ಹಾಸನ: ಕಾಡಾನೆಗಳಾದ ಭೀಮಾ ಹಾಗೂ ಕ್ಯಾಪ್ಟನ್ ನಡುವಿನ ಭೀಕರ ಕಾಳಗದಲ್ಲಿ ಭೀಮಾ ಒಂದು ದಂತ ಕಳೆದುಕೊಂಡಿರುವ ಘಟನೆ ಬೇಲೂರು ತಾಲ್ಲೂಕಿನ ಜಗಬೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎರಡು ದೈತ್ಯಾಕಾರದ ಕಾಡಾನೆಗಳು ಮದದಲ್ಲಿದ್ದವು. ಇಂದು ಜಗಬೋರನಹಳ್ಳಿ ಗ್ರಾಮದ ಬಳಿ ಭೀಮಾ ಹಾಗೂ ಕ್ಯಾಪ್ಟನ್ ಎದುರಾಗಿ ಭೀಕರ ಕಾಳಗ ನಡೆಸಿವೆ. ಕಾಳಗದ ವೇಳೆ ಸಿಟ್ಟಿನಲ್ಲಿ ಭೀಮಾ ಮರಕ್ಕೆ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಭೀಮನ ಒಂದು ದಂತ ಮುರಿದು ಬಿದ್ದಿದೆ. ಇದನ್ನೂ ಓದಿ: Ramanagara | ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆ ಸಾವು
ದಂತ ಕಳೆದುಕೊಂಡು ಒಂಟಿಸಲಗ ಭೀಮಾ ಘೀಳಿಡುತ್ತಿದ್ದು, ಭೀಮನ ಸೊಂಡಿಲಿನ ಬಳಿ ರಕ್ತ ಸುರಿಯುತ್ತಿದೆ. ಕಾಫಿ ತೋಟದಲ್ಲಿ ನಿಂತು ಭೀಮಾ ನರಳಾಡಿದ. ಕಾಳಗದಲ್ಲಿ ಕ್ಯಾಪ್ಟನ್ಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಕಾಡಾನೆ ಭೀಮಾ ಮಲೆನಾಡು ಭಾಗದ ಜನರ ಪ್ರೀತಿ ಪಾತ್ರವಾಗಿದ್ದಾನೆ. ದಂತ ಮುರಿದುಕೊಂಡಿದ್ದನ್ನು ಕಂಡು ಜನರು ಮರುಕಪಟ್ಟಿದ್ದಾರೆ.

