ರಾಮನಗರ: ಹೆಡ್ ಕಾನ್ಸ್ಟೇಬಲ್ (Head Constable) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.
ಲಕ್ಷ್ಮಣ್ (51) ಮೃತ ಹೆಡ್ ಕಾನ್ಸ್ಟೇಬಲ್. ಲಕ್ಷ್ಮಣ್ ಚನ್ನಪಟ್ಟಣ (Channapatna) ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮವಾರ ಕರ್ತವ್ಯಕ್ಕೆ ಲಕ್ಷ್ಮಣ್ ಗೈರು ಹಾಜರಾಗಿದ್ದು, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಕೆರೆಯಲ್ಲಿ ಲಕ್ಷ್ಮಣ್ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ BSY
ಹೆಲ್ಮೆಟ್ ಸಮೇತ ಲಕ್ಷ್ಮಣ್ ಬಿದ್ದಿದ್ದಾರೆ. ಕೆರೆ ಪಕ್ಕದಲ್ಲೇ ಬೈಕ್ ಕೂಡ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ಕಾಲು ಜಾರಿಬಿದ್ದಿರಬಹುದಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಕೇಸ್ – ಮಾಲೀಕ, ಮ್ಯಾನೇಜರ್ ವಿರುದ್ಧ FIR

