Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

Court

ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

Public TV
Last updated: October 19, 2025 11:52 am
Public TV
Share
3 Min Read
Kalaburagi Dharwad Benches of the High Court
SHARE

ಕಲಬುರಗಿ: ಚಿತ್ತಾಪುರದಲ್ಲಿ (Chittapur) ಆರ್‌ಎಸ್‌ಎಸ್‌ ಪಥಸಂಚಲನ (RSS Route March) ವಿಚಾರ ಈಗ ಹೈಕೋರ್ಟ್‌ (High Court) ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ.

ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ ಆದೇಶ ಪ್ರಕಟಿಸದೇ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿದೆ.

ವಿಚಾರಣೆ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಪರ ವಕೀಲರು ನ.2 ರಂದು ಪಥಸಂಚಲನ ನಡೆಸಲು ಅನುಮತಿ ನೀಡುವಂತೆ ಕೇಳಿದ್ದಾರೆ. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಹಾಳಾಗಬಹುದು – ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಇಲ್ಲ

ವಿಚಾರಣೆಯಲ್ಲಿ ಏನಾಯ್ತು?
ಅರ್ಜಿದಾರ ಅಶೋಕ್‌ ಪಾಟೀಲ್‌ ಪರವಾಗಿ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ವಾದಿಸಿದರು. ಈ ವೇಳೆ ಆರಂಭದಲ್ಲಿ ಪೀಠ ಪಥಸಂಚಲನಕ್ಕೆ ಅನುಮತಿ ಕೋರಿ ಯಾವ ಪ್ರಾಧಿಕಾರಕ್ಕೆ ಅನುಮತಿ ಕೇಳಬೇಕು? ಯಾವ ಕಾನೂನಿನ ಅಡಿ ಅನುಮತಿ ಕೋರಬೇಕು ಎಂಬ ವಿಚಾರದ ಬಗ್ಗೆ ಮಾತ್ರ ವಾದಿಸಿ ಎಂದು ಸೂಚಿಸಿತು.

ಇದಕ್ಕೆ ಅರುಣ್‌ ಶಾಮ್‌ ಅ.17ಕ್ಕೆ ಚಿತ್ತಾಪುರದ ಕಾರ್ಯಕಾರಿ ಮ್ಯಾಜಿಸ್ಟ್ರೇಟ್‌ಗೆ ಅನುಮತಿ ಕೋರಲಾಗಿತ್ತು. ಆದರೆ ಅ.18 ರಂದು ಈ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಒಂದು ಗುಂಪು ಪಂಥಸಂಚಲನ ನಡೆಸಲು ಅವಕಾಶವಿದೆಯೇ? ಅದು ಪ್ರತಿಭಟನೆಯೇ ಆಗಿರಬೇಕಿಂದಿಲ್ಲ. ಅದು ಮೌನ ಪ್ರತಿಭಟನೆಯಾಗಿರಬಹುದು? ಜನರಲ್ಲಿ ಜಾಗೃತಿ ಮೂಡಿಸಲು ಇಚ್ಛಿಸಬಹುದು? ಇದಕ್ಕೆ ಅನುಮತಿ ಬೇಕೆ? ಹಾಗಾದರೆ ಯಾರಿಂದ ಅನುಮತಿ ಪಡೆಯಬೇಕು? ಯಾವ ಕಾನೂನು ಜಾರಿಯಲ್ಲಿದೆ. ಯಾವ ಕಾನೂನಿನ ನಿಬಂಧನೆಗೆ ನಾವು ಒಳಪಟ್ಟಿದ್ದೇವೆ. ಯಾರಿಗೆ ಅನುಮತಿ ಕೇಳಬೇಕು ಎಂಬುದು ಗೊತ್ತಾಗಬೇಕು. ಇಲ್ಲವಾದಲ್ಲಿ ನಾವು ನಿಯಮವಿಲ್ಲದ ಆಡಳಿತಕ್ಕೆ ಒಳಪಡುತ್ತೇವೆ ಎಂದು ಹೇಳಿತು.

ಇದಕ್ಕೆ ಅರುಣ್‌ ಶ್ಯಾಮ್‌ ಅವರು ಪಥಸಂಚನವನ್ನು ರದ್ದುಪಡಿಸುವುದು ಅವರ ಉದ್ದೇಶವಾಗಿತ್ತು. ಹೀಗಾಗಿ ಅವರು ಅನುಮತಿ ನಿರಾಕರಿಸಿದ್ದಾರೆ ಎಂದು ಉತ್ತರಿಸಿದರು.

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿ, ಬೇರೊಂದು ಸಂಘಟನೆ ಇಂದು ಪಥಸಂಚಲಕ್ಕೆ ಅನುಮತಿ ಕೋರಿದೆ. ಹೀಗಾಗಿ ತಾಲೂಕು ಆಡಳಿತ ಯಾವುದೇ ಸಂಘಟನೆಗೆ ಪಥಸಂಚಲನ ನಡೆಸಲು ಅನುಮತಿ ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ಪ್ರಿಯಾಂಕ್‌ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ – 12 ಪ್ರಶ್ನೆ ಕೇಳಿದ ಸರ್ಕಾರ

ಇದಕ್ಕೆ ಪೀಠ ಎರಡೂ ಸಂಘಟನೆಗಳಿಗೆ ಬೇರೆ ಬೇರೆ ದಿನ ಅನುಮತಿ ನೀಡಿ ಎಂದಾಗ ಅರುಣ್‌ ಶ್ಯಾಮ್‌ ಇದು ಸಾಧ್ಯವಿಲ್ಲ. ಬೇರೆ ಸ್ಥಳ ನೀಡಬಹುದು ಎಂದು ಮನವಿ ಮಾಡಿದರು. ಕೊನೆಗೆ ನವೆಂಬರ್‌ 2 ರಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಅನುಮತಿಸಿದರೆ ಉತ್ತಮ. ಅಷ್ಟೇ ಅಲ್ಲದೇ ರಾಜ್ಯದ್ಯಂತ ಇದೂವರೆಗೆ 250 ಕಡೆ ಪಥಸಂಚಲನ ನಡೆಸಲಾಗಿದೆ. ಎಲ್ಲಿಯೂ ಸಮಸ್ಯೆಯಾಗಿಲ್ಲ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲಾಗುವುದು ಎಂದು ಅರುಣ್‌ ಶ್ಯಾಮ್‌ ಮುಚ್ಚಳಿಕೆ ನೀಡಿದರು.

ಕೊನೆಗೆ ಕೋರ್ಟ್‌ ಯಾವ ರಸ್ತೆ ಮಾರ್ಗ ಪಥಸಂಚಲನ ನಡೆಯಲಿದೆ? ಎಷ್ಟು ಜನ ಭಾಗವಹಿಸುತ್ತಾರೆ ಎಂಬುದನ್ನು ಅರ್ಜಿದಾರರು ಸರ್ಕಾರಕ್ಕೆ ನೀಡಬೇಕು. ಹೊಸದಾಗಿ ಅರ್ಜಿ ಸಲ್ಲಿಸಿ ಪಥ ಸಂಚಲನದ ಮಾಹಿತಿ, ದಿನಾಂಕ ಎಲ್ಲಾ ವಿವರಗಳನ್ನು ಒಳಗೊಂಡ ಮನವಿಯನ್ನು ಅರ್ಜಿದಾರರು ಜಿಲ್ಲಾಧಿಕಾರಿಗೆ ನೀಡಬೇಕು. ಇದರ ಪ್ರತಿಯನ್ನು ಅರ್ಜಿದಾರರು ತಹಶೀಲ್ದಾರ್‌, ಸ್ಥಳೀಯ ಪೊಲೀಸರಿಗೆ ನೀಡಬೇಕು ಎಂದು ಸೂಚಿಸಿತು.

ಎಲ್ಲಾ ಮಾಹಿತಿಯನ್ನು ಪರಿಗಣಿಸಿ ಸರ್ಕಾರ ವರದಿ ಸಲ್ಲಿಸಬೇಕು. ಇಂದು ಅರ್ಜಿಗೆ ಸಂಬಂಧಿಸಿದಂತೆ ಮೆರಿಟ್‌ ಮೇಲೆ ಯಾವುದೇ ಆದೇಶ ನೀಡುವುದಿಲ್ಲ. ಸರ್ಕಾರದ ವರದಿ ಆಧರಿಸಿ ಪ್ರಕರಣ ಪರಿಗಣಿಸಲಾಗುವುದು ಎಂದು ಸೂಚಿಸಿದ ನ್ಯಾಯಾಲಯ ಅ. 24ರ ಮಧ್ಯಾಹ್ನ 3:30 ವಿಚಾರಣೆಯನ್ನು ಮುಂದೂಡಿತು.

TAGGED:ChittapurKalaburagikarnatakarssಆರ್‍ಎಸ್‍ಎಸ್ಕರ್ನಾಟಕಕಲಬುರಗಿಚಿತ್ತಾಪುರಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
16 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
38 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
1 hour ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?