Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Reading: ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ ಮಾಡಲಿ: ಅಶೋಕ್‌ ಆಗ್ರಹ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Bagalkot

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ ಮಾಡಲಿ: ಅಶೋಕ್‌ ಆಗ್ರಹ

Last updated: December 10, 2025 4:24 pm
By
Public TV
Share
7 Min Read

– ತುಂಗಭದ್ರಾ ಜಲಾಶಯದ ಸಮಸ್ಯೆ ಬಗೆಹರಿದಿಲ್ಲ
– ಆಲಮಟ್ಟಿ ಯೋಜನೆಗಾಗಿ ಇಲಾಖೆಗಳ ಅನುದಾನ ಕಡಿತ

ಬೆಳಗಾವಿ: ಉತ್ತರ ಕರ್ನಾಟಕದ (North Karnataka) ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ (Congress) ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆಗ್ರಹಿಸಿದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್‌ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2023 ರ ಪ್ರವಾಹದಲ್ಲಿ ಒಂದೇ ತಿಂಗಳಲ್ಲಿ ಪ್ರವಾಹ ನೀಡಲಾಗಿತ್ತು. ಇಷ್ಟು ವಿಳಂಬ ಮಾಡಿ ಪರಿಹಾರ ನೀಡಬಾರದು ಎಂದರು.

ಎನ್‌ಡಿಆರ್‌ಎಫ್‌ ನಿಯಮ ಪ್ರಕಾರ ಮನೆ ಹಾನಿಗೆ 95,000 ರೂ. ನೀಡಲಾಗುತ್ತದೆ. ಬಿಜೆಪಿ ರಾಜ್ಯ ಸರ್ಕಾರದಿಂದ ನಾಲ್ಕು ಲಕ್ಷ ಸೇರಿಸಿ ಒಟ್ಟು 5 ಲಕ್ಷ ರೂ. ಪರಿಹಾರ ನೀಡಲಾಗಿತ್ತು. ಕಾಂಗ್ರೆಸ್‌ ಸರ್ಕಾರ ಉತ್ತರ ಕರ್ನಾಟಕದಲ್ಲಿ ಮನೆ ಹಾನಿಗೆ ಈ ರೀತಿ ಪರಿಹಾರ ನೀಡದೆ, ಕೇಂದ್ರದ ಪಾಲನ್ನು ಮಾತ್ರ ನೀಡುತ್ತಿದೆ. ಕೇವಲ 95,000 ರೂ. ನಲ್ಲಿ ಮನೆ ಕಟ್ಟಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರದಿಂದ 6,651.15 ಕೋಟಿ ರೂ. ಬೆಳೆ ಹಾನಿ ಪರಿಹಾರವನ್ನು 51.95 ಲಕ್ಷ ರೈತರ ಬ್ಯಾಂಕ್‌ ಖಾತೆಗೆ ಹಾಕಲಾಗಿತ್ತು. ಕಾಂಗ್ರೆಸ್‌ ಸರ್ಕಾರ ಡಿಬಿಟಿ ಬದಲು ಫ್ರೂಟ್‌ ತಂತ್ರಾಂಶ ತಂದು ನಾಲ್ಕು ತಿಂಗಳು ವಿಳಂಬ ಮಾಡಿದೆ. ಈಗ ಪರಿಹಾರ ನೀಡಲು ತಡವಾಗುತ್ತಿದೆ ಎಂದರು.

2014-2022 ರವರೆಗೆ ನರೇಂದ್ರ ಮೋದಿ ಸರ್ಕಾರ 11,603 ಕೋಟಿ ರೂ. ಪರಿಹಾರ ನೀಡಿದ್ದರೆ, ಮನಮೋಹನ್‌ ಸಿಂಗ್‌ ಸರ್ಕಾರ 3,233 ಕೋಟಿ ರೂ. ನೀಡಿತ್ತು. ಅಂದ್ರೆ ನಾಲ್ಕು ಪಟ್ಟು ಅಧಿಕಾರ ಪರಿಹಾರ ದೊರೆತಿದೆ. ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ನೀಡಲಿ ಎಂದು ಕೇಳಿರಲಿಲ್ಲ. ರಾಜ್ಯದ ಖಜಾನೆಯಿಂದಲೇ ಮೊದಲು ಹಣ ನೀಡಲಾಗಿತ್ತು. ಕೇಂದ್ರ ಸರ್ಕಾರಕ್ಕಾಗಿ ಕಾಯಬಾರದು ಎಂಬುದು ನನ್ನ ಅಭಿಪ್ರಾಯ. ಅದೇ ರೀತಿ ಈಗಲೂ ಕಾಂಗ್ರೆಸ್‌ ಸರ್ಕಾರ ಖಜಾನೆಯಿಂದ ಹಣ ತೆಗೆದು ನೀಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಸವ ವಸತಿ ಯೋಜನೆ – ಫಲಾನುಭವಿಗಳಿಗೆ 4 ಲಕ್ಷ ರೂ.ವರೆಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ: ಜಮೀರ್‌

More Read

ಶಿವಮೊಗ್ಗ, ಹಾವೇರಿಯಲ್ಲಿ ಧಾರಾಕಾರ ಮಳೆ
ರಾಜೀನಾಮೆ ನೀಡದೇ ಹೈಡ್ರಾಮಾ – ಮಮತಾ ಸರ್ಕಾರವೇ ವಜಾ
ಬಂಗಾಳದಲ್ಲಿ ʻಕಮಲʼ ಬಿತ್ತಿದ ಕಾಫಿನಾಡಿನ ಕೃಷಿಕ!
ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗುತ್ತಾ ಟಿವಿಕೆ? – ಬೊಮ್ಮಾಯಿ ಕೇಸ್‌ಗೂ ಸರ್ಕಾರ ರಚನೆಗೆ ಏನು ಸಂಬಂಧ?

ಸಿಎಂ ಕಾರಿನಲ್ಲಿ ಬರಬೇಕಿತ್ತು
ಕಲಬುರ್ಗಿ, ಬೀದರ್‌, ವಿಜಯಪುರ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲಿ 117 ಕ್ಕೂ ಅಧಿಕ ಹಳ್ಳಿಗಳು ಜಲಾವೃತವಾಗಿದೆ. 20,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿ, 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. 2,890 ಶಾಲೆಗಳಿಗೆ ಹಾನಿಯಾಗಿದೆ. ಮೈಸೂರಿನಲ್ಲಿ ದಸರಾ ಆಚರಿಸುತ್ತಿದ್ದರೆ, ಉತ್ತರ ಕರ್ನಾಟಕದ ಜನರು ನೀರಿನಲ್ಲಿದ್ದರು. ನಾವೆಲ್ಲರೂ ಕಾರಿನಲ್ಲಿ ಹೋಗಿ ಭೇಟಿ ಮಾಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡಿದರು. ಅದರ ಬದಲು ಕಾರಿನಲ್ಲೇ ಬಂದು ಜನರನ್ನು ಭೇಟಿ ಮಾಡಬಹುದಿತ್ತು. ಎಲ್ಲವೂ ಸರಿ ಇದೆ ಎಂದೇ ಐಎಎಸ್‌ ಅಧಿಕಾರಿಗಳು ಹೇಳುತ್ತಾರೆ. ಮುಖ್ಯಮಂತ್ರಿ ಪ್ರತಿ ಹಳ್ಳಿಗೆ ಹೋಗಬೇಕಿತ್ತು. ಅಧಿಕಾರಿಗಳು ಕೂಡ ಸಮೀಕ್ಷೆಗಾಗಿ ಗ್ರಾಮಗಳಿಗೆ ಬಂದಿಲ್ಲ. ಅನೇಕ ಕಡೆ ಪ್ರವಾಹ ಬಂದಿಲ್ಲ ಎಂದು ತಪ್ಪು ವರದಿ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಯಾವೆಲ್ಲ ಹಳ್ಳಿಗಳಲ್ಲಿ ಪ್ರವಾಹ ಆಗಿದೆ ಎಂದು ತಿಳಿಸಿದ್ದರೂ ಅವರಿಗೆ ಕಂದಾಯ ಇಲಾಖೆಯಿಂದ ಉತ್ತರ ನೀಡಿಲ್ಲ. ರೈತರನ್ನು ಕೈ ಬಿಟ್ಟು ಸರ್ಕಾರ ಅನ್ಯಾಯ ಮಾಡುತ್ತಿದೆ. ಆದ್ದರಿಂದ ಸರ್ಕಾರ ಮತ್ತೊಮ್ಮೆ ಸಮೀಕ್ಷೆ ಮಾಡಲಿ ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಸಂಕಷ್ಟ
ʼಮಂಡಿ ಉದ್ದ ಕಬ್ಬು ಎದೆಮಟ್ಟ ಸಾಲʼ ಎಂಬ ಮಾತಿನಂತೆ ಕಬ್ಬು ಬೆಳೆಗಾರರ ಪರಿಸ್ಥಿತಿ ಇದೆ. ರಾಜ್ಯದಲ್ಲಿ 41 ಲಕ್ಷ ಟನ್‌ ಕಬ್ಬು ಉತ್ಪಾದನೆಯಾಗುತ್ತಿದ್ದು, 9.81 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತಿದೆ. 81 ಸಕ್ಕರೆ ಕಾರ್ಖಾನೆಗಳಿದ್ದು ಎಲ್ಲವೂ ನಷ್ಟದಲ್ಲಿವೆ ಎನ್ನುತ್ತಿದ್ದಾರೆ. ಹೊಸದಾಗಿ 31 ಕಾರ್ಖಾನೆ ಆರಂಭಕ್ಕೆ ಅರ್ಜಿ ಬಂದಿದೆ. ತೂಕ ಯಂತ್ರದಲ್ಲಿ ಮೋಸವಾಗುತ್ತಿದ್ದು, ಶೇ.50 ರಷ್ಟು ಮಾತ್ರ ತೂಕ ಯಂತ್ರಗಳನ್ನು ಅಳವಡಿಸಲಾಗಿದೆ. ಯಂತ್ರ ಕಟಾವಿನಲ್ಲಿ ಶೇ.6 ರಷ್ಟು ಕಡಿತವಾಗುತ್ತಿದೆ. ಹಳೆ ಮಾದರಿ ಆರ್‌ಎಸ್‌ಪಿ, ಎಸ್‌ಎಪಿ ಕಡೆ ಸರ್ಕಾರ ಗಮನ ಕೊಡಬೇಕಿದೆ. ಮುಧೋಳದಲ್ಲಿ 240 ಟ್ರಾಕ್ಟರ್‌ಗಳಿಗೆ ಬೆಂಕಿ ಬಿದ್ದು 1,033 ಟನ್‌ ಕಬ್ಬು ಭಸ್ಮ ಆಗಿತ್ತು. ಪೊಲೀಸ್‌ ಇಲಾಖೆಯ ಭಯವಿದ್ದಿದ್ದರೆ ಇಷ್ಟೆಲ್ಲ ಆಗಲು ಸಾಧ್ಯವಿತ್ತೇ? 32 ಕಬ್ಬು ಬೆಳೆಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಭಾಗದ ರೈತ ಲಕ್ಕಪ್ಪ ಗುಣಕಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಯಾವುದೇ ಸಚಿವರು ಭೇಟಿ ಮಾಡಲಿಲ್ಲ ಎಂದರು.

ತುಂಗಭದ್ರಾ ಜಲಾಶಯದ ಗೇಟ್‌ನಿಂದ ನೀರು ಹರಿದು ಆಂಧ್ರಪ್ರದೇಶಕ್ಕೆ ಹೋಗಿದೆ. 33 ಗೇಟ್‌ ಅಳವಡಿಸದೇ ಇದ್ದಿದ್ದರಿಂದ ಈ ಸಮಸ್ಯೆಯಾಗಿದೆ. ನಾನು ಭೇಟಿ ನೀಡಿದ್ದಾಗ 12 ಕೋಟಿ ರೂ. ಬಿಲ್‌ ಪಾವತಿಯಾಗಿಲ್ಲ ಎಂದು ಗುತ್ತಿಗೆದಾರರು ಹೇಳಿದ್ದರು. ಪಾದಯಾತ್ರೆ, ಬಂದ್‌ ಆಗುತ್ತಲೇ ಇದ್ದರೂ ಸರ್ಕಾರ ಕ್ರಮ ವಹಿಸಲಿಲ್ಲ. ಇದರಿಂದಾಗಿ ಎರಡು ಬೆಳೆ ನಷ್ಟವಾಗಿದೆ. ಆದ್ದರಿಂದ ಪ್ರತಿ ಎಕರೆಗೆ 25,000 ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

 

ಉತ್ತರ ಕರ್ನಾಕದ ಸಮಸ್ಯೆಗಳ ಬಗ್ಗೆ ಡಾ.ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. 6 ತಿಂಗಳಲ್ಲಿ ವರದಿ ನೀಡುತ್ತೇನೆಂದು ಕಳೆದ ಬಾರಿ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಪ್ರೊ.ಗೋವಿಂದರಾವ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿ 12 ತಿಂಗಳಾದರೂ ವರದಿ ಬಂದಿಲ್ಲ. ಕೆಕೆಆರ್‌ಡಿಬಿ ಅನುದಾನದಡಿ ಜಿಲ್ಲಾ ತಾಲೂಕು ಆಸ್ಪತ್ರೆ, ಪಿಎಚ್‌ಸಿ, ಸಿಎಚ್‌ಸಿ ನಿರ್ಮಿಸಲು 900 ಕೋಟಿ ರೂ. ನೀಡಲಾಗುವುದು ಎಂದು ಹೇಳಿದ್ದರು. ಇದರ ಪ್ರಗತಿ ಎಲ್ಲಿಗೆ ಬಂದಿದೆ? ಕೈಗಾರಿಕಾ ಉತ್ತೇಜನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ 216 ಕಾರ್ಖಾನೆಗಳು ಇನ್ನೂ ಸ್ಥಾಪನೆಯ ಹಂತದಲ್ಲೇ ಇವೆ. ವಾಣಿಜ್ಯ ಕೈಗಾರಿಕಾ ಇಲಾಖೆಯಡಿ 221 ಕಾರ್ಖಾನೆಗಳು ಕೂಡ ಇದೇ ಸ್ಥಿತಿಯಲ್ಲಿವೆ. ಹತ್ತಿ ಕಾರ್ಖಾನೆ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ಆಲಮಟ್ಟಿ ಜಲಾಶಯವನ್ನು 224 ಮೀಟರ್‌ಗೆ ಎತ್ತರಿಸಲು 73,603 ಎಕರೆ ಭೂ ಸ್ವಾಧೀನ ಮೊದಲಾದ ಕ್ರಮಗಳ ಬಗ್ಗೆ ಹೇಳಲಾಗಿದೆ. ಆದರೆ ಇವ್ಯಾವುದೂ ಅನುಷ್ಠಾನವಾಗಿಲ್ಲ ಎಂದರು.

ಆಲಮಟ್ಟಿ ಜಲಾಶಯ ಎತ್ತರಿಸುವ ಯೋಜನೆ ಜಾರಿ ಮಾಡಲು ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕಿದೆ ಅಥವಾ ಎಲ್ಲ ಇಲಾಖೆಗಳಲ್ಲಿ ಶೇ.20 ರಷ್ಟು ಅನುದಾನ ಕಡಿತಗೊಳಿಸಬೇಕಿದೆ ಎಂದು ಆರ್ಥಿಕ ಇಲಾಖೆ ಸಲಹೆ ನೀಡಿದೆ. ಈ ಸಲಹೆಯ ಪ್ರಸ್ತಾವ ಸಚಿವ ಸಂಪುಟಕ್ಕೂ ಹೋಗಿದೆ. ನಗರಾಭಿವೃದ್ಧಿ ಇಲಾಖೆಯಲ್ಲಿ 2,176 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 874 ಕೋಟಿ ರೂ., ಪರಿಶಿಷ್ಟ ಜಾತಿ ಕಲ್ಯಾಣದಲ್ಲಿ 833 ಕೋಟಿ ರೂ. ಕಡಿತ ಮಾಡಬೇಕೆಂದು ಪ್ರಸ್ತಾವದಲ್ಲಿದೆ. ಈಗ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತಿನಂತೆಯೇ ನಡೆದುಕೊಳ್ಳಬೇಕಿದೆ. ಒಬ್ಬ ಸಚಿವರೂ ಉತ್ತರ ಕರ್ನಾಟಕಕ್ಕೆ ಹೋಗಿಲ್ಲ. ಅಂತಹ ಸಚಿವರನ್ನು ಬದಲಾಯಿಸಿ ಎಂದರು.

ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,578 ಕೋಟಿ ರೂ. ನೀಡಿದ್ದು, 7,049 ಕೋಟಿ ರೂ. ಬಿಡುಗಡೆಯಾಗಿದೆ. ಶೇ.19.63 ಮಾತ್ರ ಖರ್ಚು ಮಾಡಲಾಗಿದೆ. ಅರಣ್ಯ ಇಲಾಖೆಗೆ 2,440 ಕೋಟಿ ರೂ. ನೀಡಿದ್ದು, 1,215 ಕೋಟಿ ರೂ. ಬಿಡುಗಡೆಯಾಗಿದ್ದು, 791 ಕೋಟಿ ರೂ. ಖರ್ಚು ಮಾಡಲಾಗಿದೆ. ಯುವ ಸಬಲೀಕರಣ ಇಲಾಖೆಗೆ 270 ಕೋಟಿ ರೂ. ನೀಡಿದ್ದು, 145 ಕೋಟಿ ರೂ. ಬಿಡುಗಡೆಯಾಗಿದ್ದು, 40 ಕೋಟಿ ರೂ. (14%) ಖರ್ಚಾಗಿದೆ. ಯೋಜನೆ ಇಲಾಖೆಗೆ 3,157 ಕೋಟಿ ರೂ. ನೀಡಿದ್ದು, 1,081 ಕೋಟಿ ರೂ. (19%) ಖರ್ಚು ಮಾಡಲಾಗಿದೆ. ನಗರಾಭಿವೃದ್ಧಿ ಇಲಾಖೆಗೆ 26,678 ಕೋಟಿ ರೂ. ನೀಡಿದ್ದು, 5366 ಕೋಟಿ ರೂ. (19%) ಖರ್ಚಾಗಿದೆ. ಎಲ್ಲ ಇಲಾಖೆಗಳಲ್ಲೂ ಹಣ ಉಳಿಸಿಕೊಳ್ಳಲಾಗಿದೆ ಎಂದರು.

ಕಲ್ಯಾಣ ಕರ್ನಾಟಕದಲ್ಲಿ 2024-25 ರಲ್ಲಿ 53 ಪದವಿ ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲೂ ಶೂನ್ಯ ಫಲಿತಾಂಶ ಬಂದಿದೆ. 21,000 ಶಿಕ್ಷಕ ಹುದ್ದೆ ಭರ್ತಿ ಮಾಡುತ್ತೇನೆಂದು ಮುಖ್ಯಮಂತ್ರಿ ಹೇಳಿದ್ದರೂ, ಅದು ಆಗಿಲ್ಲ. ಈ ಭಾಗದಲ್ಲಿ 50,244 ಮಕ್ಕಳು ಅಪೌಷ್ಟಿಕತೆಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ತಲಾ ಆದಾಯ 7 ಲಕ್ಷ ರೂ. ಇದ್ದರೆ, ಕಲಬುರ್ಗಿಯಲ್ಲಿ 1.43 ಲಕ್ಷ ರೂ. ಇದೆ ಎಂದರು.

ನಾಯಕತ್ವ ಇಲ್ಲ
ಒಬ್ಬ ರಾಜ ಒಂದು ಹೆಜ್ಜೆ ಮುಂದೆ ಇಟ್ಟರೆ ಸೈನಿಕರು ಎರಡು ಹೆಜ್ಜೆ ಮುಂದಿಡುತ್ತಾರೆ. ಆದರೆ ಇಲ್ಲಿ ನಾಯಕತ್ವವೇ ಇಲ್ಲ. ಒಬ್ಬ ಶಾಸಕ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಇಲ್ಲಿ ನಾಯಕತ್ವದ ಬಗ್ಗೆ ಗೊಂದಲವಿದೆ. ಕೆಲವು ಶಾಸಕರು ಡಿ.ಕೆ.ಶಿವಕುಮಾರ್‌ ಪರವಾಗಿ ಹೇಳಿದರೆ, ಮತ್ತೊಬ್ಬ ಶಾಸಕರು ಡಿಕೆಶಿಗೆ ಕೂಲಿ ಕೊಡಿ ಎಂದು ಕೇಳುತ್ತಾರೆ. ಇಡ್ಲಿ ವಡೆ ತಿಂದರೆ ಸಮಸ್ಯೆ ಬಗೆಹರಿಯಲ್ಲ. ಹಾದಿ ಬೀದಿಯಲ್ಲಿ ನಾನೇ ಸಿಎಂ ಎಂದು ಹೇಳುವುದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರುವುದಿಲ್ಲ. ಸರಿಯಾಗಿ ಕುಳಿತು ಯಾರು ಸಿಎಂ ಎಂದು ತೀರ್ಮಾನಿಸಿ ಎಂದರು.

ಮಂಗಳಮುಖಿಯರಿಗೆ ಮೀಸಲಾತಿ ನೀಡಿ
ಮಂಗಳಮುಖಿಯರು ರಸ್ತೆ ಸಿಗ್ನಲ್‌ಗಳಲ್ಲಿ ನಿಲ್ಲುತ್ತಾರೆ. ಸಮಾಜ ಅವರನ್ನು ಬಹಳ ಕೀಳಾಗಿ ನೋಡುತ್ತಿದೆ. ಆದ್ದರಿಂದ ಮಂಗಳಮುಖಿಯರಿಗೆ ಶೇ.0.5 ರಷ್ಟಾದರೂ ಮೀಸಲಾತಿ ನೀಡುವ ಬಗ್ಗೆ ಸರ್ಕಾರ ಚಿಂತಿಸಲಿ ಎಂದರು.

Share This Article
Facebook Whatsapp Whatsapp Telegram
Previous Article ಬಸವ ವಸತಿ ಯೋಜನೆ – ಫಲಾನುಭವಿಗಳಿಗೆ 4 ಲಕ್ಷ ರೂ.ವರೆಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ: ಜಮೀರ್‌
Next Article ಭೂ ಪರಿವರ್ತನೆ ನಿಯಮಗಳ ಸರಳೀಕರಣಕ್ಕೆ ಕಾಯ್ದೆ ತಿದ್ದುಪಡಿ: ಕೃಷ್ಣ ಬೈರೇಗೌಡ
Cinema News
ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್‌
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ

Popular News

ಮೇ 10ರಂದು ಬೆಂಗಳೂರು ಜನತೆಯ ಪರವಾಗಿ ಮೋದಿಗೆ ಅಭಿನಂದನೆ: ಆರ್.ಅಶೋಕ್
ಜೋಡಿ ಕೊಲೆ ಸಾಕ್ಷಿ ಹೇಳಲು ಹೋಗಬೇಕಿದ್ದವನ ಶವ ಮರದಲ್ಲಿ ಪತ್ತೆ!