Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಮೋಫಿಲಿಯಾ ವಿರುದ್ಧ ಹೋರಾಟ – ಡಾ.‌ಸುರೇಶ್ ಹನಗವಾಡಿಗೆ ಪದ್ಮಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಮೋಫಿಲಿಯಾ ವಿರುದ್ಧ ಹೋರಾಟ – ಡಾ.‌ಸುರೇಶ್ ಹನಗವಾಡಿಗೆ ಪದ್ಮಶ್ರೀ

Bengaluru City

ಹಿಮೋಫಿಲಿಯಾ ವಿರುದ್ಧ ಹೋರಾಟ – ಡಾ.‌ಸುರೇಶ್ ಹನಗವಾಡಿಗೆ ಪದ್ಮಶ್ರೀ

Public TV
Last updated: January 25, 2026 6:11 pm
Public TV
Share
3 Min Read
Dr Suresh Hanagavadi from Karnataka will be conferred the Padma Shri 2026
SHARE

ಬೆಂಗಳೂರು/ದಾವಣಗೆರೆ: ಹೀಮೊಫಿಲಿಯಾ(Hemophilia) ವಿರುದ್ಧ ಹೋರಾಟ ನಡೆಸುತ್ತಿರುವ ಡಾ.‌ಸುರೇಶ್ ಹನಗವಾಡಿ (Dr Suresh Hanagavadi) ಅವರು ಪ್ರತಿಷ್ಠಿತ ಪದ್ಮಶ್ರೀ (Padma Shri) ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸ್ವತಃ ಹಿಮೋಫಿಲಿಯಾ ಬಾಧಿತರಾಗಿರುವ ಡಾ. ಸುರೇಶ್ ಹನಗವಾಡಿ ತಮ್ಮಂತೆಯೇ ಬೇರೆಯವರು ಸಮಸ್ಯೆಗೆ ತುತ್ತಾಗಬಾರದು ಮಹತ್ವದ ಉದ್ದೇಶದಿಂದ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆಯಲ್ಲಿ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಪ್ರಾರಂಭಿಸುವ ಮೂಲಕ ಹಿಮೋಫಿಲಿಯಾ(ಕುಸುಮರೋಗ) ಬಾಧಿತರಿಗೆ ಸಕಾಲಿಕ ಚಿಕಿತ್ಸೆ ನೀಡುತ್ತಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಸುರೇಶ್ ಹನಗವಾಡಿ ಮಾತನಾಡಿ, ನನಗೆ ತುಂಬಾ ಖುಷಿ ತಂದ ದಿನ. ನಾನು ಪ್ರಶಸ್ತಿ ನಿರೀಕ್ಷೆ ಮಾಡಿರಲಿಲ್ಲ. ಪ್ರಶಸ್ತಿ ಲಭಿಸಿದ ಬಳಿಕ ಜವಾಬ್ದಾರಿ ಹೆಚ್ಚಾಗಿದೆ. ನಾನು ಕೂಡ ಹಿಮೋಫಿಲಿಯಾ ಪೀಡಿತನಾಗಿದ್ದು ಆಗ ರಕ್ತ ಪರೀಕ್ಷೆ ಮಾಡುತ್ತಿರಲಿಲ್ಲ. ನಮ್ಮ ಮಾವ ಇದೇ ಖಾಯಿಲೆಯಿಂದ ನಿಧನರಾದರು.  ಅಂದು  ನಾನು ಡಾಕ್ಟರ್ ಆಗಬೇಕು ಎಂದು ಪಣತೊಟ್ಟು‌ ಹಿಮೋಫಿಲಿಯಾಗೆ ಚಿಕಿತ್ಸೆ ನೀಡುತ್ತಿದ್ದೇನೆ ಎಂದರು.

Dr Suresh Hanagavadi S P Balasubrahmanyam

ನನ್ನ ಶ್ರಮದ ಹಿಂದೆ ಸಾಕಷ್ಟು ಜನ ಇದ್ದಾರೆ. ಹಿಮೋಫಿಲಿಯಾ ನಿಯಂತ್ರಣಕ್ಕೆ ಸರ್ಕಾರಗಳು ಒತ್ತು ಕೊಡಬೇಕು ಎಂದು ಅವರು ಮನವಿ ಮಾಡಿದರು.

ಸುರೇಶ್ ಹನಗವಾಡಿ ಅವರಿಗೆ ಈಗಾಗಲೇ ಕೇಂದ್ರ ಸರ್ಕಾರದ ಶ್ರೇಷ್ಠ ದಿವ್ಯಾಂಗಜನ (2024), ರಾಜ್ಯೋತ್ಸವ ಪ್ರಶಸ್ತಿ (2021) ಸೇರಿದಂತೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗೌರವಗಳಿಗೆ ಭಾಜನರಾಗಿದ್ದಾರೆ.  ಇದನ್ನೂ ಓದಿ:  ʻಕನ್ನಡದ ಜ್ಞಾನ ದಾಸೋಹಿʼ ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

ಹಿಮೊಫಿಲಿಯಾ ರಕ್ತಕ್ಕೆ ಸಂಬಂಧಿಸಿದ ಒಂದು ಅನುವಂಶಿಕ ಕಾಯಿಲೆಯಾಗಿದ್ದು, ರಕ್ತಸ್ರಾವ ಆದಾಗ ರಕ್ತವು ಹೆಪ್ಪುಗಟ್ಟುವ ಗುಣವನ್ನು ಕಳೆದುಕೊಳ್ಳುತ್ತದೆ. ಅಂದರೆ, ರಕ್ತದಲ್ಲಿ ಹೆಪ್ಪುಗಟ್ಟುವ ಧಾತುಗಳು ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತವೆ. ಕನ್ನಡದಲ್ಲಿ ಈ ರೋಗಕ್ಕೆ ಕುಸುಮ ರೋಗ ಎಂದು ಕರೆಯಲಾಗುತ್ತದೆ. ಅತಿಯಾದ ರಕ್ತಸ್ರಾವ, ಕೀಲುಗಳಲ್ಲಿ ಊತ ಮತ್ತು ಆಂತರಿಕ ರಕ್ತಸ್ರಾವದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

45 ವರ್ಷಗಳಿಂದ ಅಧ್ಯಯನ
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಡಾ.ಸುರೇಶ್ ಹನಗವಾಡಿ ರವರು ಮೂಲತಃ ವೈದ್ಯರಾಗಿದ್ದು ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಹಲವು ವರ್ಷಗಳ ಕಾಲ ಫೆಥಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾಗಿದ್ದಾರೆ.

ಡಾ.ಸುರೇಶ್ ರವರು ಅತಿ ವಿರಳ, ದುಬಾರಿ ವೆಚ್ಚದ ಹಿಮೋಫಿಲಿಯಾ ನ್ಯೂನತೆ ಹೊಂದಿದ್ದು ಈ ಕಾಯಿಲೆ ಬಗ್ಗೆ ಸತತ 45 ವರ್ಷಗಳಿಂದ ಸಾಕಷ್ಟು ಅಧ್ಯಯನ ಮಾಡಿ ದೇಶ ವಿದೇಶಗಳ ಸುತ್ತಾಟ ಮಾಡಿ ತಮ್ಮ ಹಿಮೋಫಿಲಿಯಾ ಸಮುದಾಯದವರ ಕಷ್ಟ ಕಾರ್ಪಣ್ಯಗಳನ್ನು ಆಲಿಸಿ ಸರ್ಕಾರ ಮತ್ತು ಸಾರ್ವಜನಿಕರಿಗೆ ಸದರಿ ನ್ಯೂನತೆ ಬಗ್ಗೆ ಜಾಗೃತಿ ಮೂಡಿಸಿ ಅತಿ ದುಬಾರಿ ವೆಚ್ಚದ ಹಿಮೋಫಿಲಿಯಾ ಚಿಕಿತ್ಸೆಯನ್ನು ಸರ್ಕಾರದಿಂದ ಉಚಿತವಾಗಿ ದೇಶಾದ್ಯಂತ ದೊರಕಲು ಕಾರಣಕರ್ತರಾಗಿದ್ದಾರೆ.

ದೇಶದಲ್ಲಿಯೇ ಹಿಮೋಫಿಲಿಯಾ, ತಲಸ್ಸೇಮಿಯಾ ಸೇರಿದಂತೆ ವಿರಳ ರಕ್ತಸ್ರಾವ ರೋಗಗಳಿಗೆ ಸಂಬಂಧಿಸಿದಂತೆ ಅತ್ಯುತ್ತಮ ಚಿಕಿತ್ಸಾ ಕೇಂದ್ರವನ್ನು ದಾವಣಗೆರೆ ನಗರದಲ್ಲಿ ಸ್ಥಾಪಿಸಿ ಅನ್ಯ ರಾಜ್ಯದ ರೋಗಿಗಳು ಒಳಗೊಂಡಂತೆ ಸಾವಿರಾರು ರೋಗಿಗಳಿಗೆ ಉತ್ಕೃಷ್ಟ ಗುಣಮಟ್ಟದ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ.  ಇದನ್ನೂ ಓದಿ: ಬೆಂಗಳೂರಿನ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

ದೇಶದ ಖ್ಯಾತ ಗಾಯಕ ಡಾ| ಎಸ್‌ಪಿ. ಬಾಲಸುಬ್ರಹ್ಮಣ್ಯಂ ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯ ಮಹಾ ಪೋಷಕರಾಗಿದ್ದರು. ಹಿಮೋಫಿಲಿಯಾ ಕಟ್ಟಡದ ಉದ್ಘಾಟನೆ ನೆರವೇರಿಸುವುದರ ಜೊತೆಗೆ ದಾವಣಗೆರೆಯ ಶ್ರೀ ಶಿವಯೋಗಿ ಮಂದಿರ ಆವರಣದಲ್ಲಿ ಹಿಮೋಫಿಲಿಯಾ ಬಾಧಿತರ ನೆರವಾರ್ಥ ಸಂಗೀತ ಸಂಜೆ ಕಾರ್ಯಕ್ರಮ ಸಹ ನಡೆಸಿಕೊಟ್ಟಿದ್ದರು.

ಡಾ. ಸುರೇಶ್ ಹನಗವಾಡಿ ರವರ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದ ನಿಸ್ವಾರ್ಥ ಸೇವೆಗೆ ಈಗಾಗಲೇ ಹತ್ತಾರು ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳು ಸಂದಿವೆ. ಅಂಗವಿಕಲತೆಯನ್ನು ತಡೆಗಟ್ಟುವ ಕಾರ್ಯದಲ್ಲಿ ನಿರತರಾಗಿರುವ ಹನಗವಾಡಿಯವರಿಗೆ ಕಳೆದ ವರ್ಷ ಕೇಂದ್ರ ಸರ್ಕಾರದ 2024 ನೆ ಸಾಲಿನ ವಿಕಲಚೇತನರ ಸಬಲೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು.

2 ಬಾರಿ ಹಿಮೋಫಿಲಿಯಾ ಫೆಡರೇಷನ್ ಆಫ್ ಇಂಡಿಯಾ ದ ಅಧ್ಯಕ್ಷರಾಗಿ ದೇಶಾದ್ಯಂತ ಸಂಚರಿಸಿ ಹಿಮೋಫಿಲಿಯಾ ಬಾದಿತರ ಕಲ್ಯಾಣಕ್ಕಾಗಿ ಸರ್ಕಾರದಿಂದ ಹಲವು ಸೌಲಭ್ಯ ಕೊಡಿಸುವಲ್ಲಿ ಯಶಸ್ಸು ಕಂಡಿದ್ದಾರೆ ..ಪ್ರಸ್ತುತ ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯ ಅಧ್ಯಕ್ಷರಾಗಿ ರಾಜ್ಯದ ಹಿಮೋಫಿಲಿಯಾ ರೋಗಿಗಳ ಆರೈಕೆಯಲ್ಲಿ ತಲ್ಲಿನರಾಗಿದ್ದಾರೆ.

TAGGED:davanagereDr Suresh HanagavadiHemophiliaPadma Shriದಾವಣಗೆರೆಸುರೇಶ್‌ ಹನಗವಾಡಿಹೀಮೊಫಿಲಿಯಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
6 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
8 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?