Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀನಗರ ಕಿಟ್ಟಿ ನಟನೆಯ ವೇಷಗಳು ಚಿತ್ರಕ್ಕೆ ಮುಹೂರ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶ್ರೀನಗರ ಕಿಟ್ಟಿ ನಟನೆಯ ವೇಷಗಳು ಚಿತ್ರಕ್ಕೆ ಮುಹೂರ್ತ

Cinema

ಶ್ರೀನಗರ ಕಿಟ್ಟಿ ನಟನೆಯ ವೇಷಗಳು ಚಿತ್ರಕ್ಕೆ ಮುಹೂರ್ತ

Public TV
Last updated: December 2, 2025 7:10 pm
Public TV
Share
3 Min Read
Veshagalu Movie Team
SHARE

ನಟ ಶ್ರೀನಗರ ಕಿಟ್ಟಿ (Srinagar Kitty) ಮುಖ್ಯ ಭೂಮಿಕೆಯ ವೇಷಗಳು (Veshagalu) ಚಿತ್ರದ ಮುಹೂರ್ತ ಸಮಾರಂಭ ಮೈಸೂರು ರಸ್ತೆಯ ಕೆಂಗೇರಿ ಸಮೀಪದ ಜೆ.ಕೆ.ಗ್ರ್ಯಾಂಡ್ ಅರೇನಾ ಆವರಣದಲ್ಲಿ ಹಾಕಲಾಗಿರುವ ಬೃಹತ್ ಡ್ರಾಮಾ ಸ್ಟೇಜ್ ಸೆಟ್‌ನಲ್ಲಿ ನೆರವೇರಿತು. ಮುಹೂರ್ತ ದೃಶ್ಯಕ್ಕೆ ಡಿವೈಎಸ್‌ಪಿ ರಾಜೇಶ್ ಕ್ಲಾಪ್ ಮಾಡಿದರು. ಶಾಕುಂತಲಾ ದುಷ್ಯಂತ ಮಹಾರಾಜನ ನಾಟಕವೇ ಚಿತ್ರದ ಪ್ರಥಮ ದೃಶ್ಯ. ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಈ ಚಿತ್ರಕ್ಕೆ ಚಿತ್ರಕಥೆ, ಬರೆದು ನಿರ್ದೇಶನ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಟೀಚರ್ ಆದ ಸೌಜನ್ಯ ಚಿತ್ರದ ಸಂಭಾಷಣೆ ಬರೆದಿದ್ದಾರೆ. ಈ ಚಿತ್ರದಲ್ಲಿ ರಂಗಭೂಮಿ ಕಲಾವಿದರ ಅಲ್ಲದೆ ಜೋಗತಿಯರ ಜೀವನ ಶೈಲಿಯ ಬಗ್ಗೆಯೂ ಹೇಳಲಾಗುತ್ತಿದ್ದು, ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮುಹೂರ್ತದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ಮಾಪಕ ಶ್ರೀನಗರ ಕಿಟ್ಟಿ, ನಾಯಕ ಭರತ್ ಬೋಪಣ್ಣ, ನಾಯಕಿ ಅಂಕಿತಾ ಅಮರ್, ಹಿರಿಯ ನಟ ಶರತ್ ಲೋಹಿತಾಶ್ವ, ತಬಲಾನಾಣಿ, ಸಂಗೀತ ನಿರ್ದೇಶಕ ಕೌಶಿಕ್ ಹರ್ಷ, ಸಾಹಿತಿ ಕವಿರಾಜ್, ಛಾಯಾಗ್ರಾಹಕ ಮನೋಹರ ಜೋಷಿ ಚಿತ್ರದ ಕುರಿತಂತೆ ಮಾತನಾಡಿದರು. ಮೊದಲಿಗೆ ನಿರ್ದೇಶಕ ಕಿಶನ್ ರಾವ್ ಮಾತನಾಡಿ, ಆರಂಭದಲ್ಲಿ ಒಂದಷ್ಟು ನಾಟಕ ಮಾಡಿ, ಅಸಿಸ್ಟೆಂಟ್ ಡೈರೆಕ್ಟರ್ ಆಗೂ ದುಡಿದೆ. ವೇಷಗಳು ಕಥೆ ಓದಿದಾಗ ಇದನ್ನು ಸಿನಿಮಾ ಮಾಡಿದರೆ ಚೆನ್ನಾಗಿರತ್ತೆ ಅನಿಸಿತು. ಭಾವನಾ ಬೆಳಗೆರೆ ಅವರಿಗೆ ಕೇಳಿದಾಗ ಅವರೂ ಒಪ್ಪಿದರು. ಬಹುತೇಕ ರಂಗಸಜ್ಜಿಕೆಯೊಳಗೇ ನಡೆಯುವ, ನಾಟಕದ ಹಿನ್ನೆಲೆಯಲ್ಲಿ ಸಾಗುವ ಪ್ರೇಮಕಥೆಯಿದು. ಮಾಲೂರು ವಿಜಯ್ ಅವರು ಅದ್ಭುತವಾದ ಡ್ರಾಮಾ ಸೆಟ್‌ಗಳನ್ನು ಹಾಕಿಕೊಟ್ಟಿದ್ದಾರೆ. ಡಿಓಪಿ ಆಗಿ ಮನೋಹರ ಜೋಷಿ ಸಿಕ್ಕಮೇಲೆ ಬೇರೆಯದೇ ಎನರ್ಜಿ ಬಂತು. ಕವಿರಾಜ್, ನಾಗೇಂದ್ರ ಪ್ರಸಾದ್, ಕಲ್ಯಾಣ್, ವಿ.ಮನೋಹರ್ ಸಾಹಿತ್ಯ ಬರೆಯುತ್ತಿದ್ದಾರೆ. ಚಿತ್ರದಲ್ಲಿ 40 ರಿಂದ 50 ಭಾಗ ನಾಟಕದ ಎಪಿಸೋಡ್ ಬರುತ್ತದೆ. ಈ ಕಥೆ ಬಳ್ಳಾರಿಯಿಂದ ಶುರುವಾಗಿ ಉತ್ತರ ಕರ್ನಾಟಕ, ಬೆಂಗಳೂರು, ಮೈಸೂರು ಅಲ್ಲದೇ ಮಧ್ಯಪ್ರದೇಶದ ಮಹೇಶ್ವರದವರೆಗೂ ಸಾಗುತ್ತದೆ ಎಂದರು. ಇದನ್ನೂ ಓದಿ: ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ!

veshagalu movie

ಶ್ರೀನಗರ ಕಿಟ್ಟಿ ಮಾತನಾಡುತ್ತ ಇದು ಸಣ್ಣ ಕಥೆ. ಕಿಶೋರ್ ಇದನ್ನು ಸಿನಿಮಾ ಮಾಡ್ತೀನಿ ಅಂದಾಗ ನನ್ನ ಹೆಂಡ್ತಿ ಒಪ್ಪಿದಳು. ರಂಗಭೂಮಿಯ ಒಳಹರಿವುಗಳು ಹೇಗಿರುತ್ತೆ. ಅಲೆಮಾರಿ ತಂಡಗಳು ಯಾವ ರೀತಿ ಇರುತ್ತವೆ, ಇದನ್ನೆಲ್ಲ ನಮ್ಮ ಚಿತ್ರದಲ್ಲಿ ಹೇಳುತ್ತಿದ್ದೇವೆ. 2000 ದಲ್ಲಿ ಇದ್ದ ರಂಗಭೂಮಿ ಅದರ ನಡುವೆ ಒಂದು ಪ್ರೇಮಕಥೆಯೂ ಸಾಗುತ್ತದೆ. ಅಂಕಿತ ಒಳ್ಳೆ ಪರ್ ಫಾರ್ಮರ್. ನನ್ನ ಪಾತ್ರ ಬಸಪ್ಪ, ಬಸಮ್ಮ ಹೀಗೆ ಎರಡು ಶೇಡ್‌ಗಳಲ್ಲಿ ಬರುತ್ತೆ, ಇದೊಂದು ಹೊಸ ಪ್ರಯತ್ನ ಎಂದು ವಿವರಿಸಿದರು.

ಶರತ್ ಲೋಹಿತಾಶ್ವ ಮಾತನಾಡುತ್ತ, ನಾನಿಲ್ಲಿ ಸಿಂಹಣ್ಣ ಎಂಬ ಪವರ್‌ಫುಲ್ ಪಾತ್ರ ಮಾಡುತ್ತಿದ್ದೇನೆ. ಅಲ್ಲದೇ ತುಂಬಾ ವರ್ಷದಿಂದ ಕಿಶನ್ ಹೋರಾಟ ನೋಡ್ತಾ ಬಂದಿದ್ದೇನೆ. ಇನ್ನು ಕಿಟ್ಟಿ ಜತೆ ತುಂಬಾ ಟ್ರಾವೆಲ್ ಮಾಡಿದ್ದೇನೆ ಎಂದರು. ತಬಲಾನಾಣಿ ಮಾತನಾಡಿ, ಇವರೆಲ್ಲರ ಜತೆ ನಾನೂ ಒಂದು ಪಾತ್ರ ಮಾಡುತ್ತಿದ್ದೇನೆ ಎನ್ನುವುದೇ ಹೆಮ್ಮೆಯ ವಿಷಯ. ನಾಟಕ ತಂಡದಲ್ಲಿ ಹಾರ್ಮೋನಿಯಂ ಬಾರಿಸುವ ಪಾತ್ರ ನನ್ನದು ಎಂದರು. ನಾಯಕಿ ಅಂಕಿತಾ ಅಮರ್ ಮಾತನಾಡಿ, ನಮ್ಮ ದೈನಂದಿನ ಜೀವದಲ್ಲಿ ಒಂದೊಂದು ವೇಷ ಹಾಕಿಕೊಂಡೇ ಓಡಾಡುತ್ತೇವೆ. ಒಳಗಿರುವ ಕಾಣದ ವೇಷಗಳನ್ನು ತೋರಿಸುವ ಪ್ರಯತ್ನ ಮಾಡ್ತಿದ್ದೇವೆ. ನನ್ನದು ಅಲಮೇಲು ಪಾತ್ರ. ಆಕೆಯ ಆಸೆ, ಕನಸುಗಳು ಏನು ಎಂದು ಬಿಂಬಿಸುತ್ತದೆ ಎಂದರು. ನಾಯಕ ಭರತ್ ಬೋಪಣ್ಣ ಮಾತನಾಡಿ, ಚಿನ್ನಲ್ಲ ಎಂಬ ಮುಗ್ಧ ಹುಡುಗನ ಪಾತ್ರ ನನ್ನದು ಎಂದರು. ಸಂಗೀತ ನಿರ್ದೇಶಕ ಕೌಶಿಕ್ ಹರ್ಷ ಮಾತನಾಡಿ, ಡ್ರಾಮಾ ಹಿನ್ನೆಲೆಯ ಕಥೆಯಾದ್ದರಿಂದ 12 ಹಾಡುಗಳು ಚಿತ್ರದಲ್ಲಿರುತ್ತವೆ ಎಂದರು. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಅಕ್ಷಯ್ ಪಿ.ರಾವ್ ಅವರ ಸಂಕಲನ, ಐಶ್ವರ್ಯ ಅವರ ವಸ್ತ್ರಾಲಂಕಾರ ಈ ಚಿತ್ರಕ್ಕಿದೆ. ಇದನ್ನೂ ಓದಿ: ಕಾಶಿಯಲ್ಲಿ ರಮೇಶ್ ಅರವಿಂದ್ ನಟನೆಯ ದೈಜಿ ಟೀಮ್

TAGGED:Srinagar KittyVeshagaluವೇಷಗಳುಶ್ರೀನಗರ ಕಿಟ್ಟಿ
Share This Article
Facebook Whatsapp Whatsapp Telegram

Cinema news

Director S Shankar
1,000 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ನಿರ್ದೇಶಕ ಶಂಕರ್ ಸಿನಿಮಾ..!
Cinema Latest Top Stories
Actor Ravichandrans son plays a negative role in the film Kaunteya
ಕೌಂತೇಯ ಚಿತ್ರದಲ್ಲಿ ರವಿಚಂದ್ರನ್ ಪುತ್ರನ ನೆಗೆಟಿವ್ ಪಾತ್ರ
Cinema Latest Sandalwood South cinema
Yash Radhika Pandit Ayra
ಯಶ್ ರಾಧಿಕಾ ಜೀವನದ `ಮೆಲೋಡಿ’ಗೆ ಹುಟ್ಟುಹಬ್ಬದ ಸಂಭ್ರಮ!
Cinema Latest Sandalwood Top Stories
Gilli nata Super Hit Kannada Movie Teaser released 1
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ!
Cinema Latest Sandalwood Top Stories

You Might Also Like

marriage divorce 3
Bengaluru City

ಡಿವೋರ್ಸ್ ತಡೆಗೆ ರಾಜ್ಯ ಸರ್ಕಾರದಿಂದ ‘ಕೂಡಿ ಬಾಳೋಣ’ ಕೌನ್ಸಿಲಿಂಗ್ ಸೆಂಟರ್

Public TV
By Public TV
2 minutes ago
Bengaluru Kalaburagi Vande Bharat Express train
Bengaluru City

ಕಲಬುರಗಿ-ಬೆಂಗಳೂರು ವಂದೇ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

Public TV
By Public TV
6 minutes ago
Lok Sabha Winter Session
Latest

SIR ಗದ್ದಲಕ್ಕೆ ಎರಡನೇ ದಿನವೂ ಸಂಸತ್ ಕಲಾಪ ಬಲಿ

Public TV
By Public TV
25 minutes ago
PM Office Seva Teerth
Latest

ಪ್ರಧಾನಿ ಕಚೇರಿ ಇನ್ಮುಂದೆ ಸೇವಾ ತೀರ್ಥ; ರಾಜಭವನಗಳಿಗೆ ಲೋಕಭವನ ಎಂದು ಮರುನಾಮಕರಣ ಮಾಡಿದ ಕೇಂದ್ರ

Public TV
By Public TV
2 hours ago
Narendra Modi Putin
Latest

ಪುಟಿನ್ – ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆ: ರಕ್ಷಣಾ ಒಪ್ಪಂದಗಳ ಬಗ್ಗೆ ಚರ್ಚೆ

Public TV
By Public TV
2 hours ago
Bengaluru Kempegowda International Airport 4
Bengaluru City

8 ನಿಮಿಷಕ್ಕಿಂತ ಹೆಚ್ಚು ಹೊತ್ತು ವಾಹನ ನಿಲ್ಲಿಸಿದ್ರೆ ದಂಡ – ಏರ್‌ಪೋರ್ಟ್‌ನಲ್ಲಿ ಪಿಕಪ್ ಮಾಡುವ ಕ್ಯಾಬ್, ಖಾಸಗಿ ವಾಹನಗಳಿಗೆ ರೂಲ್ಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?