Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
Last updated: January 20, 2026 6:11 pm
Public TV
Share
3 Min Read
team india pakistan surykumar yadav
SHARE

– ಸೂಕ್ತ ಕಾರಣ ನೀಡದಿದ್ರೆ ಭಿಕಾರಿಸ್ತಾನಕ್ಕೆ 2 ದಶಲಕ್ಷ ಡಾಲರ್‌ ದಂಡ ಸಾಧ್ಯತೆ

ಇಸ್ಲಾಮಾಬಾದ್‌: 2026ರ ಟಿ20 ವಿಶ್ವಕಪ್‌ (T20 World Cup 2026) ಪಂದ್ಯಗಳನ್ನಾಡಲು ಭಾರತಕ್ಕೆ ಬರಲ್ಲ ಎಂದು ಕ್ಯಾತೆ ತೆಗೆದಿರುವ ಬಾಂಗ್ಲಾದೇಶಕ್ಕೆ ಈಗ ಪಾಕಿಸ್ತಾನ (Pakistan) ಬೆಂಬಲ ನೀಡಿದೆ. ಇದರ ಭಾಗವಾಗಿ ತನ್ನ ರಾಷ್ಟ್ರೀಯ ತಂಡಕ್ಕೆ ಟಿ20 ವಿಶ್ವಕಪ್‌ ಸಿದ್ಧತೆಗಳನ್ನ ನಿಲ್ಲಿಸುವಂತೆ ಸೂಚಿಸಿದೆ. ಜೊತೆಗೆ ವಿಶ್ವಕಪ್‌ ಟೂರ್ನಿಯಿಂದಲೇ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ.

ತನ್ನ ಲೀಗ್‌ ಪಂದ್ಯಗಳನ್ನ ಭಾರತಕ್ಕೆ (India) ಸ್ಥಳಾಂತರಿಸಬೇಕೆಂಬ ಬಾಂಗ್ಲಾ ಕ್ರಿಕೆಟ್‌ ಮಂಡಳಿಯ (BCB) ಬೇಡಿಕೆಯನ್ನ ಈಡೇರಿಸದಿದ್ದರೆ ಟಿ20 ವಿಶ್ವಕಪ್‌ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ. ಅದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ನಿಲ್ಲಿಸುವಂತೆ ಕ್ರಿಕೆಟ್‌ ಮಂಡಳಿ ಪಾಕ್‌ ತಂಡಕ್ಕೆ ಸೂಚಿಸಿದೆ. ಇದನ್ನೂ ಓದಿ: RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Mohsin Naqvi 1

ಪಿಸಿಬಿ ಸೂಚನೆಯಂತೆ ಪಾಕ್‌ ರಾಷ್ಟ್ರೀಯ ತಂಡದ ಎಲ್ಲಾ ಸಿದ್ಧತೆಗಳನ್ನ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಶ್ರೀಲಂಕಾದಲ್ಲಿ ಸ್ಥಳಗಳು ಲಭ್ಯವಿಲ್ಲದಿದ್ದರೆ, ಬಾಂಗ್ಲಾದ ಲೀಗ್‌ ಪಂದ್ಯಗಳನ್ನು ತನ್ನ ದೇಶದಲ್ಲಿ ಆಯೋಜಿಸುವುದಾಗಿಯೂ ಪಾಕ್‌ ಹೇಳಿದೆ ಎಂದು ವರದಿಯಾಗಿದೆ.

ಬಾಂಗ್ಲಾ ಮತ್ತು ಪಾಕಿಸ್ತಾನ ಸರ್ಕಾರಗಳ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi), ಪಾಕಿಸ್ತಾನವು ಬಾಂಗ್ಲಾದೇಶದ ನಿರ್ಧಾರವನ್ನ ಸಂಪೂರ್ಣವಾಗಿ ಬೆಂಬಲಿಸುತ್ತಿದೆ. ಬೇರೆಡೆಗೆ ಪಂದ್ಯಗಳನ್ನು ಸ್ಥಳಾಂತರಿಸಬೇಕೆನ್ನುವ ಬಾಂಗ್ಲಾದ ಬೇಡಿಕೆ ಈಡೇರಿಸದಿದ್ದರೆ, ತಾನು ಕೂಡ ವಿಶ್ವಕಪ್‌ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ.

ಸೂಕ್ತ ಕಾರಣ ನೀಡದಿದ್ರೆ 2 ದಶಲಕ್ಷ ಡಾಲರ್‌ ದಂಡ!
‌ಪಂದ್ಯದಿಂದ ಹಿಂದೆ ಸರಿಯುವುದಾಗಿ ಹೇಳಿರುವ ಪಾಕ್‌ ಕ್ರಿಕೆಟ್‌ ಮಂಡಳಿ, ಪಂದ್ಯದಿಂದ ಹಿಂದೆ ಸರಿಯಲು ಸೂಕ್ತ ಕಾರಣ ಕೊಡದಿದ್ದರೆ ಐಸಿಸಿ ನಿಯಮ ಉಲ್ಲಂಘನೆ ಅನ್ವಯ 2 ಮಿಲಿಯನ್‌ ಡಾಲರ್‌ ದಂಡ ಕೂಡ ಐಸಿಸಿ ವಿಧಿಸುವ ಸಾಧ್ಯತೆಯಿದೆ ಎಂದು ತನ್ನದೇ ಸರ್ಕಾರಕ್ಕೆ ಎಚ್ಚರಿಸಿದೆ.

ICC Jay shah

ವಿವಾದ ಶುರುವಾಗಿದ್ದು ಇಲ್ಲಿಂದ…
ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್‌ (Mustafizur Rahman) ಅವರನ್ನ ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾ ಈ ರೀತಿ ಕ್ಯಾತೆ ತೆಗೆದಿದೆ. ಭದ್ರತಾ ಕಾರಣಗಳನ್ನ ನೀಡಿ ತನ್ನ ಪಾಲಿನ ಪಂದ್ಯಗಳನ್ನ ನೆನೆಯ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಪಟ್ಟು ಹಿಡಿದಿದೆ. ಇದನ್ನೂ ಓದಿ: ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!

ದಾಖಲೆ ಬೆಲೆಗೆ ಬಿಕರಿಯಾಗಿದ್ದ ಮುಸ್ತಾಫಿಜುರ್
2026ರ ಐಪಿಎಲ್‌ ಟೂರ್ನಿಗಾಗಿ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಮುಸ್ತಾಫಿಜುರ್ ರೆಹಮಾನ್‌ ಅವರನ್ನ ಕೆಕೆಆರ್‌ ಫ್ರಾಂಚೈಸಿಯು 9.20 ಕೋಟಿ ರೂ. ನೀಡಿ ಖರೀದಿಸಿತ್ತು. ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಬಾಂಗ್ಲಾ ಆಟಗಾರ ಎಂಬ ಹೆಗ್ಗಳಿಕೆಗೂ ಮುಸ್ತಾಫಿಜುರ್ ಪಾತ್ರವಾಗಿದ್ದರು. ಆದ್ರೆ ಶೇಖ್‌ ಹಸೀನಾ ಸರ್ಕಾರ ಪತನದ ಬಳಿಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಾಳಾಗಿದೆ. ಈಗ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಕಾರಣ ಬಾಂಗ್ಲಾದೇಶದ ಆಟಗಾರರು ಐಪಿಎಲ್‌ನಲ್ಲಿ (IPL) ಆಡಬಾರದು ಎಂಬ ಆಕ್ರೋಶ ಕ್ರಿಕೆಟ್‌ ಅಭಿಮಾನಿಗಳಿಂದ ವ್ಯಕ್ತವಾಗಿತ್ತು. ಒತ್ತಡ ಜಾಸ್ತಿಯಾಗುತ್ತಿದ್ದಂತೆ ಬಿಸಿಸಿಐ ಮಧ್ಯಪ್ರವೇಶಿಸಿ ಮುಸ್ತಾಫಿಜುರ್ ರೆಹಮಾನ್ ಅವರನ್ನ ಕೆಕೆಆರ್‌ನಿಂದ ಕೈಬಿಡುವಂತೆ ಫ್ರಾಂಚೈಸಿಗೆ ಸೂಚಿಸಿತ್ತು.

mustafizur rahman 3

ಫೆಬ್ರವರಿಯಲ್ಲಿ ಟಿ20 ವಿಶ್ವಕಪ್‌
2026ರ ಟಿ20 ವಿಶ್ವಕಪ್‌ ಟೂರ್ನಿಯ ಹಕ್ಕು ಭಾರತದ್ದೇ ಆದರೂ ಶ್ರೀಲಂಕಾ ಜೊತೆಗಿನ ಜಂಟಿ ಆತಿಥ್ಯದಲ್ಲಿ ನಡೆಸಲಾಗುತ್ತಿದೆ. ಭಾರತ ಮತ್ತು ಪಾಕ್‌ ನಡುವಿನ ಸಂಬಂಧ ಹದಗೆಟ್ಟಿದ್ದರಿಂದ, ಪಾಕಿಸ್ತಾನದ ಎಲ್ಲಾ ಪಂದ್ಯಗಳು ಲಂಕಾದಲ್ಲಿ ನಡೆಯಲಿದೆ. ಬಾಂಗ್ಲಾ ತಂಡವು ಫೆಬ್ರವರಿ 7 ರಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ತನ್ನ ವಿಶ್ವಕಪ್‌ ಅಭಿಯಾನ ಶುರು ಮಾಡಲಿದೆ. ಅದೇ ಸಮಯಕ್ಕೆ ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್‌ ನಡುವಿನ ಪಂದ್ಯ ಶ್ರೀಲಂಕಾದಲ್ಲಿ ನಡೆಯಲಿದೆ. ಫೆ.9 ರಂದು ಇಟೇ ವಿರುದ್ಧ, ಫೆ.14 ರಂದು ಇಂಗ್ಲೆಂಡ್‌ ವಿರುದ್ಧ ಈಡನ್‌ ಗಾರ್ಡನ್‌ನಲ್ಲಿ ಹಾಗೂ ಅಂತಿಮ ಲೀಗ್‌ ಸುತ್ತಿನ ಪಂದ್ಯವನ್ನ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನೇಪಾಳದ ವಿರುದ್ಧ ಆಡಬೇಕಿದೆ.

TAGGED:bangladeshbcciICCindiaIPL 2026Mohsin NaqviMustafizur RahmanpakistanT20 World Cup 2026ಐಪಿಎಲ್‌ 2026ಐಸಿಸಿಟಿ20 ವಿಶ್ವಕಪ್‌ 2026ಬಾಂಗ್ಲಾ ಕ್ರಿಕೆಟ್‌ ಬೋರ್ಡ್‌ಬಾಂಗ್ಲಾದೇಶಬಿಸಿಸಿಐಭಾರತ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
17 minutes ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
18 minutes ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
23 minutes ago
AshwiniVaishnaw
Dharwad

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ʻವಿದ್ಯಾಪೀಠʼಕ್ಕೆ ಬನ್ನಿ – On Spot ಬಂಪರ್‌ ಬಹುಮಾನ ನಿಮ್ಮದಾಗಿಸಿಕೊಳ್ಳಿ

Public TV
By Public TV
1 hour ago
Supreme Court 1
Karnataka

ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?