ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ (Channarayapattana) ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನುರನಕ್ಕಿ ಸೆಸ್ಕಾಂ ಬ್ರಾಂಚ್ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್
ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪಾ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

