Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರಿನಲ್ಲಿ ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ; ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Mysuru | ಮೈಸೂರಿನಲ್ಲಿ ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ; ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ

Mysuru

ಮೈಸೂರಿನಲ್ಲಿ ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ; ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ

Public TV
Last updated: November 13, 2025 12:52 pm
Public TV
Share
2 Min Read
Farmers protset 2
SHARE

– 1 ತಿಂಗಳಲ್ಲಿ ಕ್ರಮ ವಹಿಸದಿದ್ರೆ ನಮ್ಮಿಂದಲೇ ಅಕ್ರಮ ರೆಸಾರ್ಟ್‌, ಹೋಮ್‌ಸ್ಟೇ ಧ್ವಂಸ

ಮೈಸೂರು: ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಪ್ರಾಣಿಗಳು ಅರಣ್ಯದಿಂದ ಹೊರಬರಲು ಕಾರಣಗಳನ್ನ ಕೇಳಿ, ಕೆರೆಗಳನ್ನು ತುಂಬಿಸಿ, ಗಿಡಗಳನ್ನು ತೆರವುಗೊಳಿಸಿ ಮೇವು ಬೆಳೆಸಲು ಆದೇಶಿಸಿದ್ದಾರೆ. ಜೊತೆಗೆ ಕಾಡುಪ್ರಾಣಿಗಳ ಸಂಘರ್ಷ ತಡೆಗೆ 1926 ಟೋಲ್‌ ಫ್ರೀ ಸಹಾಯವಾಣಿಯನ್ನೂ ಸಹ ಬಿಡುಗಡೆ ಮಾಡಲಾಗಿದೆ. ಈ ನಡುವೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ (Forest Department) ನಡೆ ಖಂಡಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

Farmers protset 3

ಮಾನವ-ವನ್ಯಜೀವಿ ಸಂಘರ್ಷ ಮುಂದುವರಿದ ಹಿನ್ನೆಲೆ ರೊಚ್ಚಿಗೆದ್ದ ರೈತರು ಮೈಸೂರಿನ (Mysuru) ಅಶೋಕಪುರಂನಲ್ಲಿರುವ ಅರಣ್ಯ ಭವನ ಮುತ್ತಿಗೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ ಹುಲಿ ಸೆರೆ; ಖಚಿತಪಡಿಸಿಕೊಳ್ಳಲು DNA ಟೆಸ್ಟ್‌ಗೆ ಖಂಡ್ರೆ ಸೂಚನೆ

ಕರ್ನಾಟಕ ರಾಜ್ಯ ರೈತ ಸಂಘ (ರೈತಪರ್ವ) ದಿಂದ ಪ್ರತಿಭಟನೆ ನಡೆಸಲಾಗಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ರೈತರನ್ನ (Farmers) ಅರಣ್ಯ ಭವನದ ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಇದರಿಂದ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಆದಾಗ್ಯೂ ʻಕಾಡು ಪ್ರಾಣಿಗಳಿಂದ ರೈತರನ್ನು ಉಳಿಸಿʼ ಎಂದು ಘೋಷಣೆ ಕೂಗುತ್ತಾ ಪ್ರತಿಭಟಿಸಿದ ರೈತರು ರಾಜ್ಯ ಸರ್ಕಾರ ಹಾಗೂ ಅರಣ್ಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

tiger image

ರೈತರ ಬೇಡಿಕೆಗಳೇನು?
ಹೆಚ್‌.ಡಿ ಕೋಟೆ ಭಾಗದಲ್ಲಿ ಆಗುತ್ತಿರುವ ಹುಲಿ ದಾಳಿಗಳಿಂದ ಕಾಡಂಚಿನ ಜನರಿಗೆ ರಕ್ಷಣೆ ನೀಡಬೇಕು ಎಂದು ರಾಜ್ಯ ರೈತ ಕಾರ್ಯದರ್ಶಿ ಚಾಮರಾಜು ಆಗ್ರಹಿಸಿದರು. ಇದನ್ನೂ ಓದಿ: ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ರೈತನನ್ನು ಕೊಂದ ಹುಲಿ ಸೆರೆಗೆ ಈಶ್ವರ್‌ ಖಂಡ್ರೆ ಆದೇಶ

ಇನ್ನೂ ರೈತಪರ್ವ ರಾಜ್ಯಾಧ್ಯಕ್ಷ ಅರುಣ್‌ ಕುಮಾರ್‌ ಮಾತನಾಡಿ, ಅರಣ್ಯ ಭಾಗದಲ್ಲಿರುವ ಅಕ್ರಮ ರೆಸಾರ್ಟ್‌, ಹೋಮ್‌ ಸ್ಟೇಗಳನ್ನ ಬಂದ್‌ ಮಾಡಲು ಕ್ರಮ ಕೈಗೊಳ್ಳಬೇಕು. ಕಾಡು ಪ್ರಾಣಿಗಳ ರಕ್ಷಣೆ ಜೊತೆಗೆ ಆನೆಯಿಂದ ಬೆಳೆ ನಾಶ, ಹುಲಿ ದಾಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಈ ಬಾರಿ ಮನವಿ ಅಲ್ಲ, ಎಚ್ಚರಿಕೆ ಕೊಟ್ಟಿದ್ದೇವೆ, 1 ತಿಂಗಳ ಡೆಡ್‌ಲೈನ್‌ ನೀಡಿದ್ದೇವೆ. ಅಷ್ಟರಲ್ಲಿ ಅಕ್ರಮ ಹೋಮ್‌ ಸ್ಟೇ, ರೆಸಾರ್ಟ್‌ಗಳನ್ನ ತೆರವುಗೊಳಿಸದೇ ಇದ್ರೆ, ನಾವೇ ಧ್ವಂಸ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Mysuru Tiger Attack

ಕಾಡಂಚಿನ ಜನ ಹಸುಗಳಿಗೆ ಸ್ವಲ್ಪ ಹುಲ್ಲಿ, ಸಣ್ಣ ಸೌದೆ ತಂದರೂ 5-10 ವರ್ಷ ಅಂತ ಕೇಸ್‌ ಹಾಕಿ ಒಳಹೆ ಕಳಿಸ್ತಾರೆ. ಆದ್ರೆ ರಾಜಕೀಯ ವ್ಯಕ್ತಿಗಳ ರೆಸಾರ್ಟ್‌ ಇದ್ರೂ ಯಾವುದೇ ಕ್ರಮ ತಗೋತಿಲ್ಲ. ಹಾಗಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ – 15 ದಿನಗಳಲ್ಲಿ ಮೂರನೇ ಪ್ರಕರಣ

ಅರಣ್ಯಾಧಿಕಾರಿಗಳ ಪ್ರತಿಕ್ರಿಯೆ ಏನು?
ರೈತರಿಂದ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಅರಣ್ಯಾಧಿಕಾರಿಗಳು, ಸಫಾರಿ ಗೈಡ್‌ಗಳ ಬಳಸಿಕೊಂಡು ಊರೂರಿಗೆ ಹೋಗಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ. 1926 ಟೋಲ್‌ ಸಹಾಯವಾಣಿ ಸಹ ಆರಂಭಿಸಿದ್ದೇವೆ. ಬೋನ್‌ಗಳನ್ನು ಇರಿಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಟ್ರ್ಯಾಪ್‌ ಕ್ಯಾಮೆರಾಗಳನ್ನೂ ಅಳವಡಿಸಿದ್ದೇವೆ, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಲ್ಲದೇ ರೆಸಾರ್ಟ್‌ ಹೋಮ್‌ ಸ್ಟೇ ಗಳು ಅರಣ್ಯ ವ್ಯಾಪ್ತಿಯಲ್ಲಿ ಇಲ್ಲ. ಕಂದಾಯ ಇಲಾಖೆ ವ್ಯಾಪ್ತಿಯ ಜಾಗದಲ್ಲಿದೆ. ಆದ್ರೂ ಇದನ್ನ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ.

TAGGED:farmer's associationfarmersforest departmentmysuruTiger Attackಅರಣ್ಯ ಇಲಾಖೆಮೈಸೂರುರೈತ ಸಂಘರೈತರುಹುಲಿ ದಾಳಿ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
6 minutes ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
25 minutes ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
36 minutes ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
1 hour ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
2 hours ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?