Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡ ದಿನವೇ ಕೊಟ್ಟ ಮಾತಿನ ಅಸ್ತ್ರ ಪ್ರಯೋಗಿಸಿದ ಸುರೇಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡ ದಿನವೇ ಕೊಟ್ಟ ಮಾತಿನ ಅಸ್ತ್ರ ಪ್ರಯೋಗಿಸಿದ ಸುರೇಶ್‌

Bengaluru City

ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡ ದಿನವೇ ಕೊಟ್ಟ ಮಾತಿನ ಅಸ್ತ್ರ ಪ್ರಯೋಗಿಸಿದ ಸುರೇಶ್‌

Public TV
Last updated: November 20, 2025 5:34 pm
Public TV
Share
3 Min Read
DK Suresh
SHARE

– ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪುವುದಿಲ್ಲ

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡ ದಿನವೇ ಕೊಟ್ಟ ಮಾತಿನ ಅಸ್ತ್ರವನ್ನು ಮಾಜಿ ಸಂಸದ, ಬಮೂಲ್‌ ಅಧ್ಯಕ್ಷ ಡಿ.ಕೆ ಸುರೇಶ್‌ (DK Suresh) ಪ್ರಯೋಗಿಸಿದ್ದಾರೆ.

ಸಿದ್ದರಾಮಯ್ಯನವರಿಗೂ ಜವಾಬ್ದಾರಿ ಇದೆ, ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದು ಹೇಳಿ ಸಿಎಂ ಮತ್ತು ಕಾಂಗ್ರೆಸ್‌ ಹೈಕಮಾಂಡ್‌ಗೆ (Congress High Command) ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳು ನೀವು ಸಿಎಂ ಅವರನ್ನು ಭೇಟಿ ಮಾಡಿದಾಗ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿದಿರಾ ಎಂದು ಕೇಳಿದ್ದಕ್ಕೆ, ಸಿಎಂ ಅವರ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರು ಹಿರಿಯ ನಾಯಕರು. ಅವರಿಗೆ ತಮ್ಮದೇ ಆದ ಜವಾಬ್ದಾರಿ ಇದೆ. ಕರ್ನಾಟಕದ ಜನರಿಗೆ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದಾರೆ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದಾರೋ ಅದರಂತೆ ನಡೆಯುತ್ತಿದ್ದಾರೆ ಎಂದು ಉತ್ತರಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ (Guarantee Scheme) ಬಂದು ಎರಡೂವರೆ ವರ್ಷವಾಗಿರುವ ಬಗ್ಗೆ ಕೇಳಿದಾಗ, ಕರ್ನಾಟಕದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿಗೆ ಎರಡೂವರೆ ವರ್ಷ ತುಂಬಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ – ದೆಹಲಿಗೆ ಹಾರಿದ ಡಿಕೆಶಿ ಬೆಂಬಲಿಗರು

 

ಸಿದ್ದರಾಮಯ್ಯ ಅವರು ಪವರ್ ಶೇರಿಂಗ್ ವಿಚಾರದಲ್ಲೂ ಕೊಟ್ಟ ಮಾತಿನಂತೆ ನಡೆಯುತ್ತಾರಾ ಎಂದು ಕೇಳಿದಾಗ, “ಅದು ನನಗೆ ಗೊತ್ತಿಲ್ಲದ ವಿಚಾರ. ಅವರು ಈಗ ಮುಖ್ಯಮಂತ್ರಿ ಆಗಿದ್ದಾರೆ. ಈ ವಿಚಾರವನ್ನು ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತಾರೆ. ಈ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನೀವು ಮಾಧ್ಯಮಗಳಲ್ಲಿ ತೋರಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದರು.

ಶಿವಕುಮಾರ್ (DK Shivakumar) ಅವರು ಎರಡೂವರೆ ವರ್ಷಗಳ ಬಳಿಕ ಸಿಎಂ ಆಗುತ್ತಾರೆ ಎಂಬ ಚರ್ಚೆ ಅಭಿಮಾನಿ, ಕಾರ್ಯಕರ್ತರಲ್ಲಿದೆ ಎಂದು ಕೇಳಿದಾಗ, ಎಲ್ಲರಿಗೂ ಆ ಆಸೆ ಇದೆ. ಅವರ ಅಭಿಮಾನಿಗಳು ಹೇಳುತ್ತಿರುತ್ತಾರೆ, ಪೂಜೆ ಮಾಡುತ್ತಿರುತ್ತಾರೆ, ಅವರಿಗೆ ಏನು ಬೇಕೋ ಮಾಡುತ್ತಿರುತ್ತಾರೆ. ನಾವುಗಳು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವವರು. ಪಕ್ಷ ಏನು ಹೇಳುತ್ತದೆಯೋ ಅದನ್ನು ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ನಾಯಕರು ಪಾಲನೆ ಮಾಡುತ್ತಾರೆ. ಇದು ನಮ್ಮ, ನಿಮ್ಮ ಮುಂದೆ ನಡೆಯುವ ಚರ್ಚೆಯಲ್ಲ. ಇದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಏನೇ ತೀರ್ಮಾನ ಮಾಡುವುದಿದ್ದರೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಇಲ್ಲಿ ವೈಯಕ್ತಿಕ ವಿಚಾರ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ನಾಯಕತ್ವ ಬದಲಾವಣೆ: ಹೈಕಮಾಂಡ್ ಹೇಳಿಲ್ಲ, CLPಯಲ್ಲೂ ಚರ್ಚೆಯಾಗಿಲ್ಲ – ಪರಮೇಶ್ವರ್

 

ನಿನ್ನೆ ಶಿವಕುಮಾರ್ ಅವರು ತ್ಯಾಗದ ಮಾತುಗಳನ್ನು ಆಡಿದ್ದಾರೆ ಎಂದು ಕೇಳಿದ್ದಕ್ಕೆ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ನೀವು ಅವರನ್ನೇ ಕೇಳಿ ಎಂದು ತಿಳಿಸಿದರು.

ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ ಎಂಬ ಪ್ರಶ್ನೆಗೆ, ಅವರು ಪಕ್ಷದ ಕೆಲಸ ಮಾಡುತ್ತಿದ್ದು, ನಾಳೆ ಬೇರೆಯವರು ಅಧ್ಯಕ್ಷರಾದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ಯಾರೇ ಅಧ್ಯಕ್ಷರಾದರೂ ಅವರಿಗೆ ಅವಕಾಶ ಮಾಡಿಕೊಡಲು ಶಿವಕುಮಾರ್ ಅವರು ಸಿದ್ಧರಿದ್ದಾರೆ ಎಂದು ತಿಳಿಸಿದರು.

ಅವರೇ ಮುಂದುವರಿಯುತ್ತಾರೆಯೇ ಎಂದು ಕೇಳಿದಾಗ, ಅವರು ರಾಜೀನಾಮೆ ನೀಡುವುದಿಲ್ಲ ಎಂದು ನಿಮ್ಮ ಬಳಿ ಹೇಳಿಲ್ಲವಲ್ಲ. ನೀವು ಆ ರೀತಿ ಹೇಳುತ್ತಿದ್ದೀರಾ. ಅವಕಾಶ ಸಿಕ್ಕಾಗ ಏನೆಲ್ಲಾ ಮಾಡಬೇಕೋ ಅದನ್ನು ಶಿವಕುಮಾರ್ ಅವರು ಮಾಡಿದ್ದಾರೆ. ಒಬ್ಬೊಬ್ಬರೂ ಒಂದೊಂದು ರೀತಿ ವ್ಯಾಖ್ಯಾನ ಮಾಡಿ ಕಾರ್ಯಕರ್ತರನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿರುತ್ತಾರೆ. ಹೀಗಾಗಿ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವುದು ಪಕ್ಷ ಹಾಗೂ ಅಧ್ಯಕ್ಷರ ಜವಾಬ್ದಾರಿ. ಹೀಗಾಗಿ ಈ ಮಾತುಗಳನ್ನು ಆಡಿರುತ್ತಾರೆ ಎಂದು ತಿಳಿಸಿದರು.

TAGGED:congressdk sureshkarnatakapoliticsಕರ್ನಾಟಕಕಾಂಗ್ರೆಸ್ಡಿಕೆ ಸುರೇಶ್ರಾಜಕೀಯ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
1 hour ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
1 hour ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
3 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
4 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?