Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಪೋಕ್ಸೋ ಮೊದಲ ಕೇಸಲ್ಲಿ ಮುರುಘಾ ಶ್ರೀ ಖುಲಾಸೆ – ಕೋರ್ಟ್‌ ಆದೇಶದಲ್ಲಿ ಏನಿದೆ?

Public TV
Last updated: November 26, 2025 8:51 pm
Public TV
Share
2 Min Read
Chitradurga court acquits Shivamurthy Murugha Sharana and two others accused under POCSO Act
SHARE

– ಬಸವರಾಜನ್ ಜಿದ್ದು; ಸಂತ್ರಸ್ತೆಯರ ಪಿತೂರಿ
– ಚಿತ್ರದುರ್ಗದ ಸೆಷನ್ಸ್ ಕೋರ್ಟ್ ತೀರ್ಪು

ಚಿತ್ರದುರ್ಗ: ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ (Shivamurthy Murugha Sharanaru) ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ (District Court Chitradurga) ಬಿಗ್ ರಿಲೀಫ್ ನೀಡಿದೆ.

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೋಕ್ಸೋದ (POCSO Case) ಮೊದಲ ಪ್ರಕರಣದಲ್ಲಿ ಎ1 ಮುರುಘಾ ಶ್ರೀ, ಎ2 ವಾರ್ಡನ್ ರಶ್ಮಿ, ಎ4 ಮ್ಯಾನೇಜರ್ ಪರಮಶಿವಯ್ಯ ಮೇಲಿನ ಆರೋಪಗಳಿಂದ ಕೋರ್ಟ್ ಖುಲಾಸೆಗೊಳಿಸಿದೆ.

2022ರ ಆಗಸ್ಟ್ 31 ರಂದು ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮುರುಘಾಶ್ರೀ, ಲೇಡಿ ವಾರ್ಡನ್ ರಶ್ಮಿ, ಬಸವಾದಿತ್ಯ, ಮ್ಯಾನೇಜರ್ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಮೈಸೂರಿನ (Mysuru) ನಜರಾಬಾದ್ ಠಾಣೆಯಲ್ಲಿ ಮುರುಘಾ ಶ್ರೀಗಳ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು.

ಸೆಪ್ಟೆಂಬರ್ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಈಗ ಮಾತನಾಡುವ ಸಂದರ್ಭ ಕಡಿಮೆಯಿದೆ – ಖುಲಾಸೆಯಾದ ಬಳಿಕ ಮುರುಘಾ ಶ್ರೀ ಪ್ರತಿಕ್ರಿಯೆ

ಕೋರ್ಟ್‌ ವಿಚಾರಣೆಯ ಸಂದರ್ಭದಲ್ಲಿ ಮುರುಘಾ ಶ್ರೀ ಪರವಾಗಿ ಖ್ಯಾತ ವಕೀಲ ಸಿವಿ ನಾಗೇಶ್‌ (CV Nagesh) ವಾದ ಮಂಡಿಸಿದ್ದರು.

ಕೋರ್ಟ್ ಆದೇಶದಲ್ಲಿ ಏನಿದೆ?
ಮುರುಘಾ ಶ್ರೀಗಳು ಮತ್ತು ಬಸವರಾಜನ್ ಮಧ್ಯೆ 15 ವರ್ಷಗಳಿಂದ ಜಿದ್ದು ಇದ್ದು ಹಳೆ ಜಿದ್ದಿನಿಂದಲೇ ಶ್ರೀಗಳ ವಿರುದ್ಧ ದೂರು ದಾಖಲಾಗಿದೆ. ದೂರು ನೀಡುವ 15 ದಿನ ಸಂತ್ರಸ್ತೆಯರು ಬಸವರಾಜನ್ ಮನೆಯಲ್ಲಿದ್ದರು. ಬೆಂಗಳೂರಿಗೆ ಸಂತ್ರಸ್ತೆಯರು ಬಂದಾಗ ಬಸವರಾಜನ್ ದಂಪತಿ ಆರ್ಥಿಕ ನೆರವು ನೀಡಿದ್ದಾರೆ.

ಸಂತ್ರಸ್ತೆಯರು ಕೋರ್ಟ್-ಪೊಲೀಸರ ಮುಂದೆ ನೀಡಿರುವ ಹೇಳಿಕೆ ವ್ಯತಿರಿಕ್ತವಾಗಿದೆ. ಮುರುಘಾ ಶ್ರೀಗಳ ವಿರುದ್ಧ ದ್ವೇಷಕ್ಕಾಗಿ ಹಣ ವ್ಯಯ ಮಾಡಲಾಗಿದೆ. ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದಕ್ಕೆ ವೈದ್ಯಕೀಯ ಸಾಕ್ಷ್ಯಗಳಿಲ್ಲ.

ಸ್ಥಳ ಮಹಜರು ವೇಳೆ ಸಂತ್ರಸ್ತೆಯರ ವಿವರಣೆಗೆ ಹೋಲಿಕೆಯಾಗುತ್ತಿಲ್ಲ. ಸಂತ್ರಸ್ತೆಯರ ಮೇಲೆ ಹಲ್ಲೆ ನಡೆದಿದೆ ಎನ್ನುವ ಆರೋಪವಿದೆ. ಆದರೆ ಹಲ್ಲೆ ನಡೆಸಿದ್ದಕ್ಕೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಮುಖ್ಯವಾಗಿ ಪೊಲೀಸರ ಮುಂದೆ ದೂರು ನೀಡದೆ ಮೈಸೂರಿಗೆ ಸಂತ್ರಸ್ತೆಯರು ಹೋಗಿದ್ಯಾಕೆ ಎಂದು ಕೋರ್ಟ್‌ ಗಂಭೀರವಾದ ಪ್ರಶ್ನೆಯನ್ನು ಎತ್ತಿದೆ.

ರಿಲೀಫ್‌ ಇಲ್ಲ:
ಪೋಕ್ಸೋ ಕೇಸಲ್ಲಿ ದಾಖಲಾಗಿದ್ದ ಮೊದಲ ಕೇಸ್‌ನಲ್ಲಿ ಮುರುಘಾ ಶ್ರೀಗಳು ಖುಲಾಸೆಗೊಂಡಿದ್ದರೂ ಪೂರ್ಣವಾಗಿ ರಿಲೀಫ್ ಸಿಕ್ಕಿಲ್ಲ. 2ನೇ ಕೇಸ್ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕಿದ್ದು, ಮುಂದಿನ ತಿಂಗಳು ವಿಚಾರಣೆಗೆ ಬರಲಿದೆ. ಇದನ್ನೂ ಓದಿ: ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

ಪ್ರಕರಣದಲ್ಲಿ ಅಡುಗೆ ಸಹಾಯಕಿ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣವನ್ನು ವಜಾಗೊಳಿಸುವಂತೆ ಶ್ರೀಗಳು ಕೋರ್ಟ್ ಮೊರೆ ಹೋಗಿದ್ದಾರೆ. ಸದ್ಯಕ್ಕೆ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಮೊದಲ ಪ್ರಕರಣದಲ್ಲಿ ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು. ಮೇಲ್ಮನವಿ ಸಲ್ಲಿಸದಿದ್ದರೆ ನಾವೇ ಕೋರ್ಟ್ ಮೊರೆ ಹೋಗೋದಾಗಿ ಸಂತ್ರಸ್ತೆಯರ ಪರ ದೂರು ನೀಡಿರುವ ಒಡನಾಡಿ ಸಂಸ್ಥೆ ಹೇಳಿಕೊಂಡಿದೆ. ಶ್ರೀಗಳು ಖುಲಾಸೆಗೊಳ್ಳುತ್ತಿದ್ದಂತೆ ಭಕ್ತರು ವಿಜಯೋತ್ಸವ ಆಚರಿಸಿದ್ದಾರೆ. ಇದು ಸತ್ಯಕ್ಕೆ ಸಿಕ್ಕ ಜಯ ಎಂದಿದ್ದಾರೆ.

 

TAGGED:Chitradurgamurugha shreemysuruPOCSO caseಚಿತ್ರದುರ್ಗಪೋಕ್ಸೋಮುರುಘಾ ಶ್ರೀ
Share This Article
Facebook Whatsapp Whatsapp Telegram

Cinema news

Actress Amala
ನಾಗಚೈತನ್ಯ ಬಗ್ಗೆ ಮಲತಾಯಿ ನಟಿ ಅಮಲಾ ಮಾತು
Cinema Latest South cinema Top Stories
balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories

You Might Also Like

ED Raids
Bengaluru City

ಸಚಿವರ ಆಪ್ತರ ರಿಯಲ್‌ ಎಸ್ಟೇಟ್‌ ಬಿಲ್ಡರ್‌ ಮೇಲೆ ಇಡಿ ದಾಳಿ

Public TV
By Public TV
17 minutes ago
Someshwar Temple
Bengaluru City

ಡಿವೋರ್ಸ್ ಕೇಸ್‌ಗಳಿಗಾಗಿ ಅರ್ಚಕರ ಅಲೆದಾಟ – ಸೋಮೇಶ್ವರ ದೇಗುಲದಲ್ಲಿ ಮದುವೆ ಬಂದ್

Public TV
By Public TV
29 minutes ago
ias officer mahantesh bilagis last rites held in ramadurga
Belgaum

ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ

Public TV
By Public TV
49 minutes ago
Droupadi Murmu
Latest

9 ಭಾಷೆಗಳಲ್ಲಿ ಭಾರತ ಸಂವಿಧಾನದ ಡಿಜಿಟಲ್ ಆವೃತ್ತಿ ಬಿಡುಗಡೆಗೊಳಿಸಿದ ರಾಷ್ಟ್ರಪತಿ ಮುರ್ಮು

Public TV
By Public TV
1 hour ago
MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
3 hours ago
DK Shivakumar 7
Bengaluru City

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?