Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಮನೆ, ಜಮೀನುಗಳಿಗೆ ನುಗ್ಗಿದ ನೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಮನೆ, ಜಮೀನುಗಳಿಗೆ ನುಗ್ಗಿದ ನೀರು

Karnataka

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಮನೆ, ಜಮೀನುಗಳಿಗೆ ನುಗ್ಗಿದ ನೀರು

Public TV
Last updated: October 21, 2025 7:36 am
Public TV
Share
2 Min Read
Karnataka Rain
SHARE

– ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದಲ್ಲಿ ಮಳೆ (Rain) ಆರ್ಭಟ ಮತ್ತೆ ಮುಂದುವರಿದಿದೆ. ದೀಪಾವಳಿ ಸಂಭ್ರಮದಲ್ಲಿದ್ದ ಜನತೆಗೆ ಮಳೆರಾಯ ಕೊಂಚ ಬೇಸರ ತರಿಸಿದ್ದಾನೆ. ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದ ಬೆಳೆನಾಶವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಿಡುವಂತೆ ಮಾಡಿದೆ.

ಹಾಸನ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಬಹುತೇಕ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಕೆರೆಯ ಕೋಡಿ ಒಡೆದು ನೂರಾರು ಎಕರೆ ಪ್ರದೇಶದ ರೈತರ ಜಮೀನುಗಳು ಜಲಾವೃತಗೊಂಡಿವೆ. ಅಡಿಕೆ, ತೆಂಗಿನ ತೋಟ, ಹೊಲ, ಗದ್ದೆಗಳಲ್ಲಿ ನೀರು ತುಂಬಿಕೊಂಡಿದೆ.

ಅರಸೀಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ಶಂಕರಲಿಂಗಪ್ಪ ಎಂಬವರ ಮನೆಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ನೀರಿನಲ್ಲಿ ತೇಲಿವೆ. ಹೊಳೆನರಸೀಪುರ ಪಟ್ಟಣದ, ಕಾರ್ಖಾನೆ ಬೀದಿಯಲ್ಲಿರುವ ಮಂಜು ಎಂಬವರ ಮನೆಗೂ ನೀರು ನುಗ್ಗಿ ಅಪಾರ ಹಾನಿ ಆಗಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿ ಮಳೆಗೆ ಹಳ್ಳಕೊಳ್ಳ, ಕೆರೆ ಕಟ್ಟೆಗಳು ತುಂಬಿ ಹರಿದು ಹೊಲ, ಗದ್ದೆಗಳು ಜಲಾವೃತವಾಗಿವೆ.

ಅರಸೀಕೆರೆ ತಾಲೂಕಿನಲ್ಲೂ ಮಳೆ ಅಬ್ಬರಿಸಿದ್ದು, ಮಳೆನೀರು ಆಸ್ಪತ್ರೆ ಒಳಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ರೋಗಿಗಳು ಬೆಡ್‌ನಿಂದ ಕೆಳಗೆ ಇಳಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ರೋಗಿಗಳ ಕಡೆಯವರು ನೀರಿನಲ್ಲೇ ನಿಲ್ಲಬೇಕಾಗಿದೆ.

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನವನ್ನ ಅಸವ್ಯಸ್ತಗೊಳಿಸಿದೆ. ದೀಪಾವಳಿ ಹಬ್ಬದಂದೇ ಅಬ್ಬರಿಸಿದ ಮಳೆಗೆ ಮಲೆನಾಡು ಜನರು ಹೈರಾಣಾಗಿದ್ದಾರೆ. ಜಿಲ್ಲೆಯ ಕಳಸ, ಹೊರನಾಡು, ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು. ಹಳ್ಳದಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ವಾಹನ ಸವಾರರು ಪರದಾಡಿದ್ದಾರೆ.

ಕರಾವಳಿ ಜಿಲ್ಲೆ ಉಡುಪಿಯಲ್ಲೂ ಮಳೆ ಅಬ್ಬರ ಜೋರಾಗಿದೆ. ಗುಡುಗು, ಮಿಂಚು ಸಹಿತ ಸುರಿದ ಭಾರಿ ಮಳೆಗೆ ಉಡುಪಿ ಜನರು ಹೈರಾಣಾಗಿದ್ದಾರೆ. ಬಿರುಗಾಳಿ ಸಹಿತ ಮಳೆಯಾದ ಕಾರಣ. ಜಿಲ್ಲೆಯ ವಿವಿಧೆಡೆ ವಿದ್ಯುತ್‌ನಲ್ಲಿ ವ್ಯತ್ಯಯವಾಗಿದೆ.

ತುಮಕೂರು ಜಿಲ್ಲಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಜನಜೀವನಕ್ಕೆ ಬ್ರೇಕ್ ಹಾಕಿದೆ. ತಿಪಟೂರಿನಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆಗೆ ನುಗ್ಗಿದ ಮಳೆ ನೀರು ಕೃತಕ ಕೆರೆ ಸೃಷ್ಟಿಸಿದೆ. ಕೆರೆಯಂತಾದ ಅಂಡರ್‌ಪಾಸ್‌ನಲ್ಲಿ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣ ಮಾಡಿದೆ. ಅವೈಜ್ಞಾನಿಕ ಕಾಮಗಾರಿಗೆ ವಾಹನ ಸವಾರರು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.

ಇನ್ನು ಚಿತ್ರದುರ್ಗ ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗಿದ್ದು, ಶೀತ ಹೆಚ್ಚಾಗಿ ಹೂವಿನ ಗಿಡಗಳು ಕೊಳೆರೋಗಕ್ಕೆ ತುತ್ತಾಗಿ ಕೊಳೆಯುತ್ತಿವೆ. ದೀಪಾವಳಿಗೆ ಭರ್ಜರಿ ಲಾಭ ಗಳಿಸುವ ನಿರೀಕ್ಷೆಯಲ್ಲಿದ್ದ ರೈತರು ಕಂಗಲಾಗಿದ್ದಾರೆ. ಮಳೆಯಿಂದಾಗಿ ಸಕಾಲಕ್ಕೆ ಹೂವು ಕೊಯ್ಲು ಮಾಡಲಾಗದೇ ಕಲರ್ ಫುಲ್ ಸೆಂಟಿಲ್ ಹೂವು ಜಮೀನಲ್ಲೇ ಕೊಳೆಯುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ.

TAGGED:bengaluruChikkamgaluruChitradurgahassankarnatakaraintumakuruಉಡುಪಿಕರ್ನಾಟಕಚಿಕ್ಕಮಗಳೂರುಚಿತ್ರದುರ್ಗತುಮಕೂರುಬೆಂಗಳೂರುಮಳೆಹಾಸನ
Share This Article
Facebook Whatsapp Whatsapp Telegram

Cinema news

Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood
Dear Husband
Dear Husband ಚಿತ್ರದ ಟೈಟಲ್ ಲಾಂಚ್ ಮಾಡಿದ ಕಿಚ್ಚ
Cinema Latest Sandalwood Top Stories
Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows

You Might Also Like

Gadag Lakkundi 1
Districts

ಲಕ್ಕುಂಡಿಯಲ್ಲಿ ನಿಧಿ ಪತ್ತೆ – ನಿಧಿಯ 1 ಭಾಗ ಕುಟುಂಬಕ್ಕೆ, ಮಗನಿಗೆ ದ್ವಿತೀಯ ಪಿಯುವರೆಗೆ ಉಚಿತ ಶಿಕ್ಷಣದ ಭರವಸೆ

Public TV
By Public TV
23 minutes ago
drug trafficking mangaluru ccb police arrest uganda woman
Bengaluru City

ಮಂಗಳೂರಿನ ಪೆಡ್ಲರ್‌ಗಳಿಗೆ ಮಾದಕವಸ್ತು ಸಪ್ಲೈ – 4 ಕೋಟಿ ಮಾಲು ಸಮೇತ ಸಿಕ್ಕಿಬಿದ್ದ ಉಗಾಂಡ ಮಹಿಳೆ

Public TV
By Public TV
40 minutes ago
Jagdeep Dhankhar
Latest

ಎರಡು ಬಾರಿ ಪ್ರಜ್ಞೆ ತಪ್ಪಿದ ಜಗದೀಪ್‌ ಧನಕರ್‌ – ಏಮ್ಸ್‌ ಆಸ್ಪತ್ರೆಗೆ ದಾಖಲು

Public TV
By Public TV
43 minutes ago
German Chancellor Friedrich Merz 1
Latest

ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಜಂಟಿಯಾಗಿ ಖಂಡಿಸಿದ ಪ್ರಧಾನಿ ಮೋದಿ – ಜರ್ಮನ್ ಚಾನ್ಸಲರ್

Public TV
By Public TV
58 minutes ago
Rajiv Gandhi Housing
Bengaluru City

ಬಡವರ ಸೂರಿನ ಸಬ್ಸಿಡಿಗೆ ಕೊಕ್ಕೆ – ʻಪಬ್ಲಿಕ್ ಟಿವಿʼ ವರದಿ ಬೆನ್ನಲ್ಲೇ ಜ.31 ಕ್ಕೆ ಮನೆ ಭರವಸೆ

Public TV
By Public TV
1 hour ago
Delhi weather
Latest

ಶೀತಗಾಳಿಗೆ ದೆಹಲಿ ತತ್ತರ, ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ – 2.9 ಡಿಗ್ರಿಗಿಳಿದ ಕನಿಷ್ಠ ತಾಪಮಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?