Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ

Latest

ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ

Public TV
Last updated: December 3, 2025 3:47 pm
Public TV
Share
3 Min Read
Sharanprakash Patil Slovakia 1
SHARE

– ಕರ್ನಾಟಕದಿಂದ ಹೆಚ್ಚಿನ ಕೌಶಲ್ಯಶಾಲಿ ಉದ್ಯೋಗಿಗಳು ಬೇಕಾಗಿದೆ ಎಂದ ಸ್ಲೋವಾಕಿಯಾ ಕಂಪನಿಗಳು

ಬ್ರಾಟಿಸ್ಲಾವಾ: ಕರ್ನಾಟಕದಲ್ಲಿ (Karnataka) ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ತರಬೇತಿ ಪಡೆದು ಅತ್ಯುನ್ನತ ಮಟ್ಟದ ಕೌಶಲ್ಯ ತರಬೇತಿ ಪಡೆದುಕೊಳ್ಳುತ್ತಿರುವ ಉದ್ಯೋಗಿಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ (Sharanprakash Patil) ತಿಳಿಸಿದ್ದಾರೆ.

ಬ್ರಾಟಿಸ್ಲಾವಾದಲ್ಲಿರುವ (Bratislava) ಸಿಟ್ರೊಯೆನ್‌ C3, C3 ಏರ್‌ಕ್ರಾಸ್ ಮತ್ತು ಒಪೆಲ್ ಫ್ರಾಂಟೆರಾ ಮಾದರಿಗಳ ವಾಹನ ತಯಾರಕ ಸಂಸ್ಥೆಯಾದ ಸ್ಟೆಲ್ಲಾಂಟಿಸ್ ಈಗಾಗಲೇ ಅಟೊಮೊಬೈಲ್‌ ವಿದ್ಯುತ್ ಕೌಶಲ್ಯ ತರಬೇತಿ ಹೊಂದಿದವರನ್ನು ಕಳುಹಿಸಿಕೊಡಬೇಕೆಂದು ಮನವಿ ಮಾಡಿದೆ. ಇದನ್ನೂ ಓದಿ: ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ

ಬ್ರಾಟಿಸ್ಲಾವಾ ಬಳಿಯ ತ್ರ್ವಾನಾ ಘಟಕದಲ್ಲಿ ಈಗಾಗಲೇ ಕರ್ನಾಟಕದ ಸುಮಾರು 100 ಅಸೆಂಬ್ಲಿ-ಲೈನ್ ಆಪರೇಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಫೆಬ್ರವರಿ 2026 ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಪೂರ್ವಭಾವಿಯಾಗಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಯುರೋಪ್‌ ಖಂಡದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸಿ, ವಿವಿಧ ನಗರಗಳಿಗೂ ಭೇಟಿ ನೀಡುತ್ತಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ಗೆ ಮತ್ತೆ ಶಾಕ್ – ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಂಗಳವಾರ ಸಂಜೆ ಹಾಗೂ ಬುಧವಾರ ಸ್ಟೆಲ್ಲಾಂಟಿಸ್‌ಗೆ ಭೇಟಿ ನೀಡಿದ ಉಭಯ ಸಚಿವರು, ಕರ್ನಾಟಕದ ಉದ್ಯೋಗಿಗಗಳಿಗೆ ಸ್ಥಾವರದಲ್ಲಿ ನೀಡುತ್ತಿರುವ ಸೌಲಭ್ಯಗಳು ಮತ್ತು ಇತರೆ ವ್ಯವಸ್ಥೆಯ ಕುರಿತು ಪರಿಶೀಲಿಸಿದರು. ಇದನ್ನೂ ಓದಿ: Chitradurga| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Sharanprakash Patil Slovakia

ಅಸೆಂಬ್ಲಿ ಲೈನ್‌ ಆಪರೇಟರ್‌ಗಳಿಗೆ ಅವಕಾಶ:
ಪ್ರಸ್ತುತ, ಕಂಪನಿಯು ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ (ಕೆವಿಟಿಎಸ್‌ಡಿಸಿ) ವತಿಯಿಂದ ತರಬೇತಿ ಪಡೆದಿರುವ ಕೌಶಲ್ಯಪೂರ್ಣ 100 ಅಸೆಂಬ್ಲಿ-ಲೈನ್ ಆಪರೇಟರ್‌ಗಳನ್ನು ನೇಮಿಸಿಕೊಂಡಿದೆ. 50ಕ್ಕೂ ಹೆಚ್ಚು ಹೆವಿ ವೆಹಿಕಲ್ ಡ್ರೈವರ್‌ಗಳನ್ನೂ ನೇಮಿಸಲಾಗಿದೆ. ಉದ್ಯೋಗಿಗಳ ವಲಸೆ ಮತ್ತು ನಿಯೋಜನೆ ಹಾಗೂ ಇತರೆ ಸೌಲಭ್ಯವನ್ನು ಕರ್ನಾಟಕ ಅಂತರರಾಷ್ಟ್ರೀಯ ವಲಸೆ ಕೇಂದ್ರ (IMC-K) ಸುಗಮಗೊಳಿಸಿದೆ. ಇದನ್ನೂ ಓದಿ: ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ಸಿಸಿಬಿ ಶಾಕ್ – 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

ಉದ್ಯೋಗಿಗಳಿಂದ ಸರ್ಕಾರಕ್ಕೆ ಧನ್ಯವಾದ:
ಈಗ ಸ್ಲೋವಾಕಿಯಾದಲ್ಲಿ (Slovakia) ಉದ್ಯೋಗ ಪಡೆದಿರುವ ಕಲಬುರಗಿ ಜಿಲ್ಲೆಯ ಸೇಡಂನ ಸುನಿಲ್ ಕುಮಾರ್, ಕೆವಿಟಿಎಸ್‌ಡಿಸಿಗೆ ಕೃತಜ್ಞತೆ ಸಲ್ಲಿಸಿ, ಈ ಉಪಕ್ರಮವು ಸ್ಥಿರ ಆದಾಯ ಮತ್ತು ಉತ್ತಮ ಕೆಲಸ ಒದಗಿಸಿದೆ ಎಂದು ಹೇಳಿದರು. ಧಾರವಾಡ ಜಿಲ್ಲೆಯ ಕಲಘಟಗಿಯ ರೋಹನ್ ಲಗಾಲಿ ಕೂಡ ಸರ್ಕಾರಕ್ಕೆ ಹಾಗೂ ಸಚಿವರಿಗೂ ಧನ್ಯವಾದ ಅರ್ಪಿಸಿದರು. ತ್ರ್ವಾನಾ ಸ್ಥಾವರದಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಕಾರ್ಮಿಕರು ಸುಮಾರು 1,300 ವಾಹನಗಳನ್ನು ತಯಾರಿಸುತ್ತಿದ್ದಾರೆ. ಇದನ್ನೂ ಓದಿ: ಮದುವೆಯಾದ ಮರುದಿನವೇ ಹೃದಯಾಘಾತ – ನವವಿವಾಹಿತ ಸಾವು

ನಮ್ಮ ಹುಡುಗರು ಈಗ ಜಾಗತಿಕ ಮಟ್ಟಕ್ಕೇರಿದ್ದಾರೆ:
ನಂತರ ಮಾತನಾಡಿದ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್, ನಮ್ಮ ಕರ್ನಾಟಕದ ಯುವ ಸಮೂಹವನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಅವಕಾಶ ಹೆಚ್ಚಿಸಲು ತರಬೇತಿ ನೀಡಲಾಗುತ್ತಿದೆ. ಇಂಗ್ಲಿಷ್, ಜರ್ಮನ್ ಮತ್ತು ಇಟಾಲಿಯನ್ ಭಾಷಾ ತರಬೇತಿ ನೀಡಲಾಗುತ್ತಿದೆ ಇದರಿಂದ ಎಲ್ಲರಿಗೂ ಅನುಕೂಲವಾಗಿದೆ. ನಮ್ಮ ರಾಜ್ಯದ ಯುವ ಸಮೂಹ ಈಗ ಜಾಗತಿಕ ಮಟ್ಟಕ್ಕೇರುತ್ತಿದೆ ಎಂದರು. ಇದನ್ನೂ ಓದಿ: ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʻಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

ಸ್ಟೆಲ್ಲಾಂಟಿಸ್ ನೇಮಕಾತಿ ಮುಖ್ಯಸ್ಥರಾದ ಕತ್ರಿನಾ ಫೆಲ್ಕೋವಾ ಅವರು, ವೀಸಾ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸ್ಲೋವಾಕಿಯಾದಲ್ಲಿ ಭಾರತೀಯ ರಾಯಭಾರಿ ಅಪೂರ್ವ ಶ್ರೀವಾಸ್ತವ ಅವರನ್ನು ಒತ್ತಾಯಿಸಿದರು. ಇದನ್ನೂ ಓದಿ: ಬ್ರೇಕ್‌ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ: ಕೆಎನ್ ರಾಜಣ್ಣ ವ್ಯಂಗ್ಯ

ಕರ್ನಾಟಕದಿಂದ ವಾರ್ಷಿಕವಾಗಿ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ಪದವೀಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು. ಅಲ್ಲದೇ ಕರ್ನಾಟಕದಲ್ಲಿ ಉತ್ಪಾದನಾ ಘಟಕವನ್ನು ಆರಂಭಿಸಿದರೆ ಎಲ್ಲ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಡಾ. ಪಾಟೀಲ್‌ ಮತ್ತು ಡಾ. ಸುಧಾಕರ್‌ ತಿಳಿಸಿದರು. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣೆ ಮೇಲೆ ಪ್ರಧಾನಿ ಕಣ್ಣು – ಪ.ಬಂಗಾಳ ಸಂಸದರ ಜೊತೆ ಮೋದಿ ಸಭೆ

ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ್, ಕ್ರಿಸ್ತಗೌಡ ತಾಯಣ್ಣವರ್, ರಾಮೇಗೌಡ ಮತ್ತು KS ಅವಿನಾಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಸಂಚಾರ್ ಸಾಥಿ ಆ್ಯಪ್ ವಿವಾದದ ನಡುವೆಯೇ ಹತ್ತುಪಟ್ಟು ಹೆಚ್ಚಾಯ್ತು ಡೌನ್‌ಲೋಡ್

TAGGED:BratislavakarnatakaSharanprakash PatilSlovakia
Share This Article
Facebook Whatsapp Whatsapp Telegram

Cinema news

Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows
Marali Manasagide Teaser Release
ಮರಳಿ ಮನಸಾಗಿದೆ ಚಿತ್ರದ ಟೀಸರ್ ರಿಲೀಸ್
Cinema Latest Sandalwood Top Stories

You Might Also Like

Sanchar Saathi
Latest

‘ಸಂಚಾರ್ ಸಾಥಿ’ ಆ್ಯಪ್ ಪ್ರಿ-ಇನ್ಸ್ಟಾಲ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ

Public TV
By Public TV
5 minutes ago
iqbal hussain
Districts

ಇಡ್ಲಿ, ನಾಟಿಕೋಳಿ ತಿಂದಮೇಲೆ ಎಲ್ಲವೂ ಮುಗಿದಿದೆ, ಇನ್ನು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ: ಇಕ್ಬಾಲ್ ಹುಸೇನ್

Public TV
By Public TV
22 minutes ago
Nikhil Kumaraswamy
Bengaluru City

ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಇಡ್ಲಿ, ನಾಟಿ ಕೋಳಿ ಸಾರು – ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಇರುತ್ತೇನೋ: ನಿಖಿಲ್ ಲೇವಡಿ

Public TV
By Public TV
27 minutes ago
Dharwad
Dharwad

ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ

Public TV
By Public TV
55 minutes ago
Prajwal Revanna 2
Court

ಪ್ರಜ್ವಲ್‌ಗೆ ಮತ್ತೆ ಶಾಕ್ – ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
1 hour ago
Chitradurga Man Dies From Electric Shock
Chitradurga

Chitradurga| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?