– ಕರ್ನಾಟಕದಿಂದ ಹೆಚ್ಚಿನ ಕೌಶಲ್ಯಶಾಲಿ ಉದ್ಯೋಗಿಗಳು ಬೇಕಾಗಿದೆ ಎಂದ ಸ್ಲೋವಾಕಿಯಾ ಕಂಪನಿಗಳು
ಬ್ರಾಟಿಸ್ಲಾವಾ: ಕರ್ನಾಟಕದಲ್ಲಿ (Karnataka) ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ತರಬೇತಿ ಪಡೆದು ಅತ್ಯುನ್ನತ ಮಟ್ಟದ ಕೌಶಲ್ಯ ತರಬೇತಿ ಪಡೆದುಕೊಳ್ಳುತ್ತಿರುವ ಉದ್ಯೋಗಿಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ (Sharanprakash Patil) ತಿಳಿಸಿದ್ದಾರೆ.
ಬ್ರಾಟಿಸ್ಲಾವಾದಲ್ಲಿರುವ (Bratislava) ಸಿಟ್ರೊಯೆನ್ C3, C3 ಏರ್ಕ್ರಾಸ್ ಮತ್ತು ಒಪೆಲ್ ಫ್ರಾಂಟೆರಾ ಮಾದರಿಗಳ ವಾಹನ ತಯಾರಕ ಸಂಸ್ಥೆಯಾದ ಸ್ಟೆಲ್ಲಾಂಟಿಸ್ ಈಗಾಗಲೇ ಅಟೊಮೊಬೈಲ್ ವಿದ್ಯುತ್ ಕೌಶಲ್ಯ ತರಬೇತಿ ಹೊಂದಿದವರನ್ನು ಕಳುಹಿಸಿಕೊಡಬೇಕೆಂದು ಮನವಿ ಮಾಡಿದೆ. ಇದನ್ನೂ ಓದಿ: ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ
ಬ್ರಾಟಿಸ್ಲಾವಾ ಬಳಿಯ ತ್ರ್ವಾನಾ ಘಟಕದಲ್ಲಿ ಈಗಾಗಲೇ ಕರ್ನಾಟಕದ ಸುಮಾರು 100 ಅಸೆಂಬ್ಲಿ-ಲೈನ್ ಆಪರೇಟರ್ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಫೆಬ್ರವರಿ 2026 ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಪೂರ್ವಭಾವಿಯಾಗಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಯುರೋಪ್ ಖಂಡದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸಿ, ವಿವಿಧ ನಗರಗಳಿಗೂ ಭೇಟಿ ನೀಡುತ್ತಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ಗೆ ಮತ್ತೆ ಶಾಕ್ – ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ
ಮಂಗಳವಾರ ಸಂಜೆ ಹಾಗೂ ಬುಧವಾರ ಸ್ಟೆಲ್ಲಾಂಟಿಸ್ಗೆ ಭೇಟಿ ನೀಡಿದ ಉಭಯ ಸಚಿವರು, ಕರ್ನಾಟಕದ ಉದ್ಯೋಗಿಗಗಳಿಗೆ ಸ್ಥಾವರದಲ್ಲಿ ನೀಡುತ್ತಿರುವ ಸೌಲಭ್ಯಗಳು ಮತ್ತು ಇತರೆ ವ್ಯವಸ್ಥೆಯ ಕುರಿತು ಪರಿಶೀಲಿಸಿದರು. ಇದನ್ನೂ ಓದಿ: Chitradurga| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ಅಸೆಂಬ್ಲಿ ಲೈನ್ ಆಪರೇಟರ್ಗಳಿಗೆ ಅವಕಾಶ:
ಪ್ರಸ್ತುತ, ಕಂಪನಿಯು ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ (ಕೆವಿಟಿಎಸ್ಡಿಸಿ) ವತಿಯಿಂದ ತರಬೇತಿ ಪಡೆದಿರುವ ಕೌಶಲ್ಯಪೂರ್ಣ 100 ಅಸೆಂಬ್ಲಿ-ಲೈನ್ ಆಪರೇಟರ್ಗಳನ್ನು ನೇಮಿಸಿಕೊಂಡಿದೆ. 50ಕ್ಕೂ ಹೆಚ್ಚು ಹೆವಿ ವೆಹಿಕಲ್ ಡ್ರೈವರ್ಗಳನ್ನೂ ನೇಮಿಸಲಾಗಿದೆ. ಉದ್ಯೋಗಿಗಳ ವಲಸೆ ಮತ್ತು ನಿಯೋಜನೆ ಹಾಗೂ ಇತರೆ ಸೌಲಭ್ಯವನ್ನು ಕರ್ನಾಟಕ ಅಂತರರಾಷ್ಟ್ರೀಯ ವಲಸೆ ಕೇಂದ್ರ (IMC-K) ಸುಗಮಗೊಳಿಸಿದೆ. ಇದನ್ನೂ ಓದಿ: ನ್ಯೂ ಇಯರ್ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ಸಿಸಿಬಿ ಶಾಕ್ – 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
ಉದ್ಯೋಗಿಗಳಿಂದ ಸರ್ಕಾರಕ್ಕೆ ಧನ್ಯವಾದ:
ಈಗ ಸ್ಲೋವಾಕಿಯಾದಲ್ಲಿ (Slovakia) ಉದ್ಯೋಗ ಪಡೆದಿರುವ ಕಲಬುರಗಿ ಜಿಲ್ಲೆಯ ಸೇಡಂನ ಸುನಿಲ್ ಕುಮಾರ್, ಕೆವಿಟಿಎಸ್ಡಿಸಿಗೆ ಕೃತಜ್ಞತೆ ಸಲ್ಲಿಸಿ, ಈ ಉಪಕ್ರಮವು ಸ್ಥಿರ ಆದಾಯ ಮತ್ತು ಉತ್ತಮ ಕೆಲಸ ಒದಗಿಸಿದೆ ಎಂದು ಹೇಳಿದರು. ಧಾರವಾಡ ಜಿಲ್ಲೆಯ ಕಲಘಟಗಿಯ ರೋಹನ್ ಲಗಾಲಿ ಕೂಡ ಸರ್ಕಾರಕ್ಕೆ ಹಾಗೂ ಸಚಿವರಿಗೂ ಧನ್ಯವಾದ ಅರ್ಪಿಸಿದರು. ತ್ರ್ವಾನಾ ಸ್ಥಾವರದಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಕಾರ್ಮಿಕರು ಸುಮಾರು 1,300 ವಾಹನಗಳನ್ನು ತಯಾರಿಸುತ್ತಿದ್ದಾರೆ. ಇದನ್ನೂ ಓದಿ: ಮದುವೆಯಾದ ಮರುದಿನವೇ ಹೃದಯಾಘಾತ – ನವವಿವಾಹಿತ ಸಾವು
ನಮ್ಮ ಹುಡುಗರು ಈಗ ಜಾಗತಿಕ ಮಟ್ಟಕ್ಕೇರಿದ್ದಾರೆ:
ನಂತರ ಮಾತನಾಡಿದ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ನಮ್ಮ ಕರ್ನಾಟಕದ ಯುವ ಸಮೂಹವನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಅವಕಾಶ ಹೆಚ್ಚಿಸಲು ತರಬೇತಿ ನೀಡಲಾಗುತ್ತಿದೆ. ಇಂಗ್ಲಿಷ್, ಜರ್ಮನ್ ಮತ್ತು ಇಟಾಲಿಯನ್ ಭಾಷಾ ತರಬೇತಿ ನೀಡಲಾಗುತ್ತಿದೆ ಇದರಿಂದ ಎಲ್ಲರಿಗೂ ಅನುಕೂಲವಾಗಿದೆ. ನಮ್ಮ ರಾಜ್ಯದ ಯುವ ಸಮೂಹ ಈಗ ಜಾಗತಿಕ ಮಟ್ಟಕ್ಕೇರುತ್ತಿದೆ ಎಂದರು. ಇದನ್ನೂ ಓದಿ: ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʻಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ
ಸ್ಟೆಲ್ಲಾಂಟಿಸ್ ನೇಮಕಾತಿ ಮುಖ್ಯಸ್ಥರಾದ ಕತ್ರಿನಾ ಫೆಲ್ಕೋವಾ ಅವರು, ವೀಸಾ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸ್ಲೋವಾಕಿಯಾದಲ್ಲಿ ಭಾರತೀಯ ರಾಯಭಾರಿ ಅಪೂರ್ವ ಶ್ರೀವಾಸ್ತವ ಅವರನ್ನು ಒತ್ತಾಯಿಸಿದರು. ಇದನ್ನೂ ಓದಿ: ಬ್ರೇಕ್ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ: ಕೆಎನ್ ರಾಜಣ್ಣ ವ್ಯಂಗ್ಯ
ಕರ್ನಾಟಕದಿಂದ ವಾರ್ಷಿಕವಾಗಿ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ಪದವೀಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು. ಅಲ್ಲದೇ ಕರ್ನಾಟಕದಲ್ಲಿ ಉತ್ಪಾದನಾ ಘಟಕವನ್ನು ಆರಂಭಿಸಿದರೆ ಎಲ್ಲ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಡಾ. ಪಾಟೀಲ್ ಮತ್ತು ಡಾ. ಸುಧಾಕರ್ ತಿಳಿಸಿದರು. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣೆ ಮೇಲೆ ಪ್ರಧಾನಿ ಕಣ್ಣು – ಪ.ಬಂಗಾಳ ಸಂಸದರ ಜೊತೆ ಮೋದಿ ಸಭೆ
ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೆಎಸ್ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ್, ಕ್ರಿಸ್ತಗೌಡ ತಾಯಣ್ಣವರ್, ರಾಮೇಗೌಡ ಮತ್ತು KS ಅವಿನಾಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಸಂಚಾರ್ ಸಾಥಿ ಆ್ಯಪ್ ವಿವಾದದ ನಡುವೆಯೇ ಹತ್ತುಪಟ್ಟು ಹೆಚ್ಚಾಯ್ತು ಡೌನ್ಲೋಡ್


