ಬಾಗಲಕೋಟೆ: ಅಧಿಕಾರ ಹಂಚಿಕೆ ಹಗ್ಗಜಗ್ಗಾಟ ತೀವ್ರವಾಗುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಬೇಕೆಂದು ಕಾಂಗ್ರೆಸ್ (Congresss) ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪಾರ್ಥನೆ, ಪೂಜೆ, ಹರಕೆಗಳನ್ನು ಆರಂಭಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು, ಜಮಖಂಡಿ (Jamkhandi) ತಾಲೂಕಿನ ಕಲ್ಲೋಳ್ಳಿದ ಶ್ರೀ ಲಕ್ಷ್ಮಿ ವೆಂಕಟರಮಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಡಿಕೆಶಿ ಸಿಎಂ ಆಗಲೆಂದು ಹರಕೆ ಹೊತ್ತ ಕಾರ್ಯಕರ್ತರು ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಈಡುಗಾಯಿ ಒಡೆದು ವಿಶೇಷ ಪೂಜೆ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ಕುಮಾರ್ ದಾನಕ್ಕನವರ್ ಅವರ ನೇತೃತ್ವದಲ್ಲಿ ಈ ಪೂಜೆ ನಡೆದಿದೆ. ದೇಗುಲದಲ್ಲಿ ಡಿಕೆಶಿ ಅವರ ಫೋಟೋ ಇಟ್ಟು ಅಭಿಷೇಕ ಮಾಡುವ ಮೂಲಕ ಡಿಕೆಶಿ ಸಿಎಂ ಆಗಲಿ ಎಂಬ ಸಂಕಲ್ಪ ವ್ಯಕ್ತಪಡಿಸಿದ ಕಾರ್ಯಕರ್ತರು, ದೇವಸ್ಥಾನದ ಮುಂಭಾಗದಲ್ಲಿ 1001 ತೆಂಗಿನಕಾಯಿ ಒಡೆದು ಹರಕೆ ಸಲ್ಲಿಸಿದರು
ಪಕ್ಷದ ಆಪ್ತ ಶಾಸಕರು, ಸಚಿವರಿಂದ ಲಾಬಿ ಸಾಗುತ್ತಿರುವ ನಡುವೆಯೇ ಈಗ ಕಾರ್ಯಕರ್ತರೇ ಅಖಾಡಕ್ಕೆ ಇಳಿದಿರುವುದು ಜಿಲ್ಲೆಯ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
