Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
Last updated: February 22, 2026 8:57 pm
Public TV
Share
4 Min Read
Bommai
SHARE

ಹಾವೇರಿ: ಒಬ್ಬ ಶಿಕ್ಷಕರು ನಿವೃತ್ತರಾಗುವ ಮುಂಚಿನ ವರ್ಷ ಇನ್ನೊಬ್ಬ ಶಿಕ್ಷಕರ ನೇಮಕ (Teachers Recruitment) ಮಾಡುವ ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಶಿಕ್ಷಕರ ನೇಮಕಾತಿ ವ್ಯವಸ್ಥೆ ಜಾರಿಗೆ ಬಂದರೆ ಶಿಕ್ಷಕರ ಹುದ್ದೆ ಖಾಲಿ ಇರುವುದನ್ನ ತಪ್ಪಿಸಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಇಂದು ಹಾವೇರಿ (Haveri) ತಾಲೂಕಿನ ಕಾಟೇನಹಳ್ಳಿ ಗ್ರಾಮದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಸರಸ್ವತಿ ಪೂಜೆ ಹಾಗೂ 7ನೇ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಹಿರಿಯ ಪ್ರಾಥಮಿಕ ಶಾಲೆಯ 21 ನೇಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಸರಸ್ವತಿ ಪೂಜೆ ಹಾಗೂ 7 ನೇಯ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಮತ್ತು ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದೆನು.

ಈ ಸಂಧರ್ಭದಲ್ಲಿ ಶ್ರೀ ಮ.ನಿ.ಪ್ರ… pic.twitter.com/hUnlfJZHEV

— Basavaraj S Bommai (@BSBommai) February 22, 2026

ಇಡೀ ವರ್ಷ ವಿದ್ಯಾರ್ಜನೆ ಮಾಡಿ ಪಾಠ ಕಲಿತು ಆಟ ಆಡಿ ಈಗ ಸ್ನೇಹಿತರಾಗಿ ಒಬ್ಬರಿಗೊಬ್ಬರು ಬೆರೆತು ನಿಮ್ಮ ಕಲೆ ಸಂಸ್ಕೃತಿ ಹಾಗೂ ವಿದ್ಯೆಯ ಪ್ರತಿಭೆಯನ್ನು ತೋರಿಸಲು ತಾವೆಲ್ಲ ಸೇರಿದ್ದೀರಿ, ಮಕ್ಕಳ ಪ್ರತಿಭೆ ನೋಡಲು ಪಾಲಕರು ಸೇರಿದ್ದೀರಿ. ಇದು ನಿಜವಾದ ಸಂಗಮ ಮಕ್ಕಳನ್ನ (Childrens) ದೇವರೆಂದು ಕರೆಯುತ್ತಾರೆ. ಅವರ ಶ್ರೇಯೋಭಿವೃದ್ಧಿಗೆ ಎಲ್ಲರೂ ಶ್ರಮಿಸುತ್ತೇವೆ. ತಾಯಿ ಮೊದಲ ಗುರು, ಆ ಮೇಲೆ ಶಾಲೆಯಲ್ಲಿ ಕಲಿಸುವ ಗುರುಗಳು ಶಿಕ್ಷಣ ನೀಡುತ್ತಾರೆ. ತಾಯಿ ಸಂಸ್ಕಾರ ಕೊಡುತ್ತಾಳೆ, ಗುರು ಶಿಕ್ಷಣ ನೀಡುತ್ತಾರೆ. ಸಮಾಜ ಬದುಕು ಕೊಡುತ್ತದೆ. ಇದೆಲ್ಲವನ್ನು ನಾವು ಕಲಿಯಬೇಕು ಎಂದು ಹೇಳಿದರು.

ಪಾಠ ಪರೀಕ್ಷೆ ನಿರಂತರ
ಒಮ್ಮೆ ವಿದ್ಯಾರ್ಥಿಯಾದರೆ (Student) ಜೀವನದ ಕೊನೆವರೆಗೂ ವಿದ್ಯಾರ್ಥಿಗಳು, ಶಾಲೆಯಲ್ಲಿ ಪಾಠ ಮಾಡಿ ನಂತರ ಪರೀಕ್ಷೆ. ಆದರೆ, ಜೀವನದಲ್ಲಿ ಮೊದಲು ಪರೀಕ್ಷೆ ಆ ಮೇಲೆ ಪಾಠ ಹೀಗಾಗಿ ಪಾಠ ಪರೀಕ್ಷೆ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಮಕ್ಕಳು ಜ್ಞಾನದ ಆಯಾಮಗಳನ್ನು ತೆರೆದಿಡಬೇಕು. ಕಣ್ಣು, ಮನಸ್ಸು, ಬುದ್ಧಿ ಶಕ್ತಿ, ಶ್ರಾವಣ ಶಕ್ತಿಯನ್ನ ತೆರೆದಿಡಬೇಕು. ಆಗ ಎಲ್ಲ ದೃಷ್ಟಿಯಿಂದ ಜ್ಞಾನ ಪಡೆಯಲು ಸಾಧ್ಯ ಯಾರು ಜ್ಞಾನವಂತರಾಗುತ್ತಾರೆ ಅವರು ಬದುಕಿಯಲ್ಲಿ ಯಶಸ್ವಿಯಾಗುತ್ತಾರೆ. ಗುರುಗಳು ಪಾಠ ಮಾಡಿದರೆ ಯಾಕೆ, ಏನು, ಎಲ್ಲಿ, ಎಷ್ಟು ಎನ್ನುವ ಪ್ರಶ್ನೆಗಳನ್ನು ಕೇಳಬೇಕು. ಪ್ರಶ್ನೆಗಳನ್ನು ಕೇಳಿದರೆ ಬುದ್ದಿ ಶಕ್ತಿ ಬೆಳೆಯುತ್ತದೆ. ತರ್ಕ ಬದ್ಧವಾದ ಚಿಂತನೆ ಬರುತ್ತದೆ. ಶಾಲೆಯಲ್ಲಿ ಪರೀಕ್ಷೆ ಕೊಟ್ಟಾಗ ಅದು ಮಕ್ಕಳ ಪರೀಕ್ಷೆಯಲ್ಲ ಅದು ಗುರುಗಳು ಹೇಗೆ ಕಲಿಸಿದ್ದಾರೆ ಎನ್ನುವ ಪರೀಕ್ಷೆ. ಹೀಗಾಗಿ ಶಿಕ್ಷಕರು ಪ್ರಾಮಾಣಿಕವಾಗಿ ಮಕ್ಕಳ ಹೃದಯ ಮಟ್ಟುವ ಹಾಗೆ ಕಲಿಸಬೇಕು. ಪ್ರಶ್ನೆ ಕೇಳುವ ಹಕ್ಕು ಮಕ್ಕಳಿಗಿದೆ. ಆದರೆ, ನಮ್ಮ ದೇಶದಲ್ಲಿ ತದ್ದಿರುದ್ಧವಿದೆ. ಮಕ್ಕಳು ಪ್ರಶ್ನೆ ಕೇಳುವ ಬದಲು ಶಿಕ್ಷಕರು ಪ್ರಶ್ನೆ ಕೇಳುತ್ತಾರೆ. ಮಕ್ಕಳು ಪ್ರಶ್ನೆ ಕೇಳಿದರೆ ಶಾಂತವಾಗಿ ಉತ್ತರ ಕೊಡಬೇಕು. ಗಾಮಾಂತರ ಪ್ರದೇಶದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶದ ಮಕ್ಕಳ ಶಿಕ್ಷಣದಲ್ಲಿ ಏರುಪೇರಿದೆ ಇದು ನಮ್ಮ ರಾಜ್ಯ ದೇಶದಲ್ಲಿರುವ ಸವಾಲು, 5ನೇ ತರಗತಿವರೆಗೂ ಕನ್ನಡ ನಂತರ ಇಂಗ್ಲಿಷ್ ಕಲಿಯಬೇಕು, ಪಿಯುಸಿ ನಂತರ ಎಂಜನಿಯರಿಂಗ್, ಮೆಡಿಕಲ್ ಹೋಗಲು ಇಂಗ್ಲಿಷ್ ಕಲಿಯಬೇಕು. ಇಂಗ್ಲಿಷ್ ಕಲಿತ ಮಕ್ಕಳೊಂದಿಗೆ ಗ್ರಾಮೀಣ ಮಕ್ಕಳು ಪೈಪೋಟಿ ಮಾಡಲು ಹೇಗೆ ಸಾಧ್ಯ ನಮ್ಮ ರಾಜ್ಯದ ಸಚಿವರು ಇದಕ್ಕೆ ಉತ್ತರ ಕೊಡಬೇಕು. ಹೀಗಾಗಿ ಎಲ್ಲ ಕಡೆಯೂ ಕೆಪಿಎಸ್ ಶಾಲೆಗಳು ಬೇಕು ಅನ್ನುವ ಬೇಡಿಕೆ ಇದೆ ಎಂದರು.

Bommai 2

ನಮ್ಮ ರಾಜ್ಯದಲ್ಲಿ ಶೇ.65 ರಷ್ಟು ಶಾಲೆಗಳು ಹಳೆ ಮೈಸೂರು ಭಾಗದಲ್ಲಿವೆ. ಶೇ.35 ರಷ್ಟು ಶಾಲೆಗಳು ಉತ್ತರ ಕರ್ನಾಟಕದಲ್ಲಿವೆ. ಸುದೈವವೆಂದರೆ ನಮ್ಮ ಮಠಗಳು, ಶಿಕ್ಷಣ ಸಂಸ್ಥೆಗಳು ಶಿಕ್ಷಣ ಜ್ಞಾನ ನೀಡುತ್ತಿವೆ. ಅನ್ನ ದಾಸೋಹ, ಅಕ್ಷರ ದಾಸೋಹ ಅರಿವಿನ ದಾಸೋಹವನ್ನು ಮಠಗಳು ಮಾಡುತ್ತಿವೆ. ಸರ್ಕಾರಿ ಶಾಲೆಗಳನ್ನು ಗಟ್ಟಿಗೊಳಿಸಬೇಕು. ಅಲ್ಲಿ ಮಕ್ಕಳು ಶಾಲೆಗೆ ಬರುವಂತೆ ನೋಡಿಕೊಳ್ಳಬೇಕು. ಶಿಕ್ಷಕರು ಇರುವಂತೆ ನೋಡಿಕೊಳ್ಳಬೇಕು. ನಾನು ಸಿಎಂ ಆಗಿದ್ದಾಗ 30,000 ಶಾಲಾ ಕಟ್ಟಡ ನಿರ್ಮಾಣ ಮಾಡಲು ತೀರ್ಮಾನ ಮಾಡಿದ್ದೇವು. ಮೊದಲ ವರ್ಷ 9 ಸಾವಿರ ಶಾಲಾ ಕಟ್ಟಡ ನಿರ್ಮಾಣ ಮಾಡಿದ್ದೇವೆ. ಆದ್ದರಿಂದ ಬರುವಂತಹ ದಿನಗಳಲ್ಲಿ ಮಕ್ಕಳು ಮಳೆ ಬಿಸಿಲಿನಲ್ಲಿ ಪಾಠ ಕಲಿಯುವುದು ತಪ್ಪುತ್ತದೆ. ನಾವು 15,000 ಶಿಕ್ಷಕರ ನೇಮಕಕ್ಕೆ ಆದೇಶ ಮಾಡಿದೇವು. ಅದು ಮುಂದುವರೆಯಬೇಕು, ತಮಿಳು ನಾಡಿನಲ್ಲಿ ಒಬ್ಬ ಶಿಕ್ಷಕರು ನಿವೃತ್ತರಾಗುತ್ತಾರೆ ಎಂದರೆ ಅದಕ್ಕೂ ಮೊದಲಿನ ವರ್ಷವೇ ಶಿಕ್ಷಕರ ನೇಮಕ ಮಾಡಿ ಒಂದು ವರ್ಷ ತರಬೇತಿ ನೀಡುತ್ತಾರೆ. ಆ ವ್ಯವಸ್ಥೆ ಇಲ್ಲಿ ಬರಬೇಕು. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಬೇಡಿಕೆ ನೀಗಿಸುವ ಕೆಲಸ ಮಾಡಿದಾಗ ನಮ್ಮ ಕನ್ನಡದ ಮಕ್ಕಳ ವಿಶ್ವದ ಯಾವುದೇ ಭಾಗದಲ್ಲಿ ಹೋದರೂ ಯಶಸ್ವಿಯಾಗುತ್ತಾರೆ. ನಮ್ಮ ಕಾಟೇನಹಳ್ಳಿಯ ಶಾಲೆಯಲ್ಲಿ ಇಲ್ಲಿನ ಮಕ್ಕಳು ವಿಶ್ವ ವ್ಯಾಪಿ ಆಗಲಿ. ಶಾಲೆ ಸರಸ್ವತಿ ವಾಹನ, ಕೈಲಾಸ ಮಾನಸ ಸರೋವರದಲ್ಲಿ ಪರಮ ಹಂಸ ಪಕ್ಷಿ ಮಾತ್ರ ಇರುತ್ತದೆ. ಅದು ಪರಿಶುದ್ಧವಾಗಿರುತ್ತದೆ. ಈ ಶಾಲೆಯ ಕೀರ್ತಿ ಎತ್ತರಕ್ಕೆ ಬೆಳೆಯಲಿ ಎಂದು ಹೇಳಿದರು.

TAGGED:Basavaraja Bommaihaverikarnatakatamil naduTeacher Recruitmentಕರ್ನಾಟಕತಮಿಳುನಾಡುಬಸವರಾಜ ಬೊಮ್ಮಾಯಿಶಿಕ್ಷಕರ ನೇಮಕಹಾವೇರಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
50 seconds ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
13 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
15 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
27 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
59 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?