Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವೋಸ್‌ ಸಮಾವೇಶ | ಕೋಕಾ – ಕೋಲಾದ 25,760 ಕೋಟಿ ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಎಂ.ಬಿ. ಪಾಟೀಲ್ ಯತ್ನ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾವೋಸ್‌ ಸಮಾವೇಶ | ಕೋಕಾ – ಕೋಲಾದ 25,760 ಕೋಟಿ ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಎಂ.ಬಿ. ಪಾಟೀಲ್ ಯತ್ನ‌

Bengaluru City

ದಾವೋಸ್‌ ಸಮಾವೇಶ | ಕೋಕಾ – ಕೋಲಾದ 25,760 ಕೋಟಿ ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಎಂ.ಬಿ. ಪಾಟೀಲ್ ಯತ್ನ‌

Public TV
Last updated: January 20, 2026 3:04 pm
Public TV
Share
3 Min Read
M.B. Patil 1
SHARE

– ದೇಶ, ವಿದೇಶಗಳ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ

ಬೆಂಗಳೂರು: ದೇಶದ ಆಹಾರ ಸಂಸ್ಕರಣಾ ವಲಯದಲ್ಲಿ ಕೋಕಾ ಕೋಲಾ (Coca-Cola) ಹೂಡಿಕೆ ಮಾಡಲಿರುವ 25,760 ಕೋಟಿ ರೂ. ಬಂಡವಾಳದಲ್ಲಿ ಗಮನಾರ್ಹ ಮೊತ್ತವನ್ನು ರಾಜ್ಯಕ್ಕೆ ಆಕರ್ಷಿಸಲು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ (M.B. Patil) ಅವರು ಕಂಪನಿಯ ಮನವೊಲಿಸಲು ಸರ್ವ ಪ್ರಯತ್ನ ಮಾಡಿದ್ದಾರೆ.

ದಾವೋಸ್‌ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದ (World Economic Forum) ಮೊದಲ ದಿನ ಕೋಕಾ ಕೋಲಾ ಕಂಪನಿಯ ಜಾಗತಿಕ ನೀತಿ ಹಾಗೂ ಸುಸ್ಥಿರತೆಯ ಹಿರಿಯ ಉಪಾಧ್ಯಕ್ಷ ಮೈಕಲ್‌ ಗೋಲ್ಟ್ಜಮನ್‌ ಅವರ ಜೊತೆಗಿನ ಸಭೆಯಲ್ಲಿ ಸಚಿವ ಪಾಟೀಲ್ ಅವರು, ಈ ಸಂಗತಿಯನ್ನು ಪ್ರಮುಖವಾಗಿ ಚರ್ಚಿಸಿದರು. ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡಲಿರುವ ಬಂಡವಾಳದಲ್ಲಿ ಗಮನಾರ್ಹ ಮೊತ್ತವು ಕರ್ನಾಟಕಕ್ಕೆ ಹರಿದು ಬರಲು ಅಗತ್ಯವಾದ ಎಲ್ಲ ಸೌಲಭ್ಯ ಹಾಗೂ ಬೆಂಬಲ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿರುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್

M.B. Patil

‌ʻಕಂಪನಿಯ ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆಯು ಸೂಕ್ತ ಸ್ಥಳವಾಗಿರುವುದನ್ನು ಮನವರಿಕೆ ಮಾಡಿಕೊಡಲಾಗಿದೆ. ಈ ಪ್ರದೇಶದಲ್ಲಿ ಪಾನೀಯ ತಯಾರಿಸುವ ಕೈಗಾರಿಕೆಗಳ ಬಳಕೆಗೆ ಅಗತ್ಯವಾಗಿರುವ ನೀರು ಅಪಾರ ಪ್ರಮಾಣದಲ್ಲಿ ಸುಸ್ಥಿರ ರೀತಿಯಲ್ಲಿ ಲಭ್ಯ ಇರುವುದನ್ನು ಕಂಪನಿಯ ಮುಖ್ಯಸ್ಥರ ಗಮನಕ್ಕೆ ತರಲಾಗಿದೆ. ಬಂಡವಾಳ ಹೂಡಿಕೆ ಮಾಡುವಾಗ ಈ ಜಿಲ್ಲೆಗೆ ಆದ್ಯತೆ ನೀಡಲು ಒತ್ತಾಯಿಸಲಾಗಿದೆʼ ಎಂದು ಸಚಿವ ಎಂ. ಬಿ. ಪಾಟೀಲ್ ಅವರು ತಿಳಿಸಿದ್ದಾರೆ.

M.B. Patil 3

ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ದೇಶ- ವಿದೇಶಗಳ ಬಹುರಾಷ್ಟ್ರೀಯ ಕಂಪನಿಗಳ ದಿಗ್ಗಜರನ್ನು ಭೇಟಿಯಾಗಿ ರಾಜ್ಯದಲ್ಲಿ ಉದ್ಯಮ ಸ್ಥಾಪನೆ, ವಿಸ್ತರಣೆ ಹಾಗೂ ಬಂಡವಾಳ ಹೂಡಿಕೆ ಆಕರ್ಷಿಸಲು ರಾಜ್ಯ ಸರ್ಕಾರ ಕೊಡಮಾಡಲಿರುವ ಸಬ್ಸಿಡಿ, ಉತ್ತೇಜನಾ ಕ್ರಮಗಳನ್ನು ವಿವರಿಸಿತು.

ಮೆಂಜಿಸ್‌ ಏವಿಯೇಷನ್ನಿನ ಕಾರ್ಯನಿರ್ವಾಹಕ ಅಧ್ಯಕ್ಷ ಹ್ಯಾಸನ್ ಎಲ್. ಹೌರಿ , ಯುಪಿಎಲ್‌ನ ಅಧ್ಯಕ್ಷ ಜೈ ಶ್ರಾಫ್, ಎಬಿ ಇನ್‌ಬೆವ್‌ನ ಕಾರ್ಪೊರೇಟ್‌ ವ್ಯವಹಾರಗಳ ಅಧಿಕಾರಿ ಜಾನ್‌ ಬ್ಲಡ್‌, ಟಾಟಾ ಸನ್ಸ್‌ ಅಧ್ಯಕ್ಷ ಎನ್‌. ಚಂದ್ರಶೇಖರನ್‌, ನ್ಯಾಚುರಲ್ ಫೈಬರ್ ವೆಲ್ಡಿಂಗ್‌ (ಎನ್‌ಎಫ್‌ಡಬ್ಲ್ಯು ಅರ್ಥ್‌) ನ ಸುಹಾಸ್‌ ಉಪ್ಪಲಪತಿ ಅವರ ಜೊತೆ ಫಲಪ್ರದ ಮಾತುಕತೆ ನಡೆಸಿತು.

M.B. Patil 2

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗ್ರೌಂಡ್‌ ಹ್ಯಾಂಡ್ಲಿಂಗ್‌ ಉದ್ದೇಶದ ಟೆಂಡರ್‌ ದೊರೆತರೆ 85 ಕೋಟಿ‌ ರೂ. ಹೂಡಿಕೆ ಮಾಡಲಿರುವುದನ್ನು ಮೆಂಜಿಸ್‌ ಏವಿಯೇಷನ್‌ ರಾಜ್ಯದ ನಿಯೋಗದ ಗಮನಕ್ಕೆ ತಂದಿತು. ತನ್ನ ಜಾಗತಿಕ ಕಾರ್ಯಾಚರಣೆಗಳಿಗೆ ಪೂರಕವಾಗಿ ರಾಜ್ಯದಲ್ಲಿ ಶ್ರೇಷ್ಠತಾ ಕೇಂದ್ರ ಹಾಗೂ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಸ್ಥಾಪಿಸುವ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ನಿಯೋಗಕ್ಕೆ ತಿಳಿಸಿದೆ.

ʻಕೃಷಿ ರಾಸಾಯನಿಕ ಮತ್ತು ಬೆಳೆ ಸಂರಕ್ಷಣಾ ಕಂಪನಿ ಯುಪಿಎಲ್‌ ಲಿಮಿಟೆಡ್‌, ಕೃಷಿ ಪರಿಹಾರ ಮತ್ತು ನೀರಾವರಿ ತಂತ್ರಜ್ಞಾನಗಳಲ್ಲಿ ಕರ್ನಾಟಕದಲ್ಲಿ ತನ್ನ ವಹಿವಾಟು ವಿಸ್ತರಿಸಲು ಆಸಕ್ತಿ ವ್ಯಕ್ತಪಡಿಸಿದೆ. ರಫ್ತು ಮಾರುಕಟ್ಟೆಗಳಿಗೆ ಮೌಲ್ಯವರ್ಧಿತ ಮೆಕ್ಕೆಜೋಳ ಆಧಾರಿತ ಉತ್ಪನ್ನಗಳನ್ನು ತಯಾರಿಸುವ ಸಾಧ್ಯತೆಗಳನ್ನು ಕಂಪನಿಯು ಪ್ರಸ್ತಾಪಿಸಿದೆ. ಎಥೆನಾಲ್ ರಫ್ತು ಸಾಧ್ಯತೆ ಸೇರಿದಂತೆ ಎಥೆನಾಲ್ ಸ್ಥಾವರ ನಿರ್ಮಾಣದ ಬಗ್ಗೆ ಚರ್ಚಿಸಲಾಗಿದೆ.

ʻಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ವಿಶ್ವ ಆರ್ಥಿಕ ವೇದಿಕೆಯ ಕಾರ್ಯಕ್ರಮಗಳ ಪ್ರಾಯೋಗಿಕ ಪರೀಕ್ಷೆಗೆ ಕರ್ನಾಟಕವು ಸೂಕ್ತ ತಾಣವಾಗಿರುವುದನ್ನುʼಡಬ್ಲ್ಯುಇಎಫ್ ನಿಯೋಗದ ಗಮನಕ್ಕೆ ತರಲಾಗಿದೆ. ರಾಜ್ಯದಲ್ಲಿನ ಟಾಟಾ ಸನ್ಸ್‌ನ ಭವಿಷ್ಯದ ಯೋಜನೆಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗಿದೆ. ಎಬಿ ಇನ್‌ಬೆವ್‌ ರಾಜ್ಯದಲ್ಲಿ ತನ್ನ ಕಾರ್ಯಾಚರಣೆಗಳನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆ ಸ್ಪಷ್ಟ ಇಂಗಿತ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ತನ್ನ ವಹಿವಾಟಿನ ಬಗ್ಗೆ ರಾಜ್ಯ ಸರ್ಕಾರದ ಜೊತೆ ಯೋಜನಾ ಪ್ರಸ್ತಾವ ಹಂಚಿಕೊಳ್ಳುವುದಾಗಿ ನ್ಯಾಚುರಲ್ ಫೈಬರ್ ವೆಲ್ಡಿಂಗ್ನ (ಎನ್‌ಎಫ್‌ಡಬ್ಲ್ಯು ಅರ್ಥ್‌) ಉನ್ನತಾಧಿಕಾರಿಗಳ ತಂಡವು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದೆʼ ಎಂದು ಸಚಿವ ಪಾಟೀಲ ಅವರು ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಬಿಡಿಎ ಆಯುಕ್ತ ಮಣಿವಣ್ಣನ್‌, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್‌ ಕೃಷ್ಣ, ಕೈಗಾರಿಕಾ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಅವರು ರಾಜ್ಯದ ನಿಯೋಗದಲ್ಲಿ ಇದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‌ಗೆ ಯತ್ನ – ಎಂ.ಬಿ.ಪಾಟೀಲ್

TAGGED:Coca ColaDavosM.B PatilWorld Economic Forum
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

Soil mafia near Hemavati River Mudigere locals oppose
Chikkamagaluru

ಹೇಮಾವತಿ ನದಿ ಮೂಲಕ್ಕೆ ಸಂಚಕಾರ – ಮಣ್ಣು ಮಾಫಿಯಾಕ್ಕೆ ನದಿ ಮೂಲ ಬಲಿಯಾಗುತ್ತಾ?

Public TV
By Public TV
43 minutes ago
shivamogg elderly couple dead body found in house at bhadravathi investigation underway
Crime

ಭದ್ರಾವತಿ | ವೃದ್ಧ ದಂಪತಿ ಅನುಮಾನಾಸ್ಪದ ಸಾವು – ಒಡವೆಗಳು ನಾಪತ್ತೆ

Public TV
By Public TV
1 hour ago
Ursula von der Leyen Narendra Modi
Latest

ಇದು ಎಲ್ಲಾ ವ್ಯಾಪಾರ ಒಪ್ಪಂದಗಳ ತಾಯಿ – ಶೀಘ್ರವೇ ಭಾರತದ ಜೊತೆ ಸಹಿ: EU ಮುಖ್ಯಸ್ಥೆ

Public TV
By Public TV
1 hour ago
DK Suresh
Bengaluru City

ಇವಿಎಂ ಬದಲು ಬ್ಯಾಲೆಟ್ ಪೇಪರ್‌ನಲ್ಲಿ ಜಿಬಿಎ ಚುನಾವಣೆ – ಡಿಕೆ ಸುರೇಶ್ ಅಪಸ್ವರ

Public TV
By Public TV
2 hours ago
greenland canada in new map of usa trump fuels territory feuds with allies
Latest

ಗ್ರೀನ್‌ಲ್ಯಾಂಡ್ ಅಮೆರಿಕದ ಪ್ರಾಂತ್ಯ, ಹೊಸ ನಕ್ಷೆ ಬಿಡುಗಡೆ – ಡೆನ್ಮಾರ್ಕ್‌ನಿಂದ ಸೇನೆ ರವಾನೆ

Public TV
By Public TV
2 hours ago
BRP
Districts

ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು – ಸಾರ್ವಜನಿಕರಿಗೆ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?