– ಮೋದಿ ಆಡಳಿತದ 10 ವರ್ಷದಲ್ಲಿ ರಾಜ್ಯಕ್ಕೆ 3,21,974 ಕೋಟಿ ಅನುದಾನ ಬಂದಿದೆ
ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿರುವ ಈ ಸರ್ಕಾವರೇ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಜನರ ವಿಶ್ವಾಸ ಸಹ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು. ಆದ್ರೆ ಈ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರದ ಚರಮಸೀಮೆಗೆ ಸರ್ಕಾರ ತಲುಪಿದೆ. ಸಿಎಂ ಕೂಡಾ ಇನ್ನೆಷ್ಟು ದಿನ ಇರ್ತೀನೋ? ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತ ಇದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ತೈಲ ಸ್ಮಗ್ಲಿಂಗ್ ದಂಧೆ – ಶಿಪ್ ಮಾಲೀಕರು ಶಾಮೀಲಾಗಿರೋ ಶಂಕೆ; 2 ಆಯಾಮಗಳಲ್ಲಿ ಪೊಲೀಸ್ ತನಿಖೆಗೆ ಸಿದ್ಧತೆ

ಸದನದಲ್ಲಿ ನರೇಗಾ (MGNAREGA) ಹೆಸರು ಬದಲಾವಣೆ ಚರ್ಚೆ ಕುರಿತು ಮಾತನಾಡಿ, ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ವಿರೋಧ ಮಾಡುವ ಅಂಶಗಳೇ ಇಲ್ಲ. ಆದ್ರೂ ಕಾಂಗ್ರೆಸ್ನವ್ರು ಏನೋ ಆಗಿದೆ ಅಂತ ಬಾಯಿ ಬಡಿದುಕೊಳ್ತಿದ್ದಾರೆ. ಸದನದಲ್ಲಿ ನಾವೂ ಚರ್ಚೆ ಮಾಡ್ತೇವೆ. ಚರ್ಚೆಗೆ ಹೆದರೋದಿಲ್ಲ. ಗಾಂಧಿ ಹೆಸರು ತೆಗೆದು ರಾಮನ (Sri Rama) ಹೆಸರು ಇಡಲಾಗಿದೆ. ಗಾಂಧೀಜಿಗೆ ಶ್ರೀರಾಮನೇ ಪ್ರೇರಣೆ ಅಲ್ವೇ ಅಂತ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ಖಾಸಗಿ ಬಸ್ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್
ಸರ್ಕಾರ ಬರೆದುಕೊಟ್ಟ ಭಾಷಣವನ್ನ ರಾಜ್ಯಪಾಲರು ಓದುತ್ತಾರೆ. ಆದ್ರೆ ಈ ಸರ್ಕಾರಕ್ಕೆ ನೈತಿಕತೆ ಇಲ್ಲ, ಜನರ ವಿಶ್ವಾಸ ಕಳೆದುಕೊಂಡಿದೆ. ಎಡಪಂಥೀಯರ ಚಾಳಿ ಸಿಎಂಗೆ ಬಂದಿದೆ. ಸರ್ಕಾರ ರಾಜ್ಯಪಾಲರಿಂದ ಏನೇ ಹೇಳಿಸಬಹುದು. ಆದ್ರೆ ಸರ್ಕಾರದ ವಿರುದ್ಧ ಜನಾಭಿಪ್ರಾಯ ಇದೆ. ಆ ಜನಾಭಿಪ್ರಾಯವನ್ನ ಈ ಸರ್ಕಾರ ಬದಲಾಯಿಸಲು ಆಗಲ್ಲ. ಸರ್ಕಾರ ಜನರ ವಿಶ್ವಾಸ ಗೆಲ್ಲುವಂಥ ಯಾವ ಕೆಲಸವನ್ನೂ ಕಳೆದ ಎರಡೂವರೆ ವರ್ಷದಲ್ಲಿ ಮಾಡಿಲ್ಲ ಎಂದು ತಿವಿದರು. ಇದನ್ನೂ ಓದಿ: ಚಿನ್ನದಂತೆ ಗಲ್ಫ್ ರಾಷ್ಟ್ರಗಳಿಂದ ಡೀಸೆಲ್ ಸ್ಮಗ್ಲಿಂಗ್ – ರಾಜ್ಯದಲ್ಲಿ ಅಕ್ರಮ ತೈಲ ಉತ್ಪನ್ನ ಸಾಗಾಟ!
ಸಿಎಂ ಸುಳ್ಳು ಹೇಳೋದು ನಿಲ್ಲಿಸಲಿ
ಇನ್ನೂ ಅನುದಾನ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ 10 ವರ್ಷದಲ್ಲಿ 81,791 ಸಾವಿರ ಕೋಟಿ ಅನುದಾನ ಬಂತು. ಆದ್ರೆ ಮೋದಿ ಅವರ ಕಾಲದಲ್ಲಿ 10 ವರ್ಷಕ್ಕೆ 3,21,974 ಕೋಟಿ ರೂಪಾಯಿ ಅನುದಾನ ಬಂದಿದೆ. ಯಾವುದು ಹೆಚ್ಚು ಅಂತ ಸಿದ್ದರಾಮಯ್ಯ ಹೇಳಲಿ. ಈ ವರ್ಷ ತೆರಿಗೆ ಹಂಚಿಕೆ 57,876 ಕೋಟಿ ಆಗಿದ್ದು, 34,154 ಕೋಟಿ ರೂ. ಬಿಡುಗಡೆ ಆಗಿದೆ. ಸಿದ್ರಾಮಯ್ಯ ಮೊದಲು ಸುಳ್ಳು ಹೇಳೋದನ್ನ ನಿಲ್ಲಿಸಲಿ ಎಂದರು.

