ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ (Confident Group) ಮುಖ್ಯಸ್ಥ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ (SIT) ರಚಿಸಿದೆ. ಬೆಂಗಳೂರಿನ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನನ್ನ ರಚಿಸಲಾಗಿದೆ ಎಂದು ಗೃಹಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.
ಎಸ್ಐಟಿ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಇರಲಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆದಿರುವ ಆತ್ಮಹತ್ಯೆ ಇದು. ಐಟಿ ಅಧಿಕಾರಿಗಳನ್ನು ವಿಚಾರಣೆ ಮಾಡಬೇಕಾ ಬೇಡವಾ ಎನ್ನುವುದನ್ನ ತನಿಖಾ ಅಧಿಕಾರಿಗಳು ನಿರ್ಧಾರ ಮಾಡುತ್ತಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಇದನ್ನೂ ಓದಿ: ಮೈಲಿಗಲ್ಲು ಸಾಧಿಸಲು ನಿರ್ಮಲಾ ಸೀತಾರಾಮನ್ ಸಜ್ಜು – 9ನೇ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ
ಸದ್ಯ ಪ್ರಕರಣ ಸಂಬಂಧ ಸಿಜೆ ರಾಯ್ ಅವರ ಐಫೋನ್ ಮತ್ತು ಆ್ಯಂಡ್ರಾಯ್ಡ್ ಫೋನ್ಗಳನ್ನು ಪೊಲೀಸರು ವಶಕ್ಕೆ ಪಡೆದು, ಸಿಐಡಿಗೆ ರವಾನಿಸಿದ್ದಾರೆ. ಎರಡು ಫೋನ್ಗೆ ಪಾಸ್ವಾರ್ಡ್ ಇರುವ ಕಾರಣ ಕೋರ್ಟ್ ಅನುಮತಿ ಪಡೆದು ಎಫ್ಎಸ್ಎಲ್ಗೆ ರವಾನೆ ಮಾಡಬೇಕು. ಹೀಗಾಗಿ ಸದ್ಯ ಸಿಐಡಿ ಸೈಬರ್ ಸೆಲ್ಗೆ ಮೊಬೈಲ್ನ್ನು ರವಾನೆ ಮಾಡಿದ್ದು, ಮೊಬೈಲ್ನಲ್ಲಿ ಇರುವ ಮಾಹಿತಿ ರಿಕವರಿ ಮಾಡಲಿದ್ದಾರೆ. ಇದನ್ನೂ ಓದಿ: ಸಿಜೆ ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ, ಬೇರೆ ಯಾರಾದ್ರೂ ಹೊಡೆದ್ರಾ? – ಪ್ರದೀಪ್ ಈಶ್ವರ್ ಅನುಮಾನ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಹಲವು ಮಾಹಿತಿಗಳು ಬಯಲಾಗುತ್ತಿದ್ದು, ಪೊಲೀಸ್ ತನಿಖೆ ವೇಳೆ ಅವರ ಪರ್ಸನಲ್ ಡೈರಿ ಸಿಕ್ಕಿದೆ ಎನ್ನಲಾಗಿದೆ. ಅದರಲ್ಲಿ ಅವರು ಬೆಂಗಳೂರಿನ ಪ್ರಭಾವಿ ರಾಜಕಾರಣಿಗಳು, ಚಿತ್ರರಂಗದ ಅನೇಕರ ಜೊತೆ ಒಡನಾಟ ಇರುವುದನ್ನು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಉದ್ಯಮಿ ಸಿಜೆ ರಾಯ್ ಪ್ರಕರಣ ತನಿಖೆ ಚುರುಕು – ಕುಟುಂಬಸ್ಥರ ವಿಚಾರಣೆ, ಹೇಳಿಕೆ ದಾಖಲು
ಇನ್ನು ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಪೊಲೀಸರು ಖಾಸಗಿ ಹೋಟೆಲ್ವೊಂದರಲ್ಲಿ ಸಿಜೆ ರಾಯ್ ಹೆಂಡತಿ-ಮಕ್ಕಳ ಹೇಳಿಕೆ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನಿರಬಹುದು? ಕೊನೆಯ ಬಾರಿ ಯಾವಾಗ ಕಾಲ್ ಮಾಡಿದ್ರು? ಆತ್ಮಹತ್ಯೆಗೂ ಮುನ್ನ ಕರೆ ಅಥವಾ ಮೆಸೇಜ್ ಏನಾದ್ರು ಮಾಡಿದ್ರಾ? ಐಟಿ ತನಿಖೆ ಬಗ್ಗೆ ನಿಮ್ಮ ಬಳಿ ಏನು ಹೇಳಿದ್ರು? ಬೇರೆ ಯಾವುದಾದ್ರು ಸಮಸ್ಯೆಗಳಿತ್ತಾ? ಹೀಗೆ ಹತ್ತು ಹಲವು ಪ್ರಶ್ನೆ ಕೇಳಿರುವ ಪೊಲೀಸರು ಸಿಜೆ ರಾಯ್ ಕುಟುಂಬಸ್ಥರ ಹೇಳಿಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: 300 ಕೋಟಿಗೆ ಸರಿಯಾದ ದಾಖಲಾತಿ ಹೊಂದಿರಲಿಲ್ವಾ ರಾಯ್? – ಉದ್ಯಮಿಗೆ ಕೇರಳ ಎಲೆಕ್ಷನ್ ಕಂಟಕ?


