Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌!

Sports

ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌!

Public TV
Last updated: November 12, 2025 2:48 pm
Public TV
Share
3 Min Read
RCB Champions
SHARE

ಮುಂಬೈ: 17 ವರ್ಷಗಳ ವನವಾಸದ ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಮಣ್ಣುಪಾಲಾಯಿತು. ಈ ದುಃಖದಿಂದ ಅಭಿಮಾನಿಗಳು (RCB Fans) ಹೊರಬರುತ್ತಿರುವಾಗಲೇ ಮತ್ತೊಂದು ಶಾಕ್‌ ಎದುರಾಗಿದೆ.

ಹೌದು. ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್‌ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: IPL 2026 | ಡಿಸೆಂಬರ್‌ನಲ್ಲಿ ಭಾರತದಲ್ಲೇ ಮಿನಿ ಹರಾಜು – ರಿಟೇನ್‌ ಪಟ್ಟಿ ಬಿಡುಗಡೆಗೆ ನ.15 ಡೆಡ್‌ಲೈನ್‌

rcb stampede

ಸಾಮಾನ್ಯವಾಗಿ ಚಾಂಪಿಯನ್‌ ಆಗಿ ಹೊರಹೊಮ್ಮಿದ ಫ್ರಾಂಚೈಸಿಗಳ ತವರು ಕ್ರೀಡಾಂಗಣದಲ್ಲಿ ಮರು ವರ್ಷದ ಐಪಿಎಲ್‌ ಟೂರ್ನಿ ಉದ್ಘಾಟನೆ ನಡೆಯುತ್ತದೆ. ಹಾಗೆಯೇ 19ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಬೆಂಗಳೂರಿನಲ್ಲಿ (Bengaluru) ನಡೆಯಬೇಕಿತ್ತು. ಆದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಿಂದಲೇ ಟೂರ್ನಿ ಎತ್ತಂಗಡಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆಯೂ ಹಲವು ಕಾರಣಗಳಿಗಾಗಿ ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್ ತಮ್ಮ ತವರು ಮೈದಾನವನ್ನ ಬದಲಾಯಿಸಿಕೊಂಡಿದ್ದವು. 2009 ರಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭದ್ರತಾ ಕಾರಣಗಳಿಗಾಗಿ ಇಡೀ ಟೂರ್ನಿಯನ್ನು ದಕ್ಷಿಣ ಆಫ್ರಿಕಾಗೆ ಸ್ಥಳಾಂತರಿಸಲಾಗಿತ್ತು. 2022ರಲ್ಲಿ ಕೋವಿಡ್ ಕಾರಣಗಳಿಗಾಗಿ ಟೂರ್ನಿ ದುಬೈಗೆ ಶಿಫ್ಟ್‌ಆಗಿತ್ತು. ಆಗ ಆರ್‌ಸಿಬಿ ಸೇರಿದಂತೆ ಎಲ್ಲಾ ತಂಡಗಳೂ ತಮ್ಮ ತವರು ಕ್ರೀಡಾಂಗಣವನ್ನ ತೊರೆದಿದ್ದವು. ಆದರೆ ಕಳೆದ ಬಾರಿಯ ಕಾಲ್ತುಳಿತ ದುರಂತ ಪ್ರಕರಣ ಈಗ ಆರ್‌ಸಿಬಿ ತವರು ನೆಲವನ್ನ ತೊರೆಯುವಂತೆ ಮಾಡಿದೆ. ಇದನ್ನೂ ಓದಿ: ದೆಹಲಿ ಸ್ಫೋಟದ ಬಾಧಿತರಿಗೆ ನಮ್ಮ ಪ್ರಾರ್ಥನೆ: ಆರ್‌ಸಿಬಿ

Vidhasoudha RCB Honour

ಪುಣೆಯಲ್ಲಿ ಪಂದ್ಯ:
ವರದಿಗಳ ಪ್ರಕಾರ, ಆರ್‌ಸಿಬಿ ತನ್ನ ಎಲ್ಲಾ ತವರು ಪಂದ್ಯಗಳನ್ನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (MCA) ಕ್ರೀಡಾಂಗಣದಲ್ಲಿ ಆಡುವ ಸಾಧ್ಯತೆಯಿದೆ. ಈ ಕುರಿತು MCA ಕಾರ್ಯದರ್ಶಿ ಕಮಲೇಶ್ ಪೈ ಮಾತನಾಡಿ, ಪುಣೆಯಲ್ಲಿ RCB ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಬೆಂಗಳೂರಿನಲ್ಲಿ ನಡೆದ ದುರಂತದ ಕಾರಣದಿಂದಾಗಿ ಅಲ್ಲಿ ಪಂದ್ಯಗಳನ್ನು ಆಯೋಜಿಸಲು ಸಮಸ್ಯೆ ಎದುರಾಗಿದೆ. ಆದ್ದರಿಂದ ಅವರು ಬೇರೆ ಕ್ರೀಡಾಂಗಣ ಹುಡುಕುತ್ತಿದ್ದಾರೆ. ನಮ್ಮ ಕ್ರೀಡಾಂಗಣವನ್ನು ಒದಗಿಸಲು ನಾವು ಮುಂದೆ ಬಂದಿದ್ದೇವೆ. ಪ್ರಾಥಮಿಕ ಚರ್ಚೆಗಳು ನಡೆದಿವೆ. ಕೆಲವು ತಾಂತ್ರಿಕ ವಿಷಯಗಳನ್ನು ಪರಿಹರಿಸಬೇಕಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಪುಣೆ ಆರ್‌ಸಿಬಿಯ ಪಂದ್ಯಗಳನ್ನು ಆಯೋಜಿಸಲಿದೆ ಎಂದು ತಿಳಿಸಿದ್ದಾರೆ.

Chinnaswamy Stampede 1

ಪುಣೆಗೆ ಶಿಫ್ಟ್‌ ಯಾಕೆ?
ಪ್ರಸಕ್ತ ವರ್ಷದ ಜೂನ್‌ 4ರಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ಸಂಭವಿಸಿದ ಕಾಲ್ತುಳಿತ ದುರಂತವೇ ಟೂರ್ನಿ ಸ್ಥಳಾಂತರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಜೂನ್‌ 3ರ ರಾತ್ರಿ ಐಪಿಎಲ್‌ ಟ್ರೋಫಿ ಗೆದ್ದು 17 ವರ್ಷಗಳ ವನವಾಸಕ್ಕೆ ಅಂತ್ಯ ಹಾಡಿತ್ತು. ಮರುದಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದ ದುರಂತ ನಡೆದು 11 ಜನ ಅಭಿಮಾನಿಗಳು ಪ್ರಾಣ ಕಳೆದುಕೊಂಡರು. ಈ ಘಟನೆಯಿಂದ ಸುರಕ್ಷತೆ ಬಗ್ಗೆ ಕಳವಳ ಹೆಚ್ಚಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣವನ್ನು ದೊಡ್ಡ ಪ್ರಮಾಣದ ಕಾರ್ಯಕ್ರಮಗಳಿಗೆ ಸೂಕ್ತವಲ್ಲ ಮತ್ತು ಅಸುರಕ್ಷಿತ ಎಂದು ಕರ್ನಾಟಕ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಹೇಳಿತ್ತು. ಇದನ್ನೂ ಓದಿ: ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗರು!

RCB Win 05

ಈ ಹಿಂದೆ ಮಹಿಳಾ ವಿಶ್ವಕಪ್‌ ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧಾರ ತೆಗೆದುಕೊಂಡಿತ್ತು. ನಂತರ ಪಂದ್ಯಗಳನ್ನು ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಬೆಂಗಳೂರು ಪೊಲೀಸರು ಚಿನ್ನಸ್ವಾಮಿಯಲ್ಲಿ ಮೈದಾನದಲ್ಲಿ ಆಡಿಸಲು 17 ಷರತ್ತುಗಳನ್ನು ಸಹ ವಿಧಿಸಿದ್ದರು. ಒಂದು ವೇಳೆ ಬೆಂಗಳೂರಿನಲ್ಲಿ ಆಡಿಸಿ ಮತ್ತೆ ಸಮಸ್ಯೆಯಾದರೆ ಮತ್ತೊಂದು ಕಪ್ಪು ಚುಕ್ಕೆ ಬರದೇ ಇರಲು ತನ್ನ ಎಲ್ಲಾ ಪಂದ್ಯಗಳನ್ನು ಪುಣೆಯಲ್ಲಿ ಆಡಲು ಆರ್‌ಸಿಬಿ ಆಡಳಿತ ಮಂಡಳಿ ಮುಂದಾಗಿದೆ ಎನ್ನಲಾಗುತ್ತಿದೆ.

ಪುಣೆಯಲ್ಲಿ ತನ್ನ ಪಂದ್ಯಗಳನ್ನು ಶಿಫ್ಟ್‌ ಮಾಡುವ ಬಗ್ಗೆ ಇಲ್ಲಿಯವರೆಗೆ ಆರ್‌ಸಿಬಿ ಅಧಿಕೃತವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ಜಯ್‌ ಶಾ ಮಧ್ಯಪ್ರವೇಶದಿಂದ ಪ್ರತೀಕಾ ರಾವಲ್‌ಗೆ ಸಿಕ್ತು ಚಿನ್ನದ ಪದಕ

TAGGED:bengaluruchinnaswamy stadiumChinnaswamy StampedeIPL 2026rcbRCB Fansvirat kohliಆರ್‍ಸಿಬಿಐಪಿಎಲ್‌ 2026ಕಾಲ್ತುಳಿತ ದುರಂತಚಿನ್ನಸ್ವಾಮಿ ಕ್ರೀಡಾಂಗಣಬೆಂಗಳೂರು
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
26 minutes ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
37 minutes ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
9 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
10 hours ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
10 hours ago
ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?