– ಎಸ್ಕೇಪ್ ಆಗಲು ಯತ್ನ; ಮೂವರ ಕಾಲಿಗೆ ಗುಂಡೇಟು
ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ (Coimbatore Airport) ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರು ಕಾಮುಕರನ್ನ ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರು ಪೊಲೀಸರ (Coimbatore Police) ಪ್ರಕಾರ, ಬಂಧನ ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರ ಕಾಲಿಗೆ ಗುಂಡು ಹಾರಿಸಲಾಗಿದೆ. ಬಳಿಕ ಆರೋಪಿಗಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ಎಂಜಿನಿಯರ್ಗಳಿಗೆ ಅನಧಿಕೃತ ಕಟ್ಟಡ ತೆರವು ಟಾರ್ಗೆಟ್ – ವಾರಕ್ಕೆ ಒಂದು ಕಡೆಯಂತೆ 8 ವಿಭಾಗದಿಂದ ತೆರವು ಆಪರೇಷನ್

ಏನಿದು ಘಟನೆ?
ಭಾನುವಾರ ರಾತ್ರಿ 20 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನ (Student) ಕೊಯಮತ್ತೂರು ಏರ್ಪೋರ್ಟ್ ಹಿಂದಿರುವ ಬೃಂದಾವನ ನಗರದ ಬಳಿ ಅಪಹರಿಸಿ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿತ್ತು. ಇದನ್ನೂ ಓದಿ: ನಿರ್ಮಾಪಕ, ನಿರ್ದೇಶಕ ಸೇರಿದಾಗ ಮಾತ್ರ ಸ್ಟಾರನ್ನ ಹುಟ್ಟುಹಾಕಬಹುದು: ದರ್ಶನ್ ಹೆಸರೇಳದೇ ಉಮಾಪತಿ ಟಾಂಗ್
ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳು ಅವರ ವಾಹನವನ್ನು ಅಡ್ಡಗಟ್ಟಿ, ಯುವಕನ ಮೇಲೆ ದಾಳಿ ನಡೆಸಿ ವಿದ್ಯಾರ್ಥಿನಿಯನ್ನ ಅಪಹರಿಸಿದ್ದರು. ಬಳಿಕ ವಿದ್ಯಾರ್ಥಿನಿಯನ್ನು ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿ ರಾತ್ರಿ 10.30ರ ಸುಮಾರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಸೋಮವಾರ ಬೆಳಗ್ಗಿನ ಜಾವ ಸಂತ್ರಸ್ತೆಯನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟುಹೋಗಿದ್ದರು. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದ ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು.
ಸಂತ್ರಸ್ತೆ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ದೃಢಪಟ್ಟಿದೆ, ಆಕೆ ಸುರಕ್ಷಿತಳಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಸಿಡಿದ ರೈತರು – ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಕಾಮುಕರ ಬಂಧನಕ್ಕೆ 7 ವಿಶೇಷ ತಂಡಗಳನ್ನ ರಚಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದ್ದರು. ಬಳಿಕ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

