Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Districts

ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Public TV
Last updated: December 3, 2025 4:47 pm
Public TV
Share
2 Min Read
Mandya
SHARE

– ಮಂಡ್ಯದಲ್ಲಿ ಹನುಮ ಮಾಲಧಾರಿಗಳ ಸಂಕೀರ್ತನಾ ಯಾತ್ರೆ
– ಮಸೀದಿ ಮುಂದೆ ತಳ್ಳಾಟ, ನೂಕಾಟ; ಪೊಲೀಸರ ಹರಸಾಹಸ

ಮಂಡ್ಯ: ಶ್ರೀರಂಗಪಟ್ಟಣದಲ್ಲಿರುವ (Srirangapatna) ಜಾಮೀಯಾ ಮಸೀದಿ ಮುಂದೆ ಇಂದು ಮಧ್ಯಾಹ್ನ ಭಾರೀ ಹೈಡ್ರಾಮಾ ನಡೆದಿದೆ. ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ (Hanuma Male Sankirtana Yatra) ವೇಳೆ, ಹನುಮ ಮಾಲಾಧಾರಿಗಳು ಜಾಮೀಯಾ ಮಸೀದಿಯ ಮುಂದುಗಡೆಯಿಂದ ಸಾಗಿಹೋಗುವಾಗ ಇದ್ದಕ್ಕಿದ್ದ ಹಾಗೆ ಜಾಮಿಯಾ ಮಸೀದಿಯೊಳಗೆ ನುಗ್ಗಿದ್ದಾರೆ. ಅದರಿಂದಾಗಿ, ಜಾಮಿಯಾ ಮಸೀದಿ ಬಳಿ ಉದ್ವಿಗ್ನ ವಾತಾವರಣ ಉಂಟಾಗಿದೆ.

ಹನುಮ ಧ್ವಜ (Hanuma Flag) ಹಿಡಿದ ಸಾವಿರಾರು ಭಕ್ತರು ಕೂಡ ಯಾತ್ರೆಯಲ್ಲಿ ಭಾಗಿಯಾಗಿದ್ರು. ಗಂಜಾಂನ ಹಜರತ್ ಸೈಯದ್ ಜವಾರ್ ದರ್ಗಾದ ಮುಂದೆ ಹನುಮ ಮಾಲಾಧಾರಿಗಳ ಯಾತ್ರೆ ಸಾಗಿಬಂದು ಜಾಮೀಯಾ ಮಸೀದಿ ತಲುಪಿತ್ತು. ಈ ವೇಳೆ ಸಂಕೀರ್ತನ ಯಾತ್ರೆ. ಜಾಮೀಯಾ ಮಸೀದಿ ಕಡೆಗೆ ನುಗ್ಗಲು ಮಾಲಧಾರಿಗಳು ಯತ್ನಿಸಿದ್ರು. ಇದರಿಂದ ಮಾಲಧಾರಿಗಳು ಹಾಗೂ ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆಯಿತು.

Mandya 3

ʻಸಂಕೀರ್ತನಾ ಯಾತ್ರೆ ಜಾಮೀಯಾ ಮಸೀದಿ ತಲುಪಿದಂತೆ ಮಸೀದಿ ಬಳಿ ಜೈ ಶ್ರೀರಾಮ್, ಜೈ ಹನುಮಾನ್, ನಾವೆಲ್ಲಾ ಒಂದು ನಾವೇಲ್ಲಾ ಹಿಂದೂ.. ಹನುಮನ ಪಾದದ ಮೇಲಾಣೆ ಮಂದಿರವಿಲ್ಲೇ ಕಟ್ಟುವೆವುʼ ಎಂದು ಘೋಷಣೆ ಕೇಳಿಬಂದಿದೆ. ಮಸೀದಿ ಬಳಿಯ ವೃತ್ತದಲ್ಲಿ ನಿಂಬೆ ಹಣ್ಣು ಇಟ್ಟು ಕರ್ಪೂರ ಹಚ್ಚಿದ ಮಾಲಧಾರಿಗಳು… ಆ ಜಾಗ ನಮ್ಮದು ಎಂದು ಘೋಷಣೆʼ ಕೂಗಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ಸಿಸಿಬಿ ಶಾಕ್ – 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

ಜಾಮೀಯಾ ಮಸೀದಿ ಬಳಿ ಭಾರೀ ಸಂಖ್ಯೆಯ ಹನುಮ ಮಾಲಾಧಾರಿಗಳು ಸೇರುತ್ತಿದ್ದಂತೆ ಜಾಮೀಯಾ ಮಸೀದಿ ಸುತ್ತ ಭಾರೀ ಪೊಲೀಸ್ ಸರ್ಪಗಾವಲು ಹಾಕಿದ್ದಾರೆ. ಮಾಲಾಧಾರಿಗಳ ನಡುವೆ ತಳ್ಳಾಟ ನೂಕಾಟ ಉಂಟಾದ ಬೆನ್ನಲ್ಲೇ ಮಾಲಧಾರಿಗಳನ್ನ ಮನವೊಲಿಸಿ ಪೊಲೀಸರು ಕಳುಹಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಧಾರಿಗಳ ಸಂಕೀರ್ತನಾ ಯಾತ್ರೆಯಲ್ಲಿ ʻಜೈ ಶ್ರೀರಾಮ್, ಜೈ ಹನುಮಾನ್ʼ ಘೋಷಣೆ ಮೊಳಗಿದೆ. ಡಿಜೆ ಹಾಗೂ ತಮಟೆ ಸದ್ದಿಗೆ ಬಾವುಟ ಹಿಡಿದು ಮಾಲಧಾರಿಗಳು ಕುಣಿದು ಕುಪ್ಪಳಿಸಿದ್ದಾರೆ. ಮೂಡಲ ಬಾಗಿಲು ಆಂಜನೇಯಸ್ವಾಮಿ ಪುನರ್ ಪ್ರತಿಷ್ಠಾಪನೆ, ಜಾಮಿಯಾ ಮಸೀದಿ ಜಾಗದಲ್ಲಿ ಮತ್ತೆ ಹನುಮ ಮಂದಿರ ನಿರ್ಮಾಣದ ಸಂಕಲ್ಪ ಮಾಡಿ ಸಾವಿರಾರು ಹನುಮ ಭಕ್ತರು, ಹಿಂದೂ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಸುಮಾರು 4 ಕಿಮೀ ದೂರ ಹನುಮ ಮೂರ್ತಿ ಜೊತೆ ಮೆರವಣಿಗೆ ನಡೆದಿದೆ. ಇದನ್ನೂ ಓದಿ: ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ

ಶ್ರೀರಂಗಪಟ್ಟಣ ಟೌನ್, ಗಂಜಾಂ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. 1,500ಕ್ಕೂ ಹೆಚ್ಚು ಪೊಲೀಸರು, ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ದಕ್ಷಿಣ ವಲಯ ಐಜಿಪಿ ನೇತೃತ್ವದಲ್ಲಿ ಮೂವರು ಎಸ್ಪಿ, ಮೂವರು ಎಎಸ್ಪಿ ಸೇರಿ 1,100 ಅಧಿಕಾರಿಗಳು, ಸಿಬ್ಬಂದಿ, 300ಕ್ಕೂ ಹೆಚ್ಚು ಹೋಂ ಗಾರ್ಡ್ಸ್‌ಗಳ ನಿಯೋಜನೆ ಮಾಡಲಾಗಿತ್ತು. ಯಾತ್ರೆ ಸಾಗುವ ಮಾರ್ಗದಲ್ಲಿ 110 ಸಿಸಿಟಿವಿ ಅಳವಡಿಸಲಾಗಿದೆ. ಮೆರವಣಿಗೆ ಮೇಲೆ ಹೆಚ್ಚುವರಿಯಾಗಿ 20 ವಿಡಿಯೋ ಕ್ಯಾಮೆರಾ, 4 ಡ್ರೋಣ್ ಕ್ಯಾಮೆರಾಗಳ ಕಣ್ಗಾವಲು ಇಡಲಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

Mandya 2

ಭಾರೀ ವಿವಾದಕ್ಕೆ ಕಾರಣವಾಗಿದ್ದ ಹನುಮ ಮಾಲಧಾರಿಗಳ ಸಂಕೀರ್ತನಾ ಯಾತ್ರೆ ರಂಗನಾಥಸ್ವಾಮಿ ದೇಗುಲದ ಮೈದಾನದಲ್ಲಿ ಮುಕ್ತಾಯಗೊಂಡಿದೆ. ಇದೀಗ ಪೇಟೆ ಬೀದಿ ಮೂಲಕ ತೆರಳಿ ಯಾತ್ರೆ ಮುಕ್ತಾಯಗೊಂಡಿದೆ. ಯಾತ್ರೆ ಸಲುವಾಗಿ ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದೆ. ಇದನ್ನೂ ಓದಿ:  ಇಡ್ಲಿ, ನಾಟಿಕೋಳಿ ತಿಂದಮೇಲೆ ಎಲ್ಲವೂ ಮುಗಿದಿದೆ, ಇನ್ನು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ: ಇಕ್ಬಾಲ್ ಹುಸೇನ್

TAGGED:hanuma maleJama MasjidmandyaMandya Sankirtana YatraSankeertana YatraSrirangapatnaಮಂಡ್ಯಶ್ರೀರಂಗಪಟ್ಟಣಹನುಮ ಧ್ವಜಹನುಮ ಮಾಲಾಧಾರಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
48 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?