ಮೈಸೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಜಾಗ ಒತ್ತುವರಿ (Land Encroachment) ಮಾಡಿಕೊಂಡಿದ್ದವರಿಗೆ ತಾಲೂಕು ಆಡಳಿತ ಶಾಕ್ ನೀಡಿದೆ.
ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸರ್ವೆ ನಂ. 87ರ 38 ಗುಂಟೆ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದರು. ಈ ಜಾಗವನ್ನ ತಾಲೂಕು ಆಡಳಿತ ಅಧಿಕಾರಿಗಳು ತೆರವು ಮಾಡಿಸಿದ್ದಾರೆ. ಇದನ್ನೂ ಓದಿ: ಬ್ಯಾಲೆಟ್ ಪೇಪರ್ನಲ್ಲಿ ಪಂಚಾಯತ್ ಚುನಾವಣೆ – ಮಸೂದೆಗೆ ಕ್ಯಾಬಿನೆಟ್ ಒಪ್ಪಿಗೆ

ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಮಂಜೂರಾಗಿದ್ದ ಜಾಗವನ್ನ ಒತ್ತುವರಿ ಮಾಡಿಕೊಂಡು ಹಲವು ವರ್ಷಗಳಿಂದ ಪೇ ಅಂಡ್ ಪಾರ್ಕಿಂಗ್ ವ್ಯವಹಾರ ಮಾಡಲಾಗುತ್ತಿತ್ತು. ಈ ಜಾಗವನ್ನು ಈಗ ತೆರವು ಮಾಡಲಾಗಿದೆ. ಇದನ್ನೂ ಓದಿ: ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – ತಪ್ಪಿದ ಭಾರೀ ಅನಾಹುತ

