Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ

Cinema

ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ

Public TV
Last updated: January 7, 2026 6:34 pm
Public TV
Share
3 Min Read
Koragajja Sudheer Atthavar
SHARE

ಹೊಸವರ್ಷದ ಶುಭಾರಂಭದಂದು ಸಾಂಗ್ಸ್ ಪ್ರೀಮಿಯರ್ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ ಕೊರಗಜ್ಜ (Koragajja) ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಹಾಲಿಡೇ ಇನ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾವು ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆಯನ್ನು ಘೋಷಿಸಿದ್ದೇವೆಯೇ ಹೊರತು, ತ್ರಿವಿಕ್ರಮ ಸಪಲ್ಯ ನಿರ್ಮಾಣದಲ್ಲಿರುವ ಕೊರಗಜ್ಜ ಚಿತ್ರದ ದೈವದ ಬಗ್ಗೆ ರೀಲ್ಸ್ ಮಾಡಿ ಎಂದು ಹೇಳಿಲ್ಲ. ನಮ್ಮ ಮಾತನ್ನು ಕರ್ನಾಟಕದ ಕೆಲ ಭಾಗಗಳಲ್ಲಿ ತಪ್ಪಾಗಿ ಅರ್ಥೈಸಲಾಗಿದೆ ಎಂದು ನಿರ್ದೇಶಕ ಸುಧೀರ್‌ ಅತ್ತಾವರ್‌ (Sudheer Atthavar) ಸ್ಪಷ್ಟಪಡಿಸಿದ್ದಾರೆ.

ರೀಲ್ಸ್ ಎಂದರೆ ವೀಡಿಯೋ ತುಣುಕುಗಳು. ಈಗಾಗಲೇ ದೈವಗಳ ಬಗ್ಗೆ ಮತ್ತು ದೈವದ ಆರಾಧನಾ ಕ್ರಮಗಳಾದ ಕೋಲ, ನೇಮ, ತಂಬಿಲ, ಅಗೆಲು… ಹೀಗೆ ದೈವದ ವಿಚಾರವಾಗಿ ಸಹಸ್ರಾರು ರೀಲ್ಸ್‌ಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಹೀಗಿರುವಾಗ, ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆ ಏರ್ಪಡಿಸಿದರೆ ತಪ್ಪೇನು? ಆದಾಗ್ಯೂ ಅಶ್ಲೀಲ, ಅಸಂಬದ್ದ ಮತ್ತು ಅಪಹಾಸ್ಯ ಮಾಡುವ ರೀತಿಯ ರೀಲ್ಸ್‌ಗಳ ವಿರುದ್ಧ ಕಾನೂನು ಕ್ರಮ ಎದುರಿಸಬೇಕಾದೀತು ಎನ್ನುವ ಎಚ್ಚರಿಕೆಯನ್ನು ನಾವೀಗಾಗಲೇ ಕೊಟ್ಟಿದ್ದೇವೆ. ನಾವು ಕಳಸದಲ್ಲಿ ಶೂಟಿಂಗ್ ಮಾಡಿದಾಗ, ದೈವ ನರ್ತಕರೇ ಲಾಂಗು-ಮಚ್ಚು ತಂದು ಬೆದರಿಸಿ, ಶೂಟಿಂಗ್ ನಿಲ್ಲಿಸಿ, ಇಲ್ಲದ ರಗಳೆ ಮಾಡಿ ಲಕ್ಷಾಂತರ ರೂಪಾಯಿ ನಷ್ಟ ಮಾಡಿದ್ದರು. ಪ್ರತಿ ಬಾರಿ ‘ಕತ್ತಲೆ’ಯ ಹೆಸರನ್ನು ಹೇಳಿ ಬೆದರಿಸುತ್ತಿದ್ದರು. ಇದನ್ನೂ ಓದಿ: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ – ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ದೈವ ನರ್ತಕರ ಆಕ್ರೋಶ

Koragajja 2 1

ಈಗ ನಮ್ಮ ಹಾಡನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಡುಗಳಿಗೆ ರೀಲ್ಸ್ ಮಾಡುವ ಸ್ಪರ್ದೆಗೆ ಆಕ್ಷೇಪಣೆ ಒಡ್ಡುತ್ತಿದ್ದಾರೆ. ನಮ್ಮ ಸಿನಿಮಾಗೆ ಪ್ರತೀ ಹಂತದಲ್ಲೂ ತೊಂದರೆ ಕೊಡುವುದು, ಆಕ್ಷೇಪಣೆ ಮಾಡುವುದು, ವಿರೋಧಿಸುವುದು ಹೀಗೆ ನಡೆಯುತ್ತಲೇ ಬಂದಿದೆ. ಕೊರಗಜ್ಜ ದೈವದ ಆಶೀರ್ವಾದದಿಂದಲೇ ಇಂತಹ ಹಲವಾರು ಅಗ್ನಿಪರೀಕ್ಷೆಗಳನ್ನು ದಾಟಿ ಈಗ ಚಿತ್ರ ರಿಲೀಸ್ ಮಾಡುವ ಹಂತಕ್ಕೆ ಬಂದಿದ್ದೇವೆ. ತುಳುನಾಡಿನ ಕೆಲಭಾಗಗಳಲ್ಲಿ ಕೊರಗಜ್ಜ ಮತ್ತು ಇನ್ನಿತರ ದೈವಗಳ ಕೋಲದ ಸಮಯದಲ್ಲಿ, ದೈವದ ಪಾತ್ರ ಮಾಡುವ ವ್ಯಕ್ತಿಯ ಬಾಯಿಯಿಂದಲೇ ಅವಾಚ್ಯ, ಅಶ್ಲೀಲ ಪದಗಳನ್ನು ಹೇಳಿಸುವುದು ವಾಡಿಕೆ ಇದೆ. ಸಭ್ಯರ, ಸಣ್ಣ ಮಕ್ಕಳ ಮುಂದೆಯೇ ಕೋಲ ಸೇವೆಯ ಸಮಯದಲ್ಲಿ ಕೇಳಲು ಹೇಸಿಗೆ ಎನಿಸುವ ಅಶ್ಲೀಲ ಪದಗಳನ್ನು ವಾಡಿಕೆ ಅಥವಾ ಪಾರಂಪರಿಕೆ ಎನ್ನುವ ಕಾರಣದಿಂದ ಹೇಳುತ್ತಾ ಬಂದಿದ್ದಾರೆ. ಅಂತಹ ಪದ್ಧತಿಗಳ ಅಶ್ಲೀಲತೆಯನ್ನು, ಸಂಸ್ಕ್ರತಿ ನೆಪದಲ್ಲಿ ಕೀಳು ಪದಗಳನ್ನು ಕೋಲಸೇವೆಯ ವೇಳೆ ದೈವದ ಹೆಸರಿನಲ್ಲಿ ಹೇಳುವುದನ್ನು ನಾಗರಿಕ ಸಮಾಜ ಒಪ್ಪಬೇಕೇ? ಇನ್ನು ಕೆಲವು ಕಡೆ ಕೊರಗಜ್ಜನನ್ನು ನೀಚ ದೈವ ಎನ್ನುವ ಹೆಸರಿನಿಂದಲೂ ಕೋಲಸೇವೆ ನೀಡುತ್ತಾರೆ. ಅಲ್ಲದೇ, ಕೊರಗಜ್ಜನನ್ನು ಕೊರಗರ ದಿಕ್ಕ ಎಂಬ ಪದಪ್ರಯೋಗದಿಂದಲೂ ಕೆಲ ದೈವ ನರ್ತಕರು ಆಚರಣೆಯ, ವಾಡಿಕೆಯ ಹೆಸರಿಲ್ಲಿ ಸಂಭೋದಿಸುತ್ತಾ ನಾಗರಿಕ ಸಮಾಜ ತಲೆ ತಗ್ಗಿಸುವ ರೀತಿಯಲ್ಲಿ ಕೋಲ ಸೇವೆಗಳನ್ನು ನಡೆಸಿಕೊಂಡು ಬಂದಿರುತ್ತಾರೆ.

ಕೊರಗಜ್ಜ ನೀಚ ದೈವವೂ ಅಲ್ಲ, ಕೀಳು ಜಾತಿಯ ದೈವವೂ ಅಲ್ಲ. ಭೂತಕೋಲ ಕಟ್ಟುವ ಜನಾಂಗದವರು ಮೊದಲು ಈ ವಿಚಾರದ ಬಗ್ಗೆ ಗಮನ ಹರಿಸಬೇಕಾಗಿದೆ. ಪರಂಪರೆಯ ಹೆಸರಿನಲ್ಲಿ ದೈವಗಳಿಗೆ ಅವಹೇಳನಕಾರಿ ಅಥವಾ ಆಶ್ಲೀಲ ಪದ ಪ್ರಯೋಗಗಳ ಮುಖೇನ ಕೋಲಸೇವೆಯ ಕೈಂಕರ್ಯ ನಡೆಸುವುದು ಒಳ್ಳೆ ಸಂಸ್ಕ್ರತಿಯೇ? ಕೆಲಭಾಗಗಳ ಕೋಲದ ಸಮಯದಲ್ಲಿ ದೈವದ ವೇಷ ಹಾಕಿಕೊಂವರು ಜಾತಿಯ ಆಧಾರದಲ್ಲಿ ಗೌರವ ಕೊಡುವಂತಹ ಪರಿಪಾಠ ನಾಗರಿಕ ಸಮಾಜ ಒಪ್ಪುವಂತಹ ಆಚರಣೆಯೇ? ಇದೆಲ್ಲ ಹಿಂದಿನಿಂದ ನಡೆದುಕೊಂಡು ಬಂದಿರುವ ಆಚರಣೆ ಎಂಬ ಸಮಜಾಯಿಸಬಹುದು. ಸತಿ ಸಹಗಮನ ಪದ್ದತಿ, ವಿಧವೆಗೆ ತಲೆ ಬೋಳಿಸಿ ಒಳಗೆ ಕೂರಿಸುವಂತ ದರಿದ್ರ ಪದ್ದತಿಗಳೂ ನಮ್ಮ ಸಮಾಜದಲ್ಲಿ ಇತ್ತು ತಾನೆ? ಅದೆಲ್ಲವನ್ನು ಕಿತ್ತೊಗೆದಾಗಿದೆ. ಹೀಗಿರುವಾಗ, ಜಾತಿಪದ್ದತಿಯನ್ನು ಯಾಕೆ ಕೋಲದ ಸಮಯದಲ್ಲಿ ಅನುಸರಿಸಬೇಕು? ದೈವದ ಎದುರು ಎಲ್ಲಾ ಜಾತಿಯೂ ಒಂದೇ. ಮೇಲ್ಜಾತಿ, ಕೀಳು ಜಾತಿ ಎನ್ನುವುದು ದೈವದ ಪರಿಕಲ್ಪನೆಯಂತೂ ಅಲ್ಲ. ದೈವವು ನಂಬುವ ಎಲ್ಲರಿಗೂ ಸೇರಿರುವ ಶಕ್ತಿ. ನಂಬಿದವರಿಗೆ ಇಂಬುಕೊಡುವ ಶಕ್ತಿ ಎಂದಿದ್ದಾರೆ ನಿರ್ದೇಶಕ ಸುಧೀರ್ ಅತ್ತಾವರ್. ಇದನ್ನೂ ಓದಿ: ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್

TAGGED:Ganesh AcharyakoragajjaSudheer Atthavarಕೊರಗಜ್ಜಸುಧೀರ್ ಅತ್ತಾವರ್
Share This Article
Facebook Whatsapp Whatsapp Telegram

Cinema news

Jana Nayagan
‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ
Cinema Latest Main Post South cinema
S. Mahender Nadabrahma Hamsalekha reunited Kannada Film
ಮತ್ತೆ ಜೊತೆಯಾದ ಎಸ್.ಮಹೇಂದರ್, ನಾದಬ್ರಹ್ಮ ಹಂಸಲೇಖ
Cinema Latest Sandalwood
MCL Team Jersey Trophy Launch and Song Release 1
ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್: ಜೆರ್ಸಿ, ಟ್ರೋಫಿ ಅನಾವರಣ
Cinema Cricket Latest Sandalwood Sports
Kushi Ravi
ದೈಜಿ ಟೀಮ್ ಸೇರಿಕೊಂಡ ನಟಿ ಖುಷಿ ರವಿ
Cinema Latest Sandalwood

You Might Also Like

nikhil Kumaraswamy
Bengaluru City

2028 ಕ್ಕೆ ಬಿಜೆಪಿ-ಜೆಡಿಎಸ್ 150 ಸ್ಥಾನ ಗೆಲ್ಲೋದು ಖಚಿತ: ನಿಖಿಲ್‌

Public TV
By Public TV
7 minutes ago
Saket Court Staff Dies
Crime

ದೆಹಲಿ ಸಾಕೇತ್ ಕೋರ್ಟ್‌ನಲ್ಲಿ ಕ್ಲರ್ಕ್ ಆತ್ಮಹತ್ಯೆ – ಕೆಲಸದ ಒತ್ತಡಕ್ಕೆ ಬಲಿಯಾದ ಹರೀಶ್ ಸಿಂಗ್

Public TV
By Public TV
12 minutes ago
Ettina Hole Project
Districts

ಕೋಟ್ಯಂತರ ರೂಪಾಯಿ ವಿದ್ಯುತ್‌ ಬಿಲ್‌ ಬಾಕಿ – ಎತ್ತಿನಹೊಳೆ ಯೋಜನೆ ಮುಖ್ಯ ಕಚೇರಿ ಕರೆಂಟ್‌ ಕಟ್‌

Public TV
By Public TV
14 minutes ago
train copy
Belgaum

Makar Sankranti: ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

Public TV
By Public TV
32 minutes ago
Kodagu Resort 3
Districts

ವಸತಿ ಸಚಿವರ ಪಿಎಸ್‌ ನಿಂದಲೇ ಅಕ್ರಮ ರೆಸಾರ್ಟ್‌ ನಿರ್ಮಾಣ; ಭಾರೀ ಆಕ್ರೋಶ

Public TV
By Public TV
40 minutes ago
delay in providing compensation to farmer hassan dc car seized
Court

ರೈತನಿಗೆ ಪರಿಹಾರ ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?