Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಮೈಲಿಗಲ್ಲು ಬರೆಯಲಿದೆ ಇಸ್ರೋ: ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್, ಜಿಸ್ಯಾಟ್ ಉಪಗ್ರಹದ ಲಾಭ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಹೊಸ ಮೈಲಿಗಲ್ಲು ಬರೆಯಲಿದೆ ಇಸ್ರೋ: ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್, ಜಿಸ್ಯಾಟ್ ಉಪಗ್ರಹದ ಲಾಭ ಏನು?

Karnataka

ಹೊಸ ಮೈಲಿಗಲ್ಲು ಬರೆಯಲಿದೆ ಇಸ್ರೋ: ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್, ಜಿಸ್ಯಾಟ್ ಉಪಗ್ರಹದ ಲಾಭ ಏನು?

Public TV
Last updated: June 5, 2017 5:07 pm
Public TV
Share
4 Min Read
isro gslv gsat final
SHARE

ಶ್ರೀಹರಿಕೋಟಾ: ಚಂದ್ರಯಾನ, ಮಂಗಳಯಾನ, ಸ್ವದೇಶಿ ಜಿಪಿಎಸ್ ಹೊಂದುವ ಕನಸನ್ನು ನನಸಾಗಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಇಂದು ಮತ್ತೊಂದು ಮೈಲಿಗಲ್ಲು ಸಾಧಿಸಲು ಸನ್ನದ್ಧವಾಗಿದೆ. ಇಸ್ರೋ ಇತಿಹಾಸದಲ್ಲೇ ಅತೀ ಹೆಚ್ಚು ಶಕ್ತಿಶಾಲಿಯಾದ ಜಿಎಸ್‍ಎಲ್‍ವಿ ಎಂಕೆ3 ರಾಕೆಟ್ ಉಡಾವಣೆ ಮಾಡಲಿದೆ.

ಸ್ವದೇಶಿ ಕ್ರಯೋಜನಿಕ್ ಸಿ-25 ಇಂಜಿನ್ ಹೊಂದಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 5.28ಕ್ಕೆ ನಭಕ್ಕೆ ಚಿಮ್ಮುವ ಮೂಲಕ ಜಿಸ್ಯಾಟ್ 19 ಉಪಗ್ರಹವನ್ನು ಇಂದು ಕಕ್ಷೆಗೆ ಸೇರಲಿದೆ. ಹೀಗಾಗಿ ಈ ರಾಕೆಟ್ ವಿಶೇಷತೆ ಏನು? ಉಪಗ್ರಹದಿಂದ ಆಗೋ ಲಾಭ ಏನು? ಭಾರತಕ್ಕೆ ಆಗುವ ಲಾಭ ಏನು ಇತ್ಯಾದಿ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ಏನಿದು ಜಿಎಸ್‍ಎಲ್‍ವಿ ಮಾರ್ಕ್-3?
ಇಸ್ರೋ ವಿಜ್ಞಾನಿಗಳ 25 ವರ್ಷಗಳ ಪರಿಶ್ರಮದ ಫಲದಿಂದ ಜಿಎಸ್‍ಎಲ್‍ವಿ ರಾಕೆಟ್ ತಯಾರಾಗಿದೆ. 640 ಟನ್ ತೂಕದ ಈ ರಾಕೆಟ್‍ಗೆ ಸ್ವದೇಶಿ ನಿರ್ಮಿತ ಕ್ರಯೋಜೆನಿಕ್ ಎಂಜಿನ್ ಬಳಕೆಯಾಗಿದೆ. 43.43 ಮೀಟರ್ ಉದ್ದ, 4 ಮೀಟರ್ ಸುತ್ತಳತೆಯನ್ನು ಈ ರಾಕೆಟ್ ಹೊಂದಿದ್ದು, 200 ಕ್ಕೂ ಹೆಚ್ಚು ಬಾರಿ ಪರೀಕ್ಷೆಗೊಳಪಡಿಸಲಾಗಿದೆ.

ಸ್ವದೇಶಿ ಕ್ರಯೋಜನಿಕ್ ಎಂಜಿನ್ ರೂಪುಗೊಂಡಿದ್ದು ಹೇಗೆ?
1999ರ ಭಾರತ ಪಾಕ್ ಯುದ್ಧದ ವೇಳೆ ಅಮೆರಿಕ ಜಿಪಿಎಸ್ ಮಾಹಿತಿ ನೀಡಲು ನಿರಾಕರಿಸಿದ್ದಕ್ಕೆ ಇಸ್ರೋ ವಿಜ್ಞಾನಿಗಳು ಈಗ ಸ್ವದೇಶಿ ಜಿಪಿಎಸ್ ವ್ಯವಸ್ಥೆಯನ್ನು ರೂಪಿಸುವಲ್ಲಿ ಯಶಸ್ವಿಯಾಗಿದ್ದರೆ. ಇದೇ ರೀತಿಯ ಕಥೆ ಸ್ವದೇಶಿ ಕ್ರಯೋಜನಿಕ್ ಎಂಜಿನ್ ತಯಾರಿಕೆಯಲ್ಲೂ ಇದೆ. ಕ್ರಯೋಜನಿಕ್ ಎಂಜಿನ್ ಗಾಗಿ ಭಾರತ ರಷ್ಯಾವನ್ನು ಅವಲಂಬಿಸಿತ್ತು ಅಷ್ಟೇ ಅಲ್ಲದೇ ಒಪ್ಪಂದ ಸಹ ಮಾಡಿಕೊಂಡಿತ್ತು. ಆದರೆ ಈ ಕ್ರಯೋಜನಿಕ್ ಎಂಜಿನ್ ಭಾರತ ಕ್ಷಿಪಣಿಗಳಿಗೆ ಬಳಸುತ್ತದೆ ಎನ್ನುವ ಭೀತಿಯನ್ನು ಅಮೆರಿಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಷ್ಯಾ ಭಾರತಕ್ಕೆ ನೀಡಲು ನಿರಾಕರಿಸಿತು. ಇದರಿಂದಾಗಿ ಇಸ್ರೋ ವಿಜ್ಞಾನಿಗಳು ಸ್ವದೇಶಿ ಕ್ರಯೋಜನಿಕ್ ಎಂಜಿನ್ ತಯಾರಿಸಲು ಮುಂದಾದರು. 2014ರ ಡಿಸೆಂಬರ್ 18ರಂದು ಜಿಎಸ್‍ಎಲ್‍ವಿ ಮಾರ್ಕ್-3ಯ ಪ್ರಾಯೋಗಿಕ ಉಡಾವಣೆ ಮಾಡಲಾಗಿತ್ತು. ಆದರೆ ಇದರಲ್ಲಿ ಕ್ರಯೋಜೆನಿಕ್ ಎಜಿನ್ ಬಳಕೆ ಮಾಡಿರಲಿಲ್ಲ. ಈ ಬಾರಿ ಕ್ರಯೋಜೆನಿಕ್ ಎಂಜಿನ್ ಅಳವಡಿಸಲಾಗಿದೆ.

ಪವರ್‍ಫುಲ್ ರಾಕೆಟ್:
ಇಸ್ರೋ ಹೆಚ್ಚಾಗಿ ತನ್ನ ಉಪಗಹಗಳನ್ನು ಉಡಾವಣೆ ಮಾಡಲು ಪಿಎಸ್‍ಎಲ್‍ವಿ(ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್), ಮತ್ತು ಜಿಎಸ್‍ಎಲ್‍ವಿ(ಜಿಯೋಸಿಂಕ್ರೋನಾಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್) ಬಳಕೆ ಮಾಡುತ್ತದೆ. ಪಿಎಸ್‍ಎಲ್‍ವಿ 1500 ಕೆಜಿ ತೂಕ ಸಾಮಥ್ರ್ಯದ ಉಪಗ್ರಹಗಳನ್ನು ಕಕ್ಷಗೆ ಸೇರಿಸುವ ಸಾಮಥ್ರ್ಯವನ್ನು ಹೊಂದಿದ್ದರೆ, ಈ ಜಿಎಸ್‍ಎಲ್‍ವಿ ಮಾರ್ಕ್ 3 ರಾಕೆಟ್ 4 ಸಾವಿರ ಕೆಜಿ ತೂಕದ ಉಪಗ್ರಹಗಳನ್ನು ಒಯ್ಯುವ ಸಾಮರ್ಥ್ಯ ಹೊಂದಿದೆ. 640 ಟನ್ ತೂಕದ ಈ ರಾಕೆಟ್ ಪ್ರಯಾಣಿಕರಿಂದ ತುಂಬಿರುವ 5 ಜಂಬೋ ವಿಮಾನಗಳ ತೂಕಕ್ಕೆ ಸಮವಾಗಿದೆ.

ಭಾರತಕ್ಕೆ ಲಾಭ ಏನು?
ಇಸ್ರೋ ಇಲ್ಲಿಯವರೆಗೆ ಭಾರದ ಉಪಗ್ರಹಗಳನ್ನು ವಿದೇಶಿ ರಾಕೆಟ್‍ಗಳ ಮೂಲಕ ಉಡಾವಣೆ ಮಾಡುತಿತ್ತು. ಇನ್ನು ಮುಂದೆ ಈ ಯಶಸ್ಸಿನಿಂದ ಅನ್ಯದೇಶಗಳ ಅವಲಂಬನೆ ತಪ್ಪಲಿದೆ. ಅಷ್ಟೇ ಅಲ್ಲದೇ ಮಾನವ ಸಹಿತ ಬಾಹ್ಯಾಕಾಶ ಯಾತ್ರೆ ಕೈಗೊಳ್ಳಲು ಈ ರಾಕೆಟ್ ಸಹಾಯವಾಗಲಿದೆ.

ಈ ರಾಕೆಟ್ ಮಹತ್ವ ಯಾಕೆ?
ಈಗಾಗಲೇ ಕೇವಲ 454 ಕೋಟಿ ರೂ. ಮಂಗಳಯಾನ ಕೈಗೊಳ್ಳುವ ಮೂಲಕ ಇಸ್ರೋ ವಿಶ್ವದಲ್ಲೇ ಕಡಿಮೆ ವೆಚ್ಚದಲ್ಲಿ ಮಂಗಳನ ಅಂಗಳಕ್ಕೆ ಉಪಗ್ರಹ ಕಳುಹಿಸಿದ ದೇಶ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈಗ ಇಸ್ರೋದಿಂದ ಉಪಗ್ರಹ ಉಡಾವಣೆ ವೆಚ್ಚ ಉಳಿದ ಏಜೆನ್ಸಿಗಳಿಗಿಂತ 11 ಪಟ್ಟು ಅಗ್ಗವಾಗಿದ್ದು, ಪ್ರತಿವರ್ಷ 12 ಉಪಗ್ರಹಗಳನ್ನು ಉಡಾವಣೆ ಮಾಡುವ ಉದ್ದೇಶವನ್ನು ಇಸ್ರೋ ಹೊಂದಿದೆ.

ಉಪಗ್ರಹದ ವಿಶೇಷತೆ ಏನು?
ಜಿಎಸ್‍ಎಲ್‍ವಿ ಮಾರ್ಕ್ 3 ರಾಕೆಟ್ 3136 ಕೆಜಿ ತೂಕವಿರುವ ಜಿಸ್ಯಾಟ್ -19 ಉಪಗ್ರಹವನ್ನು ಕಕ್ಷೆಗೆ ಸೇರಿಸಲಿದೆ. ಇದು ಇಸ್ರೋ ಉಡಾಯಿಸುತ್ತಿರುವ ಭಾರೀ ತೂಕ ಉಪಗ್ರಹವಾಗಿದೆ. ಕಳೆದ ತಿಂಗಳ 5 ರಂದು ಜಿಎಸ್‍ಎಲ್‍ವಿ ಮಾರ್ಕ್ 2 ರಾಕೆಟ್‍ನೊಂದಿಗೆ 2,230 ಕೆಜಿ ತೂಕದ ದಕ್ಷಿಣ ಏಷ್ಯಾ ಉಪಗ್ರಹ ಜಿಸ್ಯಾಟ್ 9 ಉಡಾವಣೆಯನ್ನು ಇಸ್ರೋ ಮಾಡಿತ್ತು. ಇದು ಇದೂವರೆಗಿನ ಇಸ್ರೋ ಉಡಾಯಿಸಿದ ಅತಿಹೆಚ್ಚು ತೂಕದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಉಪಗ್ರಹದ ಲಾಭ ಏನು?
ಈ ಹಿಂದೆ ಉಡಾವಣೆಯಾಗಿರುವ ಹಳೆಯ 6,7 ಸಂವಹನ ಉಪಗ್ರಹಗಳಿಗೆ ಜಿಸ್ಯಾಟ್-19 ಸಮವಾಗಿದ್ದು ಕೆ-ಎ ಮತ್ತು ಕೆ-ಯು ಬ್ಯಾಂಡ್‍ನ ಟ್ರಾನ್ಸ್ ಪಾಂಡರ್ ಅಳವಡಿಸಲಾಗಿದೆ. ಇದರ ಬಳಕೆಯಿಂದ ಇಂಟರ್‍ನೆಟ್, ದೂರವಾಣಿ ಮತ್ತು ವಿಡಿಯೋ ಸೇವೆಗಳ ಗುಣಮಟ್ಟ ಸುಧಾರಣೆಯಾಗಲಿದೆ. ಕಕ್ಷೆ ಸೇರಿದ ಬಳಿಕ ಇಂಟರ್‍ನೆಟ್ ವೇಗ ಮತ್ತು ಕನೆಕ್ಟಿವಿಟಿ ಹೆಚ್ಚಾಗಲಿದೆ. ಇಸ್ರೋ ಇದರಲ್ಲಿ ಮಲ್ಟಿಪಲ್ ಸ್ಪಾಟ್ ಬೀಮ್ ಅಳವಡಿಸಿದೆ. ಉಪಗ್ರಹದಲ್ಲಿ ವಿಕಿರಣ ಸ್ಪೆಕ್ಟ್ರೋಮೀಟರ್(ಜಿಆರ್‍ಎಎಸ್‍ಪಿ) ಅಳವಡಿಸಲಾಗಿದ್ದು ಇದು ಪ್ರಕೃತಿ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಮೇಲೆ ವಿಕಿರಣಗಳ ಪ್ರಭಾವವನ್ನೂ ಅಧ್ಯಯನ ನಡೆಸಲಿದೆ. ಅಷ್ಟೇ ಅಲ್ಲದೇ ಮೊದಲ ಬಾರಿಗೆ ಸ್ವದೇಶಿ ಲಿಥಿಯಾಂ ಆಯಾನ್ ಬ್ಯಾಟರಿಯನ್ನು ಇಸ್ರೋ ಬಳಕೆ ಮಾಡಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಬ್ಯಾಟರಿಗಳನ್ನು ಎಲೆಕ್ಟ್ರಿಕ್ ಬಸ್, ಕಾರುಗಳಲ್ಲಿ ಬಳಸಬಹುದಾಗಿದೆ.

ಆದಿಚುಂಚನಗಿರಿ ಶ್ರೀ ಭಾಗಿ:
ರಾಕೆಟ್ ಉಡಾವಣೆಗೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹಸಿರು ನಿಶಾನೆ ತೋರಲಿದ್ದಾರೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿ ನಡೆಯಲಿರುವ ರಾಕೆಟ್ ಉಡಾವಣೆಗೆ ಇಸ್ರೋದಿಂದ ಸ್ವಾಮೀಜಿ ಅವರಿಗೆ ಆಹ್ವಾನ ಬಂದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಮಲಾನಂದನಾಥ ಸ್ವಾಮೀಜಿ ತೆರಳಿದ್ದಾರೆ.

isro gslv gsat 2

isro gslv gsat 3

isro gslv gsat 4

isro gslv gsat 5

isro gslv gsat 6

isro gslv gsat 7

isro gslv gsat 8

isro gslv gsat 9

isro gslv gsat 10

isro gslv gsat 1

ಇಸ್ರೋದ ಸ್ವದೇಶಿ ಜಿಪಿಎಸ್ ಸಾಧನೆ ಇನ್ಫೋಗ್ರಾಫಿಕ್

Isro gps NavIC

TAGGED:communicationscryogenic enginegsat 19GSLVinternetISROಇಂಟರ್‍ನೆಟ್ಇಸ್ರೋಕ್ರಯೋಜನಿಕ್ ಎಂಜಿನ್ಜಿಎಸ್‍ಎಲ್‍ವಿಜಿಸ್ಯಾಟ್ಮಾರ್ಕ್ 3
Share This Article
Facebook Whatsapp Whatsapp Telegram

Cinema news

Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood
Dear Husband
Dear Husband ಚಿತ್ರದ ಟೈಟಲ್ ಲಾಂಚ್ ಮಾಡಿದ ಕಿಚ್ಚ
Cinema Latest Sandalwood Top Stories
Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows
Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood

You Might Also Like

BJP delegation requests Governor not to sign Hate Speech and Hate Crimes Prevention Bill 2025
Bengaluru City

ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

Public TV
By Public TV
29 minutes ago
MB patil Yamaha EC 06
Automobile

ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ Yamaha EC-06 ಬೈಕ್ ಹಸ್ತಾಂತರ

Public TV
By Public TV
36 minutes ago
The first file signed by PM Narendra Modi pertains to PM Kisan Nidhi release
Latest

1947ರ ಬಳಿಕ ಫಸ್ಟ್‌ ಟೈಮ್‌ – ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌

Public TV
By Public TV
53 minutes ago
H.D Revanna
Districts

ನಾನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತು – ಶಿವಲಿಂಗೇಗೌಡಗೆ ರೇವಣ್ಣ ತಿರುಗೇಟು

Public TV
By Public TV
1 hour ago
Mallikarjun kharge
Bengaluru City

G Ram G ಕಾಯ್ದೆ | ಕಾಂಗ್ರೆಸ್ ಹೋರಾಟ ನಿಲ್ಲಲ್ಲ, ಇಲ್ಲಿಗೆ ಬಿಡಲ್ಲ – ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Public TV
By Public TV
1 hour ago
veterinarian dies after drowning in sharavati backwater in sagar
Crime

ಸಾಗರ | ಶರಾವತಿ ಹಿನ್ನೀರಲ್ಲಿ ಮುಳುಗಿ ಪಶುವೈದ್ಯ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?