Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ: ಜೋಶಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ: ಜೋಶಿ ಕಿಡಿ

Karnataka

ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ: ಜೋಶಿ ಕಿಡಿ

Public TV
Last updated: December 30, 2025 11:54 am
Public TV
Share
2 Min Read
Prahlad Joshi 1
SHARE

– ರಾಜ್ಯ ಸರ್ಕಾರದಿಂದ ಶರವೇಗದ ತುಷ್ಟೀಕರಣ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರಿನ ಕೋಗಿಲು (Kogilu Layout) ಅತಿಕ್ರಮಣದಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು ತುಷ್ಟೀಕರಣದ ಶರವೇಗವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ರೈತರು, ಬೆಳೆಹಾನಿ ಸಂತ್ರಸ್ತರು ಮತ್ತು ಇತರೆ ನಿರಾಶ್ರಿತರು ಪರ್ಯಾಯ ವ್ಯವಸ್ಥೆ ಹಾಗೂ ಪರಿಹಾರಕ್ಕಾಗಿ ವರ್ಷಾನುಗಟ್ಟಲೆ ಕಾಯುತ್ತಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳೂ ಗ್ಯಾರಂಟಿ ನಿಧಿಗಾಗಿ ಕಾಯುತ್ತಿದ್ದಾರೆ. ಆದರೆ, ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಮಾತ್ರ ಕ್ಷಣಾರ್ಧದಲ್ಲಿ ಪರಿಹಾರ, ಪರ್ಯಾಯ ವ್ಯವಸ್ಥೆಗೆ ಮುಂದಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಮಿತಿಮೀರಿದ ಧರ್ಮ ಓಲೈಕೆ ಆಡಳಿತವನ್ನು ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಣ ಕೊಟ್ಟಿದ್ದು ಅವ್ನು, ತೆಗೆದುಕೊಂಡಿದ್ದು ನಾನು – ಶರಣು ಸಲಗರ್ ಆಡಿಯೋ ವೈರಲ್, ದುಡ್ಡು ಪಡೆದು ಉಲ್ಟಾ ಹೊಡೆದ್ರಾ?

ಅತಿಕ್ರಮಣದಾರರಿಗೆ ಮನೆ ಮತ್ತು ಸಬ್ಸಿಡಿ ವಿಪರ್ಯಾಸ:
ಈ ಅತಿಕ್ರಮಣದಾರರಿಗೆ ಮನೆ ಕಟ್ಟಿಕೊಳ್ಳಲು ನೆರವು ನೀಡುವುದಾಗಿ ಸಹ ಘೋಷಿಸಿದ್ದು, ಪ್ರತಿ ಮನೆಗೆ 8 ರಿಂದ 11 ಲಕ್ಷ ರೂ. ಮತ್ತು ಸಬ್ಸಿಡಿ ನೀಡುವುದಾಗಿ ಹೇಳಿದ್ದು, ಇದೊಂದು ಬಾರಿ ಪರಿಹಾರ ಕಲ್ಪಿಸಲಾಗುತ್ತದೆ ಎಂದಿರುವುದು ವಿಪರ್ಯಾಸ. ಸರ್ಕಾರದ್ದು ಅದ್ಯಾವ ರೀತಿಯ ಪರಿಹಾರ ಕ್ರಮ ಎಂದು ಜೋಶಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಲ್ಲಿ ಕಿತ್ತಾಡಿಕೊಂಡ ರಕ್ಷಿತಾ-ಸ್ಪಂದನಾ; ಮಾಳು ಹೊರಹೋಗೋದಕ್ಕೆ ಕಾರಣ ಯಾರು?

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೇವಲ ಒಂದು ಧರ್ಮದ ಓಲೈಕೆಯಲ್ಲೇ ಮುಳುಗಿದೆ. ತುಷ್ಟೀಕರಣಕ್ಕಾಗಿ ಶರವೇಗದಲ್ಲಿ ಪರಿಹಾರ ಕ್ರಮ ಕೈಗೊಂಡಿದೆ. ಅಲ್ಲದೇ, ಔಪಚಾರಿಕ ಪರಿಹಾರ ನೀಡಲು ಮುಂದಾಗಿದ್ದು, ಅತಿ ಬೇಸರದ ಸಂಗತಿ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೈಕುಂಠ ಏಕಾದಶಿ – ಮಾಲೂರಿನ ಚಿಕ್ಕ ತಿರುಪತಿ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ

ಬರ, ಪ್ರವಾಹದಂತಹ ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಪಡೆಯಲು ರಾಜ್ಯದ ಸಂತ್ರಸ್ತರು ವರ್ಷಗಳಿಂದ ಕಾಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ಎರಡು ದಿನಗಳಲ್ಲಿ ಪರಿಹಾರ ಒದಗಿಸಿ ತನ್ನ ಧರ್ಮಾಧಾರಿತ ಆಡಳಿತವನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಿವರ್ಸ್‌ ತೆಗೆಯುವಾಗ ಬಸ್‌ ಡಿಕ್ಕಿ; 4 ಮಂದಿ ಸಾವು – 9 ಜನರಿಗೆ ಗಾಯ

ಪಕ್ಕದ ರಾಜ್ಯದ ಕಾಂಗ್ರೆಸ್ ನಾಯಕರೊಬ್ಬರು ಕರೆ ಮಾಡಿ, ತಕ್ಷಣ ಪರಿಹಾರ ಕ್ರಮಕ್ಕೆ ನಿರ್ದೇಶಿಸಿದ್ದು, ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷದ ನಾಯಕತ್ವದ ಕೈಗೊಂಬೆಯಾಗಿ ವರ್ತಿಸುತ್ತಿದೆ. ತನ್ನ ಆದ್ಯ ಕರ್ತವ್ಯ ಮತ್ತು ಕಾನೂನಿನ ಪರಿಮಿತಿಯ ಜವಾಬ್ದಾರಿಯನ್ನು ಗಾಳಿಗೆ ತೂರಿ, ತುಷ್ಟೀಕರಣ ರಾಜಕಾರಣದ ಪರಮಾವಧಿಯನ್ನು ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ| ಒಂದೇ ವರ್ಷದಲ್ಲಿ 704 ಕಡೆ ಆನೆ ದಾಳಿಯಿಂದ ಬೆಳೆ ಹಾನಿ; 23 ಲಕ್ಷ ಹಣ ಪರಿಹಾರ ಬಾಕಿ

ಈ ಸರ್ಕಾರದ ಆಡಳಿತದಲ್ಲಿ ರೈತರು, ನಿಜವಾದ ಸಂತ್ರಸ್ತರು, ಗೃಹಲಕ್ಷ್ಮಿ ಫಲಾನುಭವಿಗಳು ಕಾಯಬೇಕಾದ ಪರಿಸ್ಥಿತಿ ಇದೆಯೇ ವಿನಃ ಅಕ್ರಮವಾಗಿ ಅತಿಕ್ರಮಿಸಿದವರು ಕಾಯುವಂತಿಲ್ಲ ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜೆಸಿಬಿಗಳ ಘರ್ಜನೆ – ರಸ್ತೆ ಬದಿಯ ಗೂಡಂಗಡಿಗಳ ತೆರವು

TAGGED:Building demolitioncongresskarnatakaKogilu crossNew DelhiPralhad Joshiಕರ್ನಾಟಕಕಾಂಗ್ರೆಸ್ಕೋಗಿಲು ಕ್ರಾಸ್ನವದೆಹಲಿಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
11 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
19 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
21 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?