ಇಂದೋರ್: ಬಿಹಾರ ಚುನಾವಣೆಯಲ್ಲಿ (Bihar Election) ಆಡಳಿತಾರೂಢ ಎನ್ಡಿಎಗೆ (NDA) ಭರ್ಜರಿ ಗೆಲುವು ಸಿಕ್ಕಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ (Robert Vadra) ಅಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು. ಇದನ್ನೂ ಓದಿ: ನ.19ಕ್ಕೆ ನಿತೀಶ್ ಪ್ರಮಾಣ ವಚನ ಸಾಧ್ಯತೆ
#WATCH | Indore, Madhya Pradesh | Businessman Robert Vadra says, “…My religious tour is across the nation, but it always starts from here. The nation wants change. The youth do not like the government’s wrongdoing. We will fight for democracy. I am here, and I will pray for my… pic.twitter.com/ZVfSsLAYgr
— ANI (@ANI) November 16, 2025
ರಾಹುಲ್ ಗಾಂಧಿ (Rahul Gandhi) ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.
ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.
ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್, ಆರ್ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿದೆ.

