Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಕೋಟಿ ಸರ್ಕಾರಿ ಉದ್ಯೋಗ ಸೃಷ್ಟಿ, 1 ಕೋಟಿ ಲಖ್‌ಪತಿ ದೀದಿಗಳಿಗೆ ನೆರವು: ಬಿಹಾರಿಗಳಿಗೆ NDA ಪ್ರಣಾಳಿಕೆ ಗಿಫ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 1 ಕೋಟಿ ಸರ್ಕಾರಿ ಉದ್ಯೋಗ ಸೃಷ್ಟಿ, 1 ಕೋಟಿ ಲಖ್‌ಪತಿ ದೀದಿಗಳಿಗೆ ನೆರವು: ಬಿಹಾರಿಗಳಿಗೆ NDA ಪ್ರಣಾಳಿಕೆ ಗಿಫ್ಟ್‌

Latest

1 ಕೋಟಿ ಸರ್ಕಾರಿ ಉದ್ಯೋಗ ಸೃಷ್ಟಿ, 1 ಕೋಟಿ ಲಖ್‌ಪತಿ ದೀದಿಗಳಿಗೆ ನೆರವು: ಬಿಹಾರಿಗಳಿಗೆ NDA ಪ್ರಣಾಳಿಕೆ ಗಿಫ್ಟ್‌

Public TV
Last updated: October 31, 2025 11:35 am
Public TV
Share
2 Min Read
NDAs Bihar Manifesto
SHARE

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಸಾಮೂಹಿಕ ವಲಸೆಗೆ ಹೆಸರುವಾಸಿಯಾದ ರಾಜ್ಯದಲ್ಲಿ ಒಂದು ಕೋಟಿ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಮೆಗಾ ಭರವಸೆ ನೀಡಿದೆ.

ಎನ್‌ಡಿಎ ‘ಸಂಕಲ್ಪ ಪತ್ರ’ವನ್ನು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಬೆಳಿಗ್ಗೆ ಪಾಟ್ನಾದಲ್ಲಿ ಮೈತ್ರಿಕೂಟದ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು.

ಮಹಿಳಾ ಸಬಲೀಕರಣ ಯೋಜನೆಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಬಿಹಾರದಲ್ಲಿ ನಾಲ್ಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು, ಏಳು ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣ ಸೇರಿದಂತೆ ಪ್ರಮುಖ ಮೂಲಸೌಕರ್ಯ ಅಭಿಯಾನದ ಜೊತೆಗೆ, ಒಂದು ಕೋಟಿ ಮಹಿಳೆಯರನ್ನು ‘ಲಕ್ಷಪತಿ ದೀದಿ’ಗಳನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಎನ್‌ಡಿಎ ಹೊಂದಿದೆ.

ಪ್ರತಿ ವರ್ಷ ಕಾರ್ಮಿಕರ ಬೃಹತ್ ವಲಸೆಯನ್ನು ಕಾಣುವ ರಾಜ್ಯದಲ್ಲಿ ಉದ್ಯೋಗಾವಕಾಶಗಳ ಬಗ್ಗೆ ಅತಿದೊಡ್ಡ ಘೋಷಣೆಯಾಗಿತ್ತು. ಮತ್ತೊಮ್ಮೆ ಆಯ್ಕೆಯಾದರೆ, ಬಿಹಾರದ ಪ್ರತಿಯೊಬ್ಬ ಯುವಕರಿಗೂ ಕೌಶಲ್ಯ ಆಧಾರಿತ ಉದ್ಯೋಗವನ್ನು ಒದಗಿಸಲು ಕೌಶಲ್ಯ ಜನಗಣತಿಯನ್ನು ನಡೆಸುವುದಾಗಿ ಎನ್‌ಡಿಎ ಭರವಸೆ ನೀಡಿತ್ತು. ಪ್ರತಿ ಜಿಲ್ಲೆಯಲ್ಲಿ ಮೆಗಾ ಕೌಶಲ್ಯ ಕೇಂದ್ರಗಳನ್ನು ಸ್ಥಾಪಿಸಿ ಬಿಹಾರವನ್ನು ಜಾಗತಿಕ ಕೌಶಲ್ಯ ಕೇಂದ್ರವಾಗಿ ರೂಪಿಸುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿ ಮಹಿಳಾ ಉದ್ಯೋಗ ಯೋಜನೆಯ ಮೂಲಕ ಮಹಿಳೆಯರಿಗೆ 2 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು ನೀಡಲಾಗುವುದು. ಎನ್‌ಡಿಎ ಒಂದು ಕೋಟಿ ‘ಲಕ್ಷಪತಿ ದೀದಿ’ಗಳಿಗೆ ನೆರವು ನೀಡುವ ಪ್ರತಿಜ್ಞೆ ಮಾಡಿದೆ. ಇದು ಮಹಿಳೆಯರಿಗೆ ವಾರ್ಷಿಕವಾಗಿ ಒಂದು ಲಕ್ಷ ಸಂಪಾದಿಸಲು ನೆರವಾಗಲಿದೆ. ‘ಮಿಷನ್ ಕೋಟ್ಯಾಧಿಪತಿ’ ಮೂಲಕ ಮಹಿಳಾ ಉದ್ಯಮಿಗಳನ್ನು ಕೋಟ್ಯಾಧಿಪತಿಗಳನ್ನಾಗಿ ಪರಿವರ್ತಿಸುವ ಆಶಯವನ್ನು ಈ ಮೈತ್ರಿಕೂಟ ಹೊಂದಿದೆ.

ಸರ್ಕಾರವು ಏಳು ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸಲು ಮತ್ತು 3,600 ಕಿ.ಮೀ ರೈಲು ಹಳಿಗಳನ್ನು ಆಧುನೀಕರಿಸಲು ಯೋಜಿಸಿದೆ. ಜೊತೆಗೆ ಪಾಟ್ನಾ, ದರ್ಭಂಗಾ, ಪೂರ್ಣಿಯಾ ಮತ್ತು ಭಾಗಲ್ಪುರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಮತ್ತು ನಾಲ್ಕು ನಗರಗಳಲ್ಲಿ ಮೆಟ್ರೋ ಜಾಲವನ್ನು ಸ್ಥಾಪಿಸಲು ಯೋಜಿಸಿದೆ.

ಪ್ರತಿ ಜಿಲ್ಲೆಯಲ್ಲಿ ಕಾರ್ಖಾನೆಗಳು ಮತ್ತು 10 ಹೊಸ ಕೈಗಾರಿಕಾ ಪಾರ್ಕ್‌ಗಳ ನಿರ್ಮಾಣವೂ ಎನ್‌ಡಿಎ ಭರವಸೆಗಳಲ್ಲಿ ಸೇರಿದೆ. ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದರೆ ಕನಿಷ್ಠ 100 MSME ಪಾರ್ಕ್‌ಗಳು ಮತ್ತು 50,000 ಕ್ಕೂ ಹೆಚ್ಚು ಗುಡಿಸಿಲು ಉದ್ಯಮಗಳನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದೆ.

ಪ್ರತಿ ಜಿಲ್ಲೆಯಲ್ಲಿ ವಿಶ್ವ ದರ್ಜೆಯ ವೈದ್ಯಕೀಯ ಸಂಸ್ಥೆ ಮತ್ತು ವೈದ್ಯಕೀಯ ಕಾಲೇಜಿನ ಜೊತೆಗೆ ರಕ್ಷಣಾ ಕಾರಿಡಾರ್ ಮತ್ತು ಸೆಮಿಕಂಡಕ್ಟರ್ ಉತ್ಪಾದನಾ ಪಾರ್ಕ್ ನಿರ್ಮಾಣದ ಭರವಸೆ ನೀಡಲಾಗಿದೆ. ಬಿಹಾರವನ್ನು ದಕ್ಷಿಣ ಏಷ್ಯಾದ ಜವಳಿ ಮತ್ತು ರೇಷ್ಮೆ ಕೇಂದ್ರವಾಗಿ ಸ್ಥಾಪಿಸುವುದಾಗಿ ಎನ್‌ಡಿಎ ಪ್ರತಿಜ್ಞೆ ಮಾಡಿದೆ.

ಪ್ರಣಾಳಿಕೆಯು ರೈತರಿಗೆ ಪ್ರಮುಖ ಭರವಸೆಗಳನ್ನು ನೀಡಿದೆ. ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಖಾತರಿಯ ಜೊತೆಗೆ, ಕಿಸಾನ್ ಸಮ್ಮಾನ್ ನಿಧಿಯನ್ನು 6,000 ರೂ.ನಿಂದ 1,000 ರೂ.ಗೆ ಹೆಚ್ಚಿಸಲಾಗುವುದು. ಮೀನುಗಾರರಿಗೆ ಸಹಾಯವನ್ನು 4,500 ರೂ.ಗಳಿಂದ 9,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದಲ್ಲದೆ, ರಾಜ್ಯದ ಕೃಷಿ-ಮೂಲಸೌಕರ್ಯದಲ್ಲಿ ಸರ್ಕಾರವು 1 ಲಕ್ಷ ಕೋಟಿ ರೂ. ಹೂಡಿಕೆಯ ಭರವಸೆ ನೀಡಿದೆ.

ತಾಯಿ ಜಾನಕಿ ಅಥವಾ ಸೀತೆಯ ಜನ್ಮಸ್ಥಳವನ್ನು ‘ಸೀತಾಪುರಂ’ ಎಂದು ಕರೆಯಲಾಗುವ ವಿಶ್ವ ದರ್ಜೆಯ ಆಧ್ಯಾತ್ಮಿಕ ನಗರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಎನ್‌ಡಿಎ ಭರವಸೆ ನೀಡಿದೆ. ವಿಷ್ಣುಪಾದ ಮತ್ತು ಮಹಾಬೋಧಿ ಕಾರಿಡಾರ್‌ಗಳ ನಿರ್ಮಾಣ ಮತ್ತು ರಾಮಾಯಣ, ಜೈನ, ಬೌದ್ಧ ಮತ್ತು ಗಂಗಾ ಸರ್ಕ್ಯೂಟ್‌ಗಳು ಸಹ ಎನ್‌ಡಿಎಯ ಚುನಾವಣಾ ಪ್ರತಿಜ್ಞೆಗಳಲ್ಲಿ ಸೇರಿವೆ.

TAGGED:Bihar electionsndaNDA Manifestonitish kumarಎನ್‍ಡಿಎಎನ್‌ಡಿಎ ಪ್ರಣಾಳಿಕೆನಿತೀಶ್ ಕುಮಾರ್ಬಿಹಾರ ಚುನಾವಣೆ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
13 minutes ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
21 minutes ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
34 minutes ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
35 minutes ago
Crime Odisha Police
Crime

ಮದ್ವೆ ಹೆಸರಲ್ಲಿ ಪ್ರಿಯಕರನಿಂದ್ಲೇ ರೇಪ್ – ಇತ್ತ ಸಹಾಯಕ್ಕಾಗಿ ಬಂದವನು ಅತ್ಯಾಚಾರಗೈದು, ಕಟ್ಟಡದಿಂದ ಎಸೆದು ಕೊಲೆ

Public TV
By Public TV
53 minutes ago
Hosuru College
Bengaluru City

ಹೊಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಘೋರ ಕೃತ್ಯ – ಕಾರು ಹತ್ತಿಸಿ ಸಹಾಯಕ ಲೇಬರ್ ಇನ್ಸ್‌ಪೆಕ್ಟರ್ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?