Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ನೀರಿನ ಬಿಲ್ ಬಾಕಿದಾರರಿಗೆ ಗುಡ್ ನ್ಯೂಸ್ – ಕ್ಯಾಬಿನೆಟ್‌ ಸಭೆಯ ನಿರ್ಧಾರಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ನೀರಿನ ಬಿಲ್ ಬಾಕಿದಾರರಿಗೆ ಗುಡ್ ನ್ಯೂಸ್ – ಕ್ಯಾಬಿನೆಟ್‌ ಸಭೆಯ ನಿರ್ಧಾರಗಳೇನು?

Bengaluru City

ಬೆಂಗಳೂರಿನಲ್ಲಿ ನೀರಿನ ಬಿಲ್ ಬಾಕಿದಾರರಿಗೆ ಗುಡ್ ನ್ಯೂಸ್ – ಕ್ಯಾಬಿನೆಟ್‌ ಸಭೆಯ ನಿರ್ಧಾರಗಳೇನು?

Public TV
Last updated: November 27, 2025 6:32 pm
Public TV
Share
4 Min Read
BWSSB WATER
SHARE

– ಗ್ರಾಹಕರಿಗೆ ಒನ್ ಟೈಂ ಪಾವತಿಗೆ ಅವಕಾಶ
– ದಂಡ, ಬಡ್ಡಿ ಇತರೆ ಶುಲ್ಕ 100% ಮನ್ನಾ

ಬೆಂಗಳೂರು: ರಾಜಧಾನಿಯಲ್ಲಿ ನೀರಿನ ಬಿಲ್ (Water Bill) ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ಒನ್ ಟೈಂ ಪಾವತಿಗೆ ಅವಕಾಶ ಕಲ್ಪಿಸಿದ್ದು, ಬಡ್ಡಿ ದಂಡ, ಇತರೆ ಶುಲ್ಕ ಶೇ.100 ರಷ್ಟು ಮನ್ನಾ ಮಾಡಲಾಗಿದೆ.

ಬೆಂಗಳೂರು (Bengaluru) ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100 ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್ ಕೆ ಪಾಟೀಲ್ (HK Patil) ವಿವರಣೆ ನೀಡಿ, ಒಟ್ಟು 701 ಕೋಟಿ ರೂ. ಪಾವತಿ ಬಾಕಿ ಇದೆ. ಈ ಪೈಕಿ 431 ಕೋಟಿ ರೂ. ಅಸಲು ಹಾಗೂ ಬಡ್ಡಿ ಮೊತ್ತ 262 ಕೋಟಿ ರೂ. ಇದೆ ಎಂದು ವಿವರ ನೀಡಿದರು.

ಇನ್ನು ಕ್ಯಾಬಿನೆಟ್‌ನಲ್ಲಿ ಒಟ್ಟು 7 ಬಿಲ್ ಗಳಿಗೆ ಅನುಮೋದನೆ ಸಿಕ್ಕಿದ್ದು, ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಆಗಲಿವೆ. ಅಲ್ಲದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ಸಮರ್ಪಕ ನಿರ್ವಹಣೆಗಾಗಿ “Operation and Maintenance of Landfill Sites” ಪ್ಯಾಕೇಜ್ ಕಾಮಗಾರಿಗಳನ್ನು ರೂ.100 ಕೋಟಿಗಳ ಮೊತ್ತದಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (BSWML) ಮೂಲಕ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.  ಇದನ್ನೂ ಓದಿ:  ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಯತೀಂದ್ರ

ಕ್ಯಾಬಿನೆಟ್ ಸಭೆ ಪ್ರಮುಖ ನಿರ್ಣಯಗಳು
*ರಾಜ್ಯ ದತ್ತಾಂಶ ಕೇಂದ್ರ (State Data Centre) ಮತ್ತು ಹತ್ತಿರದ ವಿಪತ್ತು ಚೇತರಿಕಾ ಕೇಂದ್ರ (Near Disaster Recovery Centre) ಹಾಗೂ ವಿಪತ್ತು ಚೇತರಿಕಾ ಕೇಂದ್ರ (Disaster Recovery Centre) ಕಾರ್ಯಾಚರಣೆ ಮತ್ತು ನಿರ್ವಹಣಾ ಸೇವೆಯನ್ನು ಒಟ್ಟು ರೂ.143.6 ಕೋಟಿಗಳ ವೆಚ್ಚದಲ್ಲಿ 5 ವರ್ಷಗಳ ಅವಧಿಗೆ ಒದಗಿಸಲು ಸೂಕ್ತ ನಿರ್ವಹಣಾ ಸಂಸ್ಥೆಯನ್ನು ಆಯ್ಕೆ ಮಾಡಲು ಒಪ್ಪಿಗೆ

*2025-26ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದಾದ್ಯಂತ 114 ಆಯುಷ್ಮಾನ್ ಆರೋಗ್ಯ ಮಂದಿರಗಳ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ರೂ.74.10 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

*ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ | ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ

*ಔಷಧಗಳು ಮತ್ತು ಸೌಂದರ್ಯವರ್ಧಕಗಳು (ಕರ್ನಾಟಕ ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ

*ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಹಿಂಡಲಗ ಗ್ರಾಮದ ಸ.ನಂ.189/1 ರಲ್ಲಿ 20 ಗುಂಟೆ “ಫಡಾ” ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಬೆಂಗಳೂರು ಇವರಿಗೆ ಮಂಜೂರು ಮಾಡಲು ಒಪ್ಪಿಗೆ.

*ಬೆಂಗಳೂರು ದಕ್ಷಿಣ ಜಿಲ್ಲೆ, ಮಾಗಡಿ ತಾಲ್ಲೂಕು, ಕುದೂರು ಗ್ರಾಮದ ಸ.ನಂ.47ರಲ್ಲಿ 3-12 ಎಕರೆ ಜಮೀನನ್ನು ಬಸ್ ನಿಲ್ದಾಣ ಮತ್ತು ಬಸ್ ಡಿಪೋ ನಿರ್ಮಾಣಕ್ಕಾಗಿ ಕೆ.ಎಸ್.ಆರ್.ಟಿ.ಸಿಗೆ ಉಚಿತವಾಗಿ ಮಂಜೂರು ಮಾಡಲು ಒಪ್ಪಿಗೆ

*ಬಾಗಲಕೋಟೆ ತಾಲ್ಲೂಕಿನ ಜಿಲ್ಲೆ, ಇಂಗಳಗಿ ಮುಧೋಳ ಗ್ರಾಮ ಪಂಚಾಯತಿಗೆ ಸೇರಿದ ಝಂಜರಕೊಪ್ಪ ಗ್ರಾಮದ ಸರ್ವೆ ನಂ. 145 ಫ್ಲಾಟ್ ನಂಬರ್ 81ರ 1077.17ಚ.ಮೀ. ವಿಸ್ತೀರ್ಣದ ಜಾಗವನ್ನು ಮುಧೋಳ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಾಲಯ ನಿರ್ಮಾಣಕ್ಕಾಗಿ “ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು” ಇವರಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಿಗೆ.

*ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳು (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ.

*ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ-ಭಟ್ಕಳ ವಿಧಾನಸಭಾ ಕ್ಷೇತ್ರದ ಮುಳ್ಕೊಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ (ಉಪ್ಪು ನೀರು ತಡೆ ಅಣೆಕಟ್ಟು)ನ್ನು 200 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

 


*ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಕೆಲವು ನಗರ ಸ್ಥಳೀಯ ಸಂಸ್ಥೆಗಳನ್ನು ಮತ್ತು ಕೆಲವು ಗ್ರಾಮಗಳನ್ನು ಸೇರ್ಪಡೆಗೊಳಿಸಿ “ಮೈಸೂರು ಗ್ರೇಡ್-1 ಮಹಾನಗರಪಾಲಿಕೆ”ಯನ್ನಾಗಿ ಪರಿವರ್ತಿಸಲು ಒಪ್ಪಿಗೆ.

*”ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು (ಎರಡನೇ ತಿದ್ದುಪಡಿ) ವಿಧೇಯಕ, 2025″ ಅನುಮೋದನೆ.

*ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ ಕಾರ್ಯಕ್ರಮ (LEAP)ದ ಅಡಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಉತ್ಕೃಷ್ಟತಾ ಕೇಂದ್ರ (CoE)ನ್ನು ಗ್ರಾಮೀಣ ಕೇಂದ್ರಿತ ಹಸ್ತಕ್ಷೇಪಕ್ಕಾಗಿ ಕಲಬುರಗಿಯಲ್ಲಿ 12 ಕೋಟಿ ರೂ. ಮೊತ್ತದಲ್ಲಿ ಸ್ಥಾಪಿಸಲು 19.11.2025 ರಂದು ಹೊರಡಿಸಿರುವ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ.

*ಕರ್ನಾಟಕ ರಾಜ್ಯದ ಕಿರುಬಂದರುಗಳಿಂದ ಕಬ್ಬಿಣದ ಅದಿರು ರಫ್ತು, ಮಾಡುವಾಗ ಅನುಸರಿಸಬೇಕಾದ “ಕರ್ನಾಟಕ ಕಿರು ಬಂದರುಗಳಲ್ಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ-2025” ಎಂಬ ಪ್ರಮಾಣಿತ ಕಾರ್ಯನಿರ್ವಹಣಾ ವಿಧಾನ (Standard Operating Procedure) ಜಾರಿ ತರಲು ಒಪ್ಪಿಗೆ.

*ಕರ್ನಾಟಕ ನ್ಯಾಯಾಂಗ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025ಕ್ಕೆ ಅನುಮೋದನೆ

*ಚಂದ್ರಗುತ್ತಿ ಶ್ರೀ ರೇಣುಕಾಂಬ ಅಭಿವೃದ್ಧಿ ಪ್ರಾಧಿಕಾರ, ವಿಧೇಯಕ, 2025″ಕ್ಕೆ ಅನುಮೋದನೆ.

*ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC)ಯಿಂದ ನೂತನ ಸ್ಯಾಟ್‌ ಲೈಟ್ ಬಸ್ ನಿಲ್ದಾಣವನ್ನು ರೂ.17.50 ಕೋಟಿಗಳ ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

*ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೇ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಹೊರಡಿಸಿರುವ ಜಾಹೀರಾತು ಸಂಖ್ಯೆ: 1/2019 ರನ್ವಯ 1000 ಚಾಲಕರ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಅಸ್ತು.

*ಕಬಿನಿ ಎಡದಂಡೆ ನಾಲೆಯ ಡೀಪ್‌ ಕಟ್ ಭಾಗಕ್ಕೆ ಕಟ್ ಅಂಡ್ ಕವರ್ ಹಾಗೂ ಅಡ್ಡಮೋರಿಗಳ ನಿರ್ಮಾಣ ಕಾಮಗಾರಿ ಮತ್ತು ಕಬಿನಿ ಎಡದಂಡೆ ನಾಲೆಯ ವಿತರಣಾ ಕಾಲುವೆ-1 ರಿಂದ 19 ರವರೆಗಿನ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

TAGGED:bwssbcabinetkarnatakasiddaramaiahಕರ್ನಾಟಕಕ್ಯಾಬಿನೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
1 hour ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
1 hour ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
1 hour ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
2 hours ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
2 hours ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?