತಾನದ ಯಾವುದೇ ನಿಯೋಗಗಳೂ ಕಾಬೂಲ್‌ಗೆ ಹೋಗಲ್ಲ. ಭಯೋತ್ಪಾದನೆಯ ಮೂಲ ಎಲ್ಲಿದ್ದರೂ, ಅದು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಉಗ್ರಕೃತ್ಯಗಳಿಗೆ ಬೆಂಬಲ ನೀಡುವ ಪಾಕ್‌ ಹೇಳಿಕೊಂಡಿದೆ.

ಭಾರತದ ಪ್ರಾಕ್ಸಿ ತಾಲಿಬಾನ್‌
ತಾಲಿಬಾನ್ ಸರ್ಕಾರವು ʻಭಾರತದ ಪ್ರಾಕ್ಸಿʼಯಾಗಿ ಕೆಲಸ ಮಾಡುತ್ತಿದೆ. ಭಾರತದ ನೆರವಿನಲ್ಲಿ ಪಾಕಿಸ್ತಾನದ ವಿರುದ್ಧ ಕಾಬೂಲ್‌ ಆಡಳಿತಾಧಿಕಾರಿಗಳು ಪಿತೂರಿ ನಡೆಸುತ್ತಿದ್ದಾರೆ. ಒಂದು ಕಾಲದಲ್ಲಿ ನಮ್ಮ ರಕ್ಷಣೆಯಲ್ಲಿದ್ದರು, ನಮ್ಮ ನೆಲದಲ್ಲಿ ಅಡಗಿಕೊಂಡಿದ್ದರು ಈಗ ಭಾರತದ ನೆರವಿನಲ್ಲಿ ನಮ್ಮ ವಿರುದ್ಧವೇ ತಿರುಗಿಬಿದ್ದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

pakistani soldiers

ಅಫ್ಘಾನ್ ಯುವ ಕ್ರಿಕೆಟಿಗರ ದುರ್ಮರಣ
ಕ್ರಿಕೆಟ್ ಟೂರ್ನಿಗಾಗಿ ಈ ಪ್ರದೇಶಕ್ಕೆ ಬಂದಿದ್ದ ಮೂವರು ಯುವ ಕ್ರಿಕೆಟ್ ಆಟಗಾರರು ಸಾವನ್ನಪ್ಪಿದ್ದಾರೆ. ಕಬೀರ್, ಸಿಬ್ಘತ್ ಉಲ್ಲಾ ಮತ್ತು ಹರೂನ್ ಸಾವನ್ನಪ್ಪಿದವರು ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ. ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಅಫ್ಘಾನ್ ಕ್ರಿಕೇಟ್ ಮಂಡಳಿ, ಈ ದಾಳಿಯನ್ನು ಪಾಕಿಸ್ತಾನ ಆಡಳಿತದ ಹೇಡಿತನದ ಕೃತ್ಯ ಎಂದು ಬಣ್ಣಿಸಿದೆ.

ತ್ರಿಕೋನ ಟಿ20 ಸರಣಿಯಿಂದ ಹಿಂದೆ ಅಫ್ಘಾನ್
ಘಟನೆ ಬೆನ್ನಲ್ಲೇ ಮುಂದಿನ ತಿಂಗಳು ನಡೆಯಲಿರುವ ಪಾಕಿಸ್ತಾನ ಒಳಗೊಂಡ ತ್ರಿಕೋನ ಟಿ20 ಸರಣಿಯಿಂದ ಹಿಂದೆ ಸರಿಯುತ್ತಿರುವುದಾಗಿಯೂ ಅಫ್ಘಾನ್ ಕ್ರಿಕೆಟ್ ಮಂಡಳಿ ಹೇಳಿದೆ. ನವೆಂಬರ್ 5 ರಿಂದ 29ರ ವರೆಗೆ ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ನಡೆಯಲಿದ್ದ ತ್ರಿಕೋನ ಸರಣಿಯಲ್ಲಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಭಾಗವಹಿಸಬೇಕಾಗಿತ್ತು.

TAGGED:afghanistanAfghanistan CricketerspakistanPakistan AirstrikeRashid Khanಅಫ್ಘಾನಿಸ್ತಾನಕ್ರಿಕೆಟಿಗರುಖವಾಜಾ ಆಸಿಫ್ಟಿ20 ಕ್ರಿಕೆಟ್‌ ಸರಣಿಪಾಕಿಸ್ತಾನವಾಯುದಾಳಿ
Share This Article
Facebook Whatsapp Whatsapp Telegram

Cinema news

Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories
Rajinikanth Padayappa 2
ಪಡೆಯಪ್ಪ ಪಾರ್ಟ್-2 ಬಗ್ಗೆ ತಲೈವಾ ಹೇಳಿದ್ದೇನು?
Cinema Latest Top Stories
V. Shantaram Biopic Tamannaah Bhatia
ನಟಿ ಜಯಶ್ರೀಯಾದ ತಮನ್ನಾ ಭಾಟಿಯಾ
Cinema Latest Top Stories
Toxic teaser yash
ಟಾಕ್ಸಿಕ್‌ ಬಿಡುಗಡೆಯಾಗುವ ಸಮಯದಲ್ಲೇ ಬರಲಿದೆ ಐದು ಬಿಗ್‌ ಬಜೆಟ್‌ ಸಿನಿಮಾಗಳು!
Cinema Latest Sandalwood

You Might Also Like

Vijayapura Office
Districts

ರಾ.ಹೆದ್ದಾರಿ ಅಗಲೀಕರಣಕ್ಕಾಗಿ ಜಮೀನು ವಶಕ್ಕೆ ಪಡೆದು ಅನ್ಯಾಯ – 3 ವರ್ಷ ಕಳೆದ್ರೂ ಪರಿಹಾರ ನೀಡದ್ದಕ್ಕೆ ಎಸಿ ಕಚೇರಿ ಜಪ್ತಿ

Public TV
By Public TV
23 minutes ago
Mantralaya Hundi Counting
Districts

ಕೋಟಿ ಒಡೆಯರಾದ ರಾಯರು – 21 ದಿನದಲ್ಲಿ 3.06 ಕೋಟಿ ಕಾಣಿಕೆ ಸಂಗ್ರಹ

Public TV
By Public TV
59 minutes ago
Manish Tewari
Latest

ಲೋಕಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚೆ – ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಮರಳಲು ವಿಪಕ್ಷಗಳ ಪಟ್ಟು

Public TV
By Public TV
1 hour ago
Rahul Gandhi Lok Sabha
Latest

ಮತ ಕಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ: ರಾಹುಲ್‌

Public TV
By Public TV
1 hour ago
Amit Shah Rajya Sabha
Latest

ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ: ಅಮಿತ್ ಶಾ

Public TV
By Public TV
2 hours ago
Yadagiri Protest 1
Districts

ಹೆರಿಗೆ ವೇಳೆ ಹೊಟ್ಟೆಯಲ್ಲಿಯೇ ಮಗು ಸಾವು – ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?