`ಯುಗಪುರುಷ’ ಚಿತ್ರದ ನಟನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ

Public TV
1 Min Read
rmg

ರಾಮನಗರ: ಸ್ಯಾಂಡಲ್‍ವುಡ್‍ನ `ಯುಗಪುರುಷ’ ಚಿತ್ರದ ನಟ ಅರ್ಜುನ್ ದೇವ್ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಯತ್ನಸಿರುವ ಘಟನೆ ಇಂದು ರಾಮನಗರದಲ್ಲಿ ನಡೆದಿದೆ.

DEV 4

ಜಮೀನು ವ್ಯಾಜ್ಯ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಹೊರಟಿದ್ದ ಸಂದರ್ಭದಲ್ಲಿ ನಟನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

DEV 3

ರಾಮನಗರ ತಾಲೂಕಿನ ಮಾಯಗಾನಹಳ್ಳಿ ಸಮೀಪ ಪಿತ್ರಾರ್ಜಿತ ಆಸ್ತಿ ವ್ಯಾಜ್ಯ ಸಂಬಂಧ ಇಂದು ನ್ಯಾಯಾಲದ ವಿಚಾರಣೆಗೆ ನಟ ಅರ್ಜುನ್ ದೇವ್ ಬೆಂಗಳೂರಿನಿಂದ ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹೊರಟಿದ್ರು. ಬೆಂಗಳೂರು-ಮೈಸೂರು ಹೆದ್ದಾರಿಯ ಎಸ್‍ಬಿಐ ಬ್ಯಾಂಕ್ ಪಕ್ಕದ ಕೋರ್ಟ್‍ನ ಮುಂಭಾಗದ ಗೇಟ್ ಸಮೀಪ ಕಾರು ನಿಲ್ಲಿಸುತ್ತಿದ್ದಂತೆ ಎರಡು ಬೈಕ್‍ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ರಾಡ್‍ನಿಂದ ಹಲ್ಲೆಗೆ ಮುಂದಾಗಿದ್ದಾರೆ.

DEV 2

ಕಾರಿನ ಮುಂಭಾಗದ ಗ್ಲಾಸ್‍ಗೆ ರಾಡ್‍ನಿಂದ ಹೊಡೆದಿದ್ದು ಗ್ಲಾಸ್ ಜಖಂಗೊಂಡಿದೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ದುಷ್ಕರ್ಮಿಗಳನ್ನು ಹಿಡಿಯಲು ಮುಂದಾದಾಗ ಸ್ಥಳದಿಂದ ಪರಾರಿಯಾಗಿದ್ದಾರೆ. ಮತ್ತೋರ್ವ ದುಷ್ಕರ್ಮಿ ಲಾಂಗ್ ಹಿಡಿದಿದ್ದ ಎನ್ನಲಾಗ್ತಿದೆ.

DEV 1

ಘಟನೆ ಸಂಬಂಧ ರಾಮನಗರದ ಐಜೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಟ ಅರ್ಜುನ್ ದೇವ್ ಅವರ ವಿಚಾರಣೆ ಮಾಡ್ತಿದ್ದಾರೆ.

DEV 6

DEV 5

Share This Article
Leave a Comment

Leave a Reply

Your email address will not be published. Required fields are marked *