ಬೆಳಗಾವಿ: ವ್ಯಕ್ತಿಯೊಬ್ಬ ಮದ್ಯಪಾನ ಮಾಡಲು 20 ರೂ ನೀಡಲಿಲ್ಲ ಎಂದು ತನ್ನ ವೃದ್ಧ ತಾಯಿಯನ್ನೇ ಕಲ್ಲು, ಕಟ್ಟಿಗೆಯಿಂದ ತಲೆಗೆ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಗುಗ್ರಾನಟ್ಟಿ ಗ್ರಾಮದಲ್ಲಿ ನಡೆದಿದೆ.
66 ವರ್ಷದ ಪಾರ್ವತಿ ಕೊಲೆಯಾದ ತಾಯಿ. ಇವರ ಮಗನಾದ ಆರೋಪಿ ಸುರೇಶ ದಾಸರಕರ ಕಳೆದ ಹಲವಾರು ವರ್ಷಗಳಿಂದ ಕುಡಿತದ ಚಟಕ್ಕೆ ಬಲಿಯಾಗಿದ್ದ. ಕಳೆದ ರಾತ್ರಿ ಸುರೇಶ್ ತಾಯಿ ಪಾರ್ವತಿ ಜೊತೆ ಜಗಳವಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ತಕ್ಷಣ ತಾಯಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುರೇಶ್ನನ್ನು ಬಂಧಿಸಲಾಗಿದೆ.