ಕೊಪ್ಪಳ: ಅಪಘಾತಕ್ಕೊಳಗಾಗಿ (Accident) ಚಿಕಿತ್ಸೆ ಪಡೆಯುತ್ತಿದ್ದ ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ (Organ Donation) ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳದ (Koppal) ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ ಹಾಸನದ (Hassan) ಸಮೀಪ ಬೈಕ್ ಅಪಘಾತಕ್ಕೊಳಗಾಗಿ, ಆರ್ಯನ್ ಗಾಯಗೊಂಡಿದ್ದ. ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಹುಟ್ಟುಹಬ್ಬದ ದಿನವೇ (ಅ.24) ಯುವಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೆಂಗಳೂರು| ಉಸಿರುಗಟ್ಟಿಸಿ 7 ವರ್ಷದ ಮಗಳ ಕೊಂದ ಮಲತಂದೆ
ಮೃತಪಟ್ಟ ಮಗನ ಕೈ ಹಿಡಿದು ಪೋಷಕರು ಕೇಕ್ ಕತ್ತರಿಸಿ ಕಣ್ಣೀರಿಟ್ಟಿದ್ದಾರೆ. ಬಳಿಕ ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಇಂದು (ಅ.25) ಕೊಪ್ಪಳದ ಕನಕಗಿರಿಯಲ್ಲಿ ಆರ್ಯನ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಲೈಫ್ ಸೆಟಲ್ ಮಾಡ್ತೀನಿ, ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್

