Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದ್ವಿತೀಯ ಪಿಯುಸಿ ಮುಗಿಸಲು ಹಣದ ಸಮಸ್ಯೆ: 1 ವರ್ಷದಿಂದ ಶಿಕ್ಷಣವಿಲ್ದೆ ಮನೆಯಲ್ಲಿರೋ ಬೀದರ್‍ನ ಈ ವಿದ್ಯಾರ್ಥಿಗೆ ಬೇಕಿದೆ ಸಹಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | BELAKU | ದ್ವಿತೀಯ ಪಿಯುಸಿ ಮುಗಿಸಲು ಹಣದ ಸಮಸ್ಯೆ: 1 ವರ್ಷದಿಂದ ಶಿಕ್ಷಣವಿಲ್ದೆ ಮನೆಯಲ್ಲಿರೋ ಬೀದರ್‍ನ ಈ ವಿದ್ಯಾರ್ಥಿಗೆ ಬೇಕಿದೆ ಸಹಾಯ

BELAKU

ದ್ವಿತೀಯ ಪಿಯುಸಿ ಮುಗಿಸಲು ಹಣದ ಸಮಸ್ಯೆ: 1 ವರ್ಷದಿಂದ ಶಿಕ್ಷಣವಿಲ್ದೆ ಮನೆಯಲ್ಲಿರೋ ಬೀದರ್‍ನ ಈ ವಿದ್ಯಾರ್ಥಿಗೆ ಬೇಕಿದೆ ಸಹಾಯ

Public TV
Last updated: May 28, 2017 2:24 pm
Public TV
Share
2 Min Read
BDR BELAKU 2
SHARE

ಬೀದರ್: ಇಲ್ಲಿನ ಗ್ರಾಮೀಣ ಪ್ರತಿಭೆ ಆರ್ಥಿಕ ಸಮಸ್ಯೆಯಿಂದ ಕಾಲೇಜು ಬಿಡುವ ಹಂತದಲ್ಲಿದ್ದಾನೆ. ಮೊದಲನೆ ವರ್ಷದ ವಿಜ್ಞಾನ ಪಿಯುಸಿ ಮುಗಿಸಿದ್ದು, ಎರಡನೇ ವರ್ಷದ ಪಿಯುಸಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ. ಕಡು ಬಡತನದಲ್ಲಿ ಹುಟ್ಟಿದ ಈ ಗ್ರಾಮೀಣ ಪ್ರತಿಭೆಗೆ ವಿದ್ಯಾಭ್ಯಾಸ ಮಾಡಲು ಹಣವಿಲ್ಲದೆ ಒಂದು ವರ್ಷ ಮನೆಯಲ್ಲಿ ಕುಳಿತುಕೊಂಡಿದ್ದಾನೆ. ಇದೀಗ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕವಾದ್ರು ಯಾರಾದ್ರೂ ದಾನಿಗಳು ಸಹಾಯ ಮಾಡುವ ಮೂಲಕ ನನ್ನ ಜೀವನಕ್ಕೆ ಬೆಳಕು ನೀಡುತ್ತಾರೆ ಎಂಬ ಭರವಸೆಯಲ್ಲಿದ್ದಾನೆ.

ಬೀದರ್ ನಗರದ ಅಬ್ದುಲ್ ಫೈಜಾ ದರ್ಗಾ ಕಾಲೋನಿಯ ನಿವಾಸಿಯಾಗಿರುವ ಮಹ್ಮದ್ ಇಲಿಯಾಜ್ ಇದೀಗ ಶಿಕ್ಷಣದಿಂದ ವಂಚಿತನಾಗುತ್ತಿರುವ ಗ್ರಾಮೀಣ ಪ್ರತಿಭೆ. ಎಸ್‍ಎಸ್‍ಎಲ್‍ಸಿ ಯಲ್ಲಿ 55% ಹಾಗೂ ಪ್ರಥಮ ಪಿಯುಸಿಯಲ್ಲಿ 53% ಅಂಕ ತೆಗೆದುಕೊಂಡು ದಾನಿಗಳ ಸಹಾಯದಿಂದ ಓದು ಮುಗಿಸಿದ್ದಾನೆ. ಆದ್ರೆ ಎರಡನೆಯ ವರ್ಷದ ಪಿಯುಸಿ ಮುಗಿಸಲು 12 ಸಾವಿರ ರೂ. ಬೇಕಾಗಿದೆ. ಆದ್ರೆ ಅಷ್ಟೊಂದು ಹಣ ಕೊಡಲು ಅಸಾಧ್ಯವಾಗಿರುವುದರಿಂದ ಮುಂದಿನ ಶಿಕ್ಷಣವನ್ನೇ ಕೈ ಬಿಡುವ ಹಂತದಲ್ಲಿದ್ದಾನೆ.

BDR BELAKU 1

ಈಗಾಗಲೇ ಆರ್ಥಿಕ ಸಮಸ್ಯೆಯಿಂದ ಒಂದು ವರ್ಷ ಮನೆಯಲ್ಲೆ ಕಳೆದಿದ್ದು, ಈಗಲಾದ್ರು ಯಾರಾದ್ರು ದಾನಿಗಳು ಸಹಾಯ ಮಾಡಿದ್ರೆ ಓದಿ ಡಾಕ್ಟರೋ, ಇಂಜಿನಿಯರೋ ಆಗ್ತೀನಿ ಅನ್ನೋ ಕನಸು ಕಾಣುತ್ತಿದ್ದಾನೆ. ಕುಟುಂಬ ಒಂದು ಹೊತ್ತಿನ ಊಟಕ್ಕೆ ಪ್ರತಿದಿನ ನರಕಯಾತನೆ ಪಡುತ್ತಿದ್ದು, ಇರಲು ಒಂದು ಸರಿಯಾದ ನಿವೇಶನ ಇಲ್ಲದೆ ಬಾಡಿಗೆ ನೀಡಿ ಮುರುಕಲು ಮನೆಯಲ್ಲಿ ವಾಸವಾಗಿದ್ದಾರೆ. ಇದಕ್ಕೆ ಪ್ರತಿ ತಿಂಗಳು 1500 ರೂ. ಹಣ ನೀಡುತ್ತಿದ್ದು, ಇನ್ನು ಶಿಕ್ಷಣದ ಮಾತೆಲ್ಲಿ! ನನಗೆ ಓದುವ ಮನಸ್ಸಿದ್ದು, ಯಾರಾದ್ರೂ ದಾನಿಗಳು ಸಹಾಯ ಮಾಡಿದ್ರೆ ಖಂಡಿತ ಓದಿ ಮುಂದೆ ಜೀವನ ರೂಪಿಸಿಕೊಳ್ಳುತ್ತೇನೆ ಅಂತಾ ನೊಂದ ವಿದ್ಯಾರ್ಥಿ ಹೇಳುತ್ತಿದ್ದಾನೆ.

ಮಹ್ಮದ್ ಗೌಸ್ ಮತ್ತು ಅಮೀರಾ ಬಿ ದಂಪತಿಗಳಿಗೆ ಒಟ್ಟು ನಾಲ್ಕು ಜನ ಮಕ್ಕಳಿದ್ದು, ಶಿಕ್ಷಣ ಪಡೆಯದೆ ಕೂಲಿ ಕೆಲಸ ಮಾಡುತ್ತಿದ್ದಾರೆ. ತಂದೆ ಮಹ್ಮದ್ ಗೌಸ್ ಕೂಡಾ ಕುಟುಂಬ ನಿರ್ವಹಣೆ ಮಾಡಲು 14 ಗಂಟೆಗಳ ಕಾಲ ಆಟೋ ಓಡಿಸಿ 200 ರಿಂದ 300 ರೂ. ವರೆಗೆ ಸಂಪಾದನೆ ಮಾಡುತ್ತಾರೆ. ಆದ್ರೆ ಇದು ಜೀವನ ನಿರ್ವಹಣೆಗೆ ಸರಿಯಾಗುತ್ತಿದ್ದು, ಮಕ್ಕಳಿಗೆ ಶಿಕ್ಷಣ ಕೊಡಿಸುವ ಸಾಮಥ್ರ್ಯ ಪೋಷಕರಿಗಿಲ್ಲ. ಹೀಗಾಗಿ ಯಾರಾದ್ರೂ ದಾನಿಗಳು ಸಹಾಯ ಮಾಡಿದ್ರೆ ನನ್ನ ಮಗ ಶಿಕ್ಷಣವನ್ನು ಮುಂದುವರಿಸಬಹುದು ಎಂದು ಬೇಡಿಕೊಳ್ಳುತ್ತಿದ್ದಾರೆ.

ವಿದ್ಯಾರ್ಥಿ ಕೂಡಾ ಒಂದು ವರ್ಷ ಶಿಕ್ಷಣದಿಂದ ದೂರ ಉಳಿದು ಸಮಯ ವ್ಯರ್ಥ ಮಾಡಿದ್ದು, ಈಗಾಲಾದ್ರೂ ಯಾರಾದ್ರೂ ನೆರವಿಗೆ ಬಂದ್ರೆ ಓದುವ ಅಭಿಲಾಷೆ ಇಟ್ಟುಕೊಂಡಿದ್ದಾನೆ. ತಂದೆ ಕೂಡ ಮಗನಿಗೆ ಶಿಕ್ಷಣ ನೀಡಬೇಕು ಎಂದು ಹರಸಾಹಸ ಪಡುತ್ತಿದ್ದು ಸಹಾಯಕ್ಕಾಗಿ ಪರಿ ಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ.

ಹಣವಿದ್ರೂ ಓದಲು ಆಸಕ್ತಿ ಇಲ್ಲದ ಸಾವಿರಾರು ವಿದ್ಯಾರ್ಥಿಗಳ ಮಧ್ಯೆ ಈ ಗ್ರಾಮೀಣ ಪ್ರತಿಭೆಗೆ ಹಣವಿಲ್ಲದೆ ಶಿಕ್ಷಣ ತೊರೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಕಡುಬಡತನದಲ್ಲಿ ನೊಂದು ಬೆಂದಿರುವ ಈ ಕುಡುಂಬಕ್ಕೆ ಮಗನಿಗೆ ಶಿಕ್ಷಣ ನೀಡುವುದು ಅಸಾಧ್ಯವಾದ ಮಾತಾಗಿದೆ. ಒಟ್ಟಿನಲ್ಲಿ ಈ ಗ್ರಾಮೀಣ ಪ್ರತಿಭೆಯ ಸ್ಟೋರಿ ನೋಡಿದ ಯಾರಾದ್ರು ದಾನಿಗಳು ಸಹಾಯ ಮಾಡಿ ಆತನ ವಿದ್ಯಾರ್ಥಿ ಜೀವನಕ್ಕೆ ಬೆಳಕು ನೀಡುವಂತಾಗಲಿ ಅನ್ನೋದು ನಮ್ಮ ಆಶಯ.

https://www.youtube.com/watch?v=QvZFNVubjfs

TAGGED:belakubidareducationPublic TVpucಪಬ್ಲಿಕ್ ಟಿವಿಪಿಯುಸಿಬೀದರ್ಬೆಳಕುಶಿಕ್ಷಣ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
2 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
4 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
31 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
51 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?