Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಕ್ಕೆ ಸದ್ದಿಲ್ಲದೇ ಸಾರಿಗೆ ಮುಷ್ಕರಕ್ಕೆ ಮುಂದಾದ ಸಿಬ್ಬಂದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ವರ್ಷಕ್ಕೆ ಸದ್ದಿಲ್ಲದೇ ಸಾರಿಗೆ ಮುಷ್ಕರಕ್ಕೆ ಮುಂದಾದ ಸಿಬ್ಬಂದಿ

Bengaluru City

ಹೊಸ ವರ್ಷಕ್ಕೆ ಸದ್ದಿಲ್ಲದೇ ಸಾರಿಗೆ ಮುಷ್ಕರಕ್ಕೆ ಮುಂದಾದ ಸಿಬ್ಬಂದಿ

Public TV
Last updated: December 22, 2025 4:44 pm
Public TV
Share
3 Min Read
Karnataka Transport Staff To Go On Strike
SHARE

ಬೆಂಗಳೂರು: ಸದ್ದಿಲ್ಲದೇ ಹೊಸ ವರ್ಷಕ್ಕೆ ಮುಷ್ಕರ (Transport Strike) ನಡೆಸಲು ಸಾರಿಗೆ ಸಿಬ್ಬಂದಿ ಮುಂದಾಗಿದ್ದಾರೆ.

ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ (Majestic Bus Stand) ಸಿಬ್ಬಂದಿಗಳಿಗೆ ಕರಪತ್ರ ವಿತರಣೆಯಾಗಿದ್ದು ಬೇಡಿಕೆ ಈಡೇರದೇ ಇದ್ದರೆ ಮುಷ್ಕರ ಅನಿವಾರ್ಯ ಎಂದು ತಿಳಿಸಲಾಗಿದೆ.

ಬೆಳಗಾವಿ ಅಧಿವೇಶನದ (Belagavi Session) ಬಳಿಕ ಸ್ಪಂದಿಸುವ ಬಗ್ಗೆ ಸರ್ಕಾರ ಭರವಸೆ ಕೊಟ್ಟಿದೆ. ಸರ್ಕಾರ ಬೇಡಿಕೆ ಈಡೇರಿಸದೇ ಇದ್ದರೆ ಮುಷ್ಕರಕ್ಕೆ ಸಿದ್ದರಾಗಿ ಎಂದು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಪರವಾಗಿ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಜಯದೇವರಾಜೇ ಅರಸ್‌ ಮಾತನಾಡಿ, 38 ತಿಂಗಳ ಹಿಂಬಾಕಿ ನೀಡಬೇಕು. ಸರ್ಕಾರ ಕೂಡಲೇ ಬೇಡಿಕೆ ಈಡೇರಿಸಬೇಕು. ಇಲ್ಲದೇ ಇದ್ದರೆ ಜನವರಿ ಮೊದಲ ವಾರದಲ್ಲಿ ಮುಷ್ಕರದ ಬಿಸಿ ಜನರಿಗೆ ತಟ್ಟಲಿದೆ. ಒಂದೇ ಒಂದು ಬಸ್ ಡಿಪೋದಿಂದ ಹೊರಗೆ ಬರುವುದಿಲ್ಲ. ಸರ್ಕಾರಕ್ಕೆ ನೀಡುತ್ತಿರುವ ಕೊನೆಯ ಎಚ್ಚರಿಕೆಯಿದು ಎಂದು ಹೇಳಿದ್ದಾರೆ.

ಪ್ರತಿ 4 ವರ್ಷಗಳಿಗೊಮ್ಮೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ನಡೆಯುತ್ತದೆ. ಈ ಹಿಂದೆ 2012-2016ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2012ರಿಂದ ಜಾರಿಗೆ ಬರುವುದಾಗಿ, 2016-2020ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2016ರಿಂದ ಜಾರಿಗೆ ಬರುವಂತೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖವಾಗಿತ್ತು.  ಇದನ್ನೂ ಓದಿ: `ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?

2023ರ ಆದೇಶದಲ್ಲಿ 2023ರ ಮಾರ್ಚ್ 1ರಿಂದ ಜಾರಿಗೆ ಬರುವಂತೆ ಎಂದು ಉಲ್ಲೇಖಿಸಿದೆ. ಈ ಆದೇಶದಲ್ಲಿ 2020 ರಿಂದ ಎಂದು ಉಲ್ಲೇಖ ಮಾಡಿಲ್ಲ. ಈ ಆದೇಶದ ಅನ್ವಯ ಮುಂದಿನ 4 ವರ್ಷ ಅಂದರೆ 2027 ರವರೆಗೆ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ. ಆದೇಶದಲ್ಲಿ ಎಲ್ಲಿಯೂ ಸ್ಪಷ್ಟವಾಗಿ 2020 ರಿಂದಲೇ ಜಾರಿಗೆ ಬರುವಂತೆ ಎಂದು ಉಲ್ಲೇಖ ಮಾಡದ ಕಾರಣ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂಬ ವಾದವನ್ನು ಕಾಂಗ್ರೆಸ್‌ ಸರ್ಕಾರ ಮುಂದಿಟ್ಟಿತ್ತು. ಈ ವಿಚಾರದ ಬಗ್ಗೆ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸಿದಾಗ ಬೆಳಗಾವಿ ಅಧಿವೇಶನದ ಬಳಿಕ ಭರವಸೆ ಈಡೇರಿಸುವುದಾಗಿ ಸರ್ಕಾರ ಹೇಳಿತ್ತು.

2020ರಲ್ಲಿ ಏನಾಗಿತ್ತು?
ಕೋವಿಡ್‌ ಲಾಕ್‌ಡೌನ್‌ ಕಾರಣದಿಂದ 2020 ರಲ್ಲಿ ಕೆಲ ತಿಂಗಳು ಬಸ್ಸುಗಳ ಸಂಚಾರವನ್ನು ಬಂದ್‌ ಮಾಡಲಾಗಿತ್ತು. ನಂತರ ಸೇವೆ ಆರಂಭಗೊಂಡಿದ್ದರೂ ಜನ ಕಡಿಮೆ ಪ್ರಮಾಣದಲ್ಲಿ ಸಂಚರಿಸುತ್ತಿದ್ದರು. ಕೋವಿಡ್ ಸಮಯದಲ್ಲಿ ಪೂರ್ಣ/ ಅಪೂರ್ಣ ಪ್ರಮಾಣದಲ್ಲಿ ಬಸ್ಸುಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದರಿಂದ ಸಾರಿಗೆ ಇಲಾಖೆ ಮುಳುಗುವ ಹಂತದಲ್ಲಿತ್ತು.

ಈ ಕಠಿಣ ಪರಿಸ್ಥಿತಿಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳ‌ ಸಿಬ್ಬಂದಿ ವೇತನ‌ ಹಾಗೂ ಇತರೇ ಭತ್ಯೆಗಳನ್ನು ಸರ್ಕಾರ ಪಾವತಿ ಮಾಡಿತ್ತು. ಆದರೆ ಸಂಬಳವನ್ನು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿರಲಿಲ್ಲ. ಕೋವಿಡ್‌ ನಂತರ ಬಸ್ಸುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಇಳಿದ ಬಳಿಕ 2023 ರಲ್ಲಿ ಬಿಜೆಪಿ ಸರ್ಕಾರ ವೇತನ ಪರಿಷ್ಕರಣೆ ಮಾಡಿತ್ತು.

ನೌಕರರ ವಾದ ಏನು?
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿಲ್ಲ ಮತ್ತು ಕಡಿಮೆ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದರು. ಆದರೆ ಈಗ ಬಸ್ಸುಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡಿದ್ದರೂ ನಿರ್ವಾಹಕರು ಟಿಕೆಟ್‌ ಹರಿಯುತ್ತಾರೆ. ಉಚಿತ ಟಿಕೆಟ್‌ ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಪಾವತಿ ಮಾಡಬೇಕು.

ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿ ಮೈಲಿಗಲ್ಲು ಸ್ಥಾಪಿಸಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ಆದಾಯವೂ ಜಾಸ್ತಿಯಾಗಿದೆ. ಆದಾಯ ಜಾಸ್ತಿಯಾಗಿರುವ ಕಾರಣ ಸರ್ಕಾರ ಸಂಬಳ ಏರಿಕೆ ಮಾಡಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ.

TAGGED:belagavi sessionbengaluruNew YearTransport strikeಕರಪತ್ರಸಾರಿಗೆ ಮುಷ್ಕರಹೊಸ ವರ್ಷ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
2 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
3 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
3 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
3 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
4 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?