Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Districts

ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Public TV
Last updated: December 3, 2025 4:47 pm
Public TV
Share
2 Min Read
Mandya
SHARE

– ಮಂಡ್ಯದಲ್ಲಿ ಹನುಮ ಮಾಲಧಾರಿಗಳ ಸಂಕೀರ್ತನಾ ಯಾತ್ರೆ
– ಮಸೀದಿ ಮುಂದೆ ತಳ್ಳಾಟ, ನೂಕಾಟ; ಪೊಲೀಸರ ಹರಸಾಹಸ

ಮಂಡ್ಯ: ಶ್ರೀರಂಗಪಟ್ಟಣದಲ್ಲಿರುವ (Srirangapatna) ಜಾಮೀಯಾ ಮಸೀದಿ ಮುಂದೆ ಇಂದು ಮಧ್ಯಾಹ್ನ ಭಾರೀ ಹೈಡ್ರಾಮಾ ನಡೆದಿದೆ. ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ (Hanuma Male Sankirtana Yatra) ವೇಳೆ, ಹನುಮ ಮಾಲಾಧಾರಿಗಳು ಜಾಮೀಯಾ ಮಸೀದಿಯ ಮುಂದುಗಡೆಯಿಂದ ಸಾಗಿಹೋಗುವಾಗ ಇದ್ದಕ್ಕಿದ್ದ ಹಾಗೆ ಜಾಮಿಯಾ ಮಸೀದಿಯೊಳಗೆ ನುಗ್ಗಿದ್ದಾರೆ. ಅದರಿಂದಾಗಿ, ಜಾಮಿಯಾ ಮಸೀದಿ ಬಳಿ ಉದ್ವಿಗ್ನ ವಾತಾವರಣ ಉಂಟಾಗಿದೆ.

ಹನುಮ ಧ್ವಜ (Hanuma Flag) ಹಿಡಿದ ಸಾವಿರಾರು ಭಕ್ತರು ಕೂಡ ಯಾತ್ರೆಯಲ್ಲಿ ಭಾಗಿಯಾಗಿದ್ರು. ಗಂಜಾಂನ ಹಜರತ್ ಸೈಯದ್ ಜವಾರ್ ದರ್ಗಾದ ಮುಂದೆ ಹನುಮ ಮಾಲಾಧಾರಿಗಳ ಯಾತ್ರೆ ಸಾಗಿಬಂದು ಜಾಮೀಯಾ ಮಸೀದಿ ತಲುಪಿತ್ತು. ಈ ವೇಳೆ ಸಂಕೀರ್ತನ ಯಾತ್ರೆ. ಜಾಮೀಯಾ ಮಸೀದಿ ಕಡೆಗೆ ನುಗ್ಗಲು ಮಾಲಧಾರಿಗಳು ಯತ್ನಿಸಿದ್ರು. ಇದರಿಂದ ಮಾಲಧಾರಿಗಳು ಹಾಗೂ ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆಯಿತು.

Mandya 3

ʻಸಂಕೀರ್ತನಾ ಯಾತ್ರೆ ಜಾಮೀಯಾ ಮಸೀದಿ ತಲುಪಿದಂತೆ ಮಸೀದಿ ಬಳಿ ಜೈ ಶ್ರೀರಾಮ್, ಜೈ ಹನುಮಾನ್, ನಾವೆಲ್ಲಾ ಒಂದು ನಾವೇಲ್ಲಾ ಹಿಂದೂ.. ಹನುಮನ ಪಾದದ ಮೇಲಾಣೆ ಮಂದಿರವಿಲ್ಲೇ ಕಟ್ಟುವೆವುʼ ಎಂದು ಘೋಷಣೆ ಕೇಳಿಬಂದಿದೆ. ಮಸೀದಿ ಬಳಿಯ ವೃತ್ತದಲ್ಲಿ ನಿಂಬೆ ಹಣ್ಣು ಇಟ್ಟು ಕರ್ಪೂರ ಹಚ್ಚಿದ ಮಾಲಧಾರಿಗಳು… ಆ ಜಾಗ ನಮ್ಮದು ಎಂದು ಘೋಷಣೆʼ ಕೂಗಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ಸಿಸಿಬಿ ಶಾಕ್ – 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

ಜಾಮೀಯಾ ಮಸೀದಿ ಬಳಿ ಭಾರೀ ಸಂಖ್ಯೆಯ ಹನುಮ ಮಾಲಾಧಾರಿಗಳು ಸೇರುತ್ತಿದ್ದಂತೆ ಜಾಮೀಯಾ ಮಸೀದಿ ಸುತ್ತ ಭಾರೀ ಪೊಲೀಸ್ ಸರ್ಪಗಾವಲು ಹಾಕಿದ್ದಾರೆ. ಮಾಲಾಧಾರಿಗಳ ನಡುವೆ ತಳ್ಳಾಟ ನೂಕಾಟ ಉಂಟಾದ ಬೆನ್ನಲ್ಲೇ ಮಾಲಧಾರಿಗಳನ್ನ ಮನವೊಲಿಸಿ ಪೊಲೀಸರು ಕಳುಹಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಧಾರಿಗಳ ಸಂಕೀರ್ತನಾ ಯಾತ್ರೆಯಲ್ಲಿ ʻಜೈ ಶ್ರೀರಾಮ್, ಜೈ ಹನುಮಾನ್ʼ ಘೋಷಣೆ ಮೊಳಗಿದೆ. ಡಿಜೆ ಹಾಗೂ ತಮಟೆ ಸದ್ದಿಗೆ ಬಾವುಟ ಹಿಡಿದು ಮಾಲಧಾರಿಗಳು ಕುಣಿದು ಕುಪ್ಪಳಿಸಿದ್ದಾರೆ. ಮೂಡಲ ಬಾಗಿಲು ಆಂಜನೇಯಸ್ವಾಮಿ ಪುನರ್ ಪ್ರತಿಷ್ಠಾಪನೆ, ಜಾಮಿಯಾ ಮಸೀದಿ ಜಾಗದಲ್ಲಿ ಮತ್ತೆ ಹನುಮ ಮಂದಿರ ನಿರ್ಮಾಣದ ಸಂಕಲ್ಪ ಮಾಡಿ ಸಾವಿರಾರು ಹನುಮ ಭಕ್ತರು, ಹಿಂದೂ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಸುಮಾರು 4 ಕಿಮೀ ದೂರ ಹನುಮ ಮೂರ್ತಿ ಜೊತೆ ಮೆರವಣಿಗೆ ನಡೆದಿದೆ. ಇದನ್ನೂ ಓದಿ: ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ

ಶ್ರೀರಂಗಪಟ್ಟಣ ಟೌನ್, ಗಂಜಾಂ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. 1,500ಕ್ಕೂ ಹೆಚ್ಚು ಪೊಲೀಸರು, ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ದಕ್ಷಿಣ ವಲಯ ಐಜಿಪಿ ನೇತೃತ್ವದಲ್ಲಿ ಮೂವರು ಎಸ್ಪಿ, ಮೂವರು ಎಎಸ್ಪಿ ಸೇರಿ 1,100 ಅಧಿಕಾರಿಗಳು, ಸಿಬ್ಬಂದಿ, 300ಕ್ಕೂ ಹೆಚ್ಚು ಹೋಂ ಗಾರ್ಡ್ಸ್‌ಗಳ ನಿಯೋಜನೆ ಮಾಡಲಾಗಿತ್ತು. ಯಾತ್ರೆ ಸಾಗುವ ಮಾರ್ಗದಲ್ಲಿ 110 ಸಿಸಿಟಿವಿ ಅಳವಡಿಸಲಾಗಿದೆ. ಮೆರವಣಿಗೆ ಮೇಲೆ ಹೆಚ್ಚುವರಿಯಾಗಿ 20 ವಿಡಿಯೋ ಕ್ಯಾಮೆರಾ, 4 ಡ್ರೋಣ್ ಕ್ಯಾಮೆರಾಗಳ ಕಣ್ಗಾವಲು ಇಡಲಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

Mandya 2

ಭಾರೀ ವಿವಾದಕ್ಕೆ ಕಾರಣವಾಗಿದ್ದ ಹನುಮ ಮಾಲಧಾರಿಗಳ ಸಂಕೀರ್ತನಾ ಯಾತ್ರೆ ರಂಗನಾಥಸ್ವಾಮಿ ದೇಗುಲದ ಮೈದಾನದಲ್ಲಿ ಮುಕ್ತಾಯಗೊಂಡಿದೆ. ಇದೀಗ ಪೇಟೆ ಬೀದಿ ಮೂಲಕ ತೆರಳಿ ಯಾತ್ರೆ ಮುಕ್ತಾಯಗೊಂಡಿದೆ. ಯಾತ್ರೆ ಸಲುವಾಗಿ ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದೆ. ಇದನ್ನೂ ಓದಿ:  ಇಡ್ಲಿ, ನಾಟಿಕೋಳಿ ತಿಂದಮೇಲೆ ಎಲ್ಲವೂ ಮುಗಿದಿದೆ, ಇನ್ನು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ: ಇಕ್ಬಾಲ್ ಹುಸೇನ್

TAGGED:hanuma maleJama MasjidmandyaMandya Sankirtana YatraSankeertana YatraSrirangapatnaಮಂಡ್ಯಶ್ರೀರಂಗಪಟ್ಟಣಹನುಮ ಧ್ವಜಹನುಮ ಮಾಲಾಧಾರಿ
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

panipat women
Crime

ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಅಂತ 6 ವರ್ಷದ ಹುಡುಗಿ ಕೊಂದ ಮಹಿಳೆ

Public TV
By Public TV
7 minutes ago
chalavadi narayanaswamy 1
Bengaluru City

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Public TV
By Public TV
46 minutes ago
BY Vijayendra MP Renukacharya
Bengaluru City

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ: ರೇಣುಕಾಚಾರ್ಯ

Public TV
By Public TV
47 minutes ago
MP RENUKACHARYA
Bengaluru City

ಕಾಂಗ್ರೆಸ್ ಹೈಕಮಾಂಡ್ ಸತ್ತು ಹೋಗಿದೆ, ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟ ಬಿಟ್ಟು ರೈತರ ಸಮಸ್ಯೆ ಆಲಿಸಲಿ: ರೇಣುಕಾಚಾರ್ಯ

Public TV
By Public TV
1 hour ago
eshwara khandre forest staff
Chamarajanagar

ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

Public TV
By Public TV
2 hours ago
Sanchar Saathi
Latest

‘ಸಂಚಾರ್ ಸಾಥಿ’ ಆ್ಯಪ್ ಪ್ರಿ-ಇನ್ಸ್ಟಾಲ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?