Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ, ಧರ್ಮದ ಹೆಸರಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು; ಮಂಗಳೂರಲ್ಲಿ ಸಿದ್ರಾಮಯ್ಯ ಭಾಷಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಜಾತಿ, ಧರ್ಮದ ಹೆಸರಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು; ಮಂಗಳೂರಲ್ಲಿ ಸಿದ್ರಾಮಯ್ಯ ಭಾಷಣ

Dakshina Kannada

ಜಾತಿ, ಧರ್ಮದ ಹೆಸರಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು; ಮಂಗಳೂರಲ್ಲಿ ಸಿದ್ರಾಮಯ್ಯ ಭಾಷಣ

Public TV
Last updated: October 20, 2025 4:54 pm
Public TV
Share
3 Min Read
Mangaluru
SHARE

– ಯಾವ ಧರ್ಮವೂ ಇನ್ನೊಬ್ಬರನ್ನ ದ್ವೇಷ ಮಾಡಿ ಅಂತ ಹೇಳಲ್ಲ
– ಸೌಹಾರ್ದತೆಯ ಪಾಠ ಹೇಳಿದ ಸಿಎಂ

ಮಂಗಳೂರು: ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು. ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ ಎಂದು ಪುತ್ತೂರು ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah,) ಹೇಳಿದರು.

ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಜನರಿಗೆ ಸೌಹಾರ್ದತೆಯ ಪಾಠ ಮಾಡಿದರು. ಇದನ್ನೂ ಓದಿ: ಮೊದಲ ದಿನ ಸಾಧ್ಯವಾಗದ ಹಾಸನಾಂಬೆ ದರ್ಶನ – ಇಂದು ಮತ್ತೆ ದೇವಾಲಯಕ್ಕೆ ಬಂದ ಸುಳ್ಯ ಶಾಸಕಿ

Mangaluru 2

ಕೆಲವರು 5 ಗ್ಯಾರಂಟಿ ಯೋಜನೆ (Guarantee Scheme) ಟೀಕೆ ಮಾಡ್ತಾರೆ. ಸರ್ಕಾರದ ಬಳಿ ದುಡ್ಡಿಲ್ಲ ಅಂತ, ದುಡ್ಡಿಲ್ಲದಿದ್ದರೆ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಕೊಡೋಕೆ ಆಗ್ತಿತ್ತಾ? ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂಬರ್ ವನ್ ಇತ್ತು. ಆದರೆ ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ. ಏಕೆಂದ್ರೆ ಎತ್ತಿಕಟ್ಟೋರ ಮಕ್ಕಳು ಯಾರೂ ಈ ಜಗಳದಲ್ಲಿ ಇರಲ್ಲ. ಮೇಲ್ಜಾತಿ, ಶ್ರೀಮಂತರ ಮಕ್ಕಳು ಯಾರೂ ಸಾಯಲ್ಲ. ನಾನು ಯಾರ ಮಾತನ್ನೂ ಕೇಳಿಲ್ಲ, ಕಮಿಷನರ್, ಎಸ್ಪಿ ದಕ್ಷರನ್ನ ನೇಮಕ ಮಾಡಿದೆ. ಈಗ ಸುಧಾರಣೆ ಆಗಿಲ್ವಾ? ದಕ್ಷ ಅಧಿಕಾರಿಗಳು ಇದ್ರೆ ಬದಲಾವಣೆ ಸಾಧ್ಯ. ಯಾವತ್ತಿಗೂ ನಾವು ಅಮಾಯಕರ ಮಕ್ಕಳನ್ನ ಸಾಯಿಸೋ ಕೆಲಸ ಮಾಡಬಾರದು. ಬೇರೆ ಧರ್ಮದವರನ್ನ ದ್ವೇಷ ಮಾಡೋ ಕೆಲಸ ಮಾಡಬಾರದು, ಹಾಗಾಗಿ ಪ್ರತಿಯೊಬ್ಬ ವ್ಯಕ್ತಿ ಮನುಷ್ಯರಾಗೋಕೆ ಪ್ರಯತ್ನ ಮಾಡಬೇಕು. ಕೋಮು ಸೌಹಾರ್ದತೆ ಇದ್ದರೆ ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗುತ್ತೆ. ಅದಕ್ಕಾಗಿ ನಾವು ಕೋಮು ಸೌಹಾರ್ದ ಕಾಪಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೌಹಾರ್ದಕ್ಕೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳಿದ್ರೆ ಕಾನೂನು ತಂದು ಕೇಸ್ ಹಾಕ್ತೀವಿ. ಪ್ರಿಯಾಂಕ್ ಖರ್ಗೆ ಮತ್ತು ಹೆಚ್‌.ಕೆ ಪಾಟೀಲ್ ಆ ಕೆಲಸದಲ್ಲಿ ತೊಡಗಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಅಶೋಕ್ ರೈ ಶಾಸಕರಾಗಿ ಬಹಳ ಉತ್ತಮ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಜೊತೆಯಲ್ಲಿ ಟ್ರಸ್ಟ್ ವತಿಯಿಂದ ದೀಪಾವಳಿ ಸಂಧರ್ಭದಲ್ಲಿ ವಸ್ತ್ರದಾನ ಮಾಡ್ತಾ ಇದ್ದಾರೆ. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಇವತ್ತು ಒಂದು ಲಕ್ಷ ಜನರಿಗೆ ದಾನ ಮಾಡ್ತಾ ಇದ್ದಾರೆ. ಅಶೋಕ್ ರೈ ಸಮಾಜದ ಶ್ರೀಮಂತ ಜನರಿಗೆ ಮಾರ್ಗದರ್ಶಕರಾಗಲಿ, ಮನುಷ್ಯ ತಾನು ಗಳಿಸಿದ್ದನ್ನ ನಿರ್ಗತಿಕರಿಗೆ ಹಂಚುವುದು ಬಹಳ ಒಳ್ಳೆಯ ಕೆಲಸ. ಸಮಾಜದಲ್ಲಿ ಶ್ರೀಮಂತರು, ಬಡವರು, ಮೇಲ್ಜಾತಿ, ಕೆಳ ಜಾತಿ ಎಲ್ಲರೂ ಇದ್ದಾರೆ. ಸಮಾನತೆಯ ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದೇ ಇರೋರಿಗೆ ಸಹಾಯ ಮಾಡಬೇಕು. ಬಸವಣ್ಣ ಕೂಡ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳಿದ್ದಾರೆ. ನಮ್ಮಲ್ಲಿ ಅಸಮಾನತೆ, ತಾರತಮ್ಯ ಇದೆ, ಇಲ್ಲಿ ಸಮ ಸಮಾಜ ನಿರ್ಮಾಣ ಆಗಬೇಕು. ನಾನು ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಿಸ್ತಾ ಇದ್ದೇನೆ. ಸಂವಿಧಾನ ಅರಿಯದೇ ಇದ್ದರೆ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದು ತಿಳಿಸಿದರು. ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ

ಯಾವ ಧರ್ಮವೂ ದ್ವೇಷಿಸಿ ಅನ್ನಲ್ಲ
ನಮ್ಮ ಸಮಾಜದಲ್ಲಿ ಅನೇಕ ಜಾತಿ ಮತ್ತು ಧರ್ಮಗಳಿವೆ. ಯಾವ ಧರ್ಮವೂ ದ್ವೇಷ ಮಾಡಿ ಅಂತ ಯಾರಿಗೂ ಹೇಳಲ್ಲ. ಪ್ರತಿಯೊಬ್ಬನ ಪ್ರೀತಿಸಿ ಅಂತ ಹೇಳುತ್ತೆ, ವೈವಿಧ್ಯತೆಯಲ್ಲಿ ಏಕತೆ ಮಾಡಿಕೊಳ್ಳಬೇಕು. ಧರ್ಮದ ತತ್ವ, ಆದರ್ಶ ಪಾಲನೆ ಮಾಡಲಿ, ಸರ್ವ ಜನಾಂಗದ ಶಾಂತಿಯ ತೋಟದ ಬದಲು ದ್ವೇಷ, ಕಚ್ಚಾಟ ಇರಬಾರದು ಎಂದು ಹೇಳಿದರು.

TAGGED:Communal hatredcongressdakshina kannadaMangalurusiddaramaiahಕಾಂಗ್ರೆಸ್ಕೋಮುದ್ವೇಷದಕ್ಷಿಣ ಕನ್ನಡಮಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories

You Might Also Like

iran protest 1
Latest

ಆರ್ಥಿಕ ಅಧಃಪತನ; ಇರಾನ್‌ನಲ್ಲಿ ಹಿಂಸಾಚಾರಕ್ಕೆ 35 ಬಲಿ – 1,200 ಮಂದಿ ಬಂಧನ

Public TV
By Public TV
57 minutes ago
MB Patil
Districts

ಜ.9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ: ಎಂ.ಬಿ ಪಾಟೀಲ್

Public TV
By Public TV
1 hour ago
tumakuru suicide
Crime

ತುಮಕೂರು| ಮಕ್ಕಳೊಂದಿಗೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ

Public TV
By Public TV
1 hour ago
bolero accident chitradurga
Chitradurga

ಚಿತ್ರದುರ್ಗ| ಮರಕ್ಕೆ ಬೊಲೆರೊ ಡಿಕ್ಕಿ – ನಾಲ್ವರು ದುರ್ಮರಣ

Public TV
By Public TV
2 hours ago
kea
Bengaluru City

ಎಲ್ಲ 24 ಪಶು ವೈದ್ಯಕೀಯ ಸೀಟೂ ಹಂಚಿಕೆ: ಕೆಇಎ

Public TV
By Public TV
2 hours ago
modi prithviraj chavan
Latest

ವೆನೆಜುವೆಲಾದಂತೆ ಟ್ರಂಪ್ ಭಾರತದ ಪ್ರಧಾನಿ ಮೋದಿಯನ್ನು ಕಿಡ್ನ್ಯಾಪ್ ಮಾಡ್ತಾರಾ? – ಪೃಥ್ವಿರಾಜ್ ಚವಾಣ್ ವಿವಾದಿತ ಹೇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?