ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ (Kukke Subrahmanya) ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ಹೌದು. ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ (Kiru Shashti) ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು
ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22 ರಂದು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸೋ ಎಚ್ಚರಿಕೆ ನೀಡಲಾಗಿದೆ. ಕುಕ್ಕೆ ಕ್ಷೇತ್ರ ಮುಜರಾಯಿ ಇಲಾಖೆಯ ಅಧೀನದಲ್ಲಿರೋದ್ರಿಂದ ಸರ್ಕಾರದ ಶಿಷ್ಟಾಚಾರ ಪ್ರಕಾರ ಎಲ್ಲರನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಅನ್ಯಧರ್ಮಿಯರಾದ ಸ್ಪೀಕರ್ ಯು.ಟಿ.ಖಾದರ್, ಎಂಎಲ್ಸಿ ಐವನ್ ಡಿಸೋಜಾ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಫೂರ್, ಕನಿಷ್ಠ ವೇತಾತ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಜೋಕಿಂ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಪಿಂಟೋಗೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಉಡುಪಿ| ಕೊಲ್ಲೂರು ದೇಗುಲದ ಹೆಸರಲ್ಲಿ ನಕಲಿ ವೆಬ್ಸೈಟ್; ಭಕ್ತರ ವಂಚಿಸುತ್ತಿದ್ದ ಆರೋಪಿ ರಾಜಸ್ಥಾನದಲ್ಲಿ ಅಂದರ್
ಇದು ಹಿಂದೂ ಧರ್ಮಿಯರ ಕೆಂಗಣ್ಣಿಗೆ ಗುರಿಯಾಗಿದೆ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರನ್ನ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಆಹ್ವಾನ ನೀಡೋದು ಖಂಡನೀಯ ಅಂತಾ ಕ್ಷೇತ್ರ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಚಿದಾನಂದ ಕಂದಡ್ಕ ಮತ್ತು ಸದಸ್ಯರಿಂದ ದೂರು ನೀಡಲಾಗಿದೆ. ಇದನ್ನೂ ಓದಿ: ಇನ್ಮುಂದೆ `No Birth Tourism’ – ಹೆರಿಗೆಗಾಗಿ USಗೆ ಹೋಗಿ ಪೌರತ್ವ ಪಡೆಯೋ ಭಾರತೀಯರಿಗೆ ಶಾಕ್



