ಬೆಳಗಾವಿ: ಸೈಬರ್ ವಂಚಕರು (Cyber Crime) ಬೆಳಗಾವಿ (Belagavi) ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿ ವಂಚನೆಗಿಳಿದಿದ್ದಾರೆ. ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಡಿಪಿ ಹಾಕಿಕೊಂಡು ಉಪ ಆಯುಕ್ತ ಉದಯ ಕುಮಾರ್ ತಳವಾರಗೆ ಹಣಕ್ಕಾಗಿ (Money) ವಾಟ್ಸಪ್ನಲ್ಲಿ ಮೆಸೇಜ್ ಕಳುಹಿಸಿದ್ದಾರೆ.
ಮೆಸೇಜ್ನಲ್ಲಿ ತುರ್ತಾಗಿ 50,000 ರೂ. ಹಣ ಅಕೌಂಟ್ಗೆ ಹಾಕಿ. ನಾನು ಮೀಟಿಂಗ್ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸಿ ಎಂದು ವಂಚಕರು ಮೆಸೆಜ್ ಕಳುಹಿಸಿದ್ದಾರೆ. ಮೆಸೇಜ್ ನೋಡಿ ಕಕ್ಕಾಬಿಕ್ಕಿಯಾದ ಉಪ ಆಯುಕ್ತ ಉದಯಕುಮಾರ್ ತಳವಾರ, ಹಣ ಕೇಳಿದ ನಂಬರ್ಗೆ ವಾಟ್ಸಪ್ ಕಾಲ್ ಮಾಡಿದ್ದಾರೆ. ಈ ವೇಳೆ ಕರೆ ಸ್ವೀಕರಿಸದೇ ಮೀಟಿಂಗ್ನಲ್ಲಿದ್ದೇನೆ ಎಂದು ವಂಚಕ ಮೆಸೆಜ್ ಕಳುಹಿಸಿದ್ದಾನೆ. ಇದನ್ನೂ ಓದಿ: ಹೆಚ್ಚುತ್ತಿದೆ Cyber Crime – ಆರು ವರ್ಷಕ್ಕೆ 52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲೇ ಕರ್ನಾಟಕ ಸೆಕೆಂಡ್
ಅನುಮಾನಗೊಂಡ ಉಪ ಆಯುಕ್ತರು ಪಾಲಿಕೆ ಆಯುಕ್ತ ಕಾರ್ತಿಕ್ ಅವರಿಗೆ ಕರೆ ಮಾಡಿದ್ದಾರೆ. ಈ ವೇಳೆ ವಂಚಕರ ಸಂಚು ಗೊತ್ತಾಗಿದೆ. ತಮ್ಮದೇ ಡಿಪಿ ಇಟ್ಟುಕೊಂಡು ಹಣ ಕೇಳ್ತಿರೋ ಮೆಸೇಜ್ ನೋಡಿ ಪಾಲಿಕೆ ಆಯುಕ್ತರೇ ಶಾಕ್ ಆಗಿದ್ದಾರೆ.
ಈ ಸಂಬಂಧ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಉಪ ಆಯುಕ್ತರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್ಬುಕ್, ಇನ್ಸ್ಟಾ ಹ್ಯಾಕ್ – ಯುವತಿಗೆ ಮೆಸೇಜ್

