Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಹೈಡ್ರಾಮಾ – ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರೀ ಹೈಡ್ರಾಮಾ – ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ

Latest

ಭಾರೀ ಹೈಡ್ರಾಮಾ – ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ

Public TV
Last updated: February 26, 2026 11:41 am
Public TV
Share
3 Min Read
Delhi Police 1
SHARE

– ಪೊಲೀಸರ ವಿರುದ್ಧವೇ ಕಿಡ್ನ್ಯಾಪ್‌ ಕೇಸ್‌, ವಾಹನಗಳು ವಶಕ್ಕೆ
– 24 ಗಂಟೆಗಳ ಬಳಿಕ ಶಿಮ್ಲಾ-ದೆಹಲ್ಲಿ ಖಾಕಿ ನಡುವಿನ ಘರ್ಷಣೆ ಶಮನ

ನವದೆಹಲಿ/ಶಿಮ್ಲಾ: ಇತ್ತೀಚೆಗೆ ದೆಹಲಿಯಲ್ಲಿ ನಡೆದಿದ್ದ ಎಐ ಇಂಪ್ಯಾಕ್ಟ್‌ ಶೃಂಗ ಸಭೆಯಲ್ಲಿ (AI Impact Summit) ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿ, ಕರೆತರುವಾಗ ಭಾರೀ ನಾಟಕೀಯ ಬೆಳವಣಿಗೆ ನಡೆದಿದೆ. ಆರೋಪಿಗಳನ್ನ ಬಂಧಿಸಲು ಹಿಮಾಚಲ ಪ್ರದೇಶದ ಶಿಮ್ಲಾ ತೆರಳಿದ್ದ ದೆಹಲಿ ಪೊಲೀಸರನ್ನೇ (Delhi Police) ಶಿಮ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಎರಡೂ ಖಾಕಿ ಪಡೆಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಚರ್ಚೆಗೂ ಗ್ರಾಸವಾಗಿದೆ.

ಹೆಚ್ಚುವರಿ ಮ್ಯಾಜಿಸ್ಟ್ರೇಟ್ (ACJM) ಏಕಾಂಶ್ ಕಪಿಲ್ ಅವರು ನೀಡಿದ ಟ್ರಾನ್ಸಿಟ್ ರಿಮಾಂಡ್ ಅಡಿಯಲ್ಲಿ ದೆಹಲಿ ಪೊಲೀಸ್ ತಂಡ ಮೂವರು ಆರೋಪಿಗಳನ್ನ ಕರೆದೊಯ್ಯುತ್ತಿತ್ತು. ಈ ವೇಳೆ ದೆಹಲಿ ಪೊಲೀಸರನ್ನು ತಡೆದ ಶಿಮ್ಲಾ ಖಾಕಿ (Simla Police), ಆರೋಪಿಗಳಾದ ಸೌರವ್, ಅರ್ಬಾಜ್ ಮತ್ತು ಸಿದ್ಧಾರ್ಥ್ ಮೂವರನ್ನ ಬಲವಂತವಾಗಿ ಕರೆದೊಯ್ಯುತ್ತಿದ್ದಾರೆ. ಅಲ್ಲದೇ ಆರೋಪಿಗಳು ತಂಗಿದ್ದ ರೆಸಾರ್ಟ್‌ನಲ್ಲಿರುವ ಸಿಸಿಟಿವಿ ಡಿವಿಆರ್‌ಗಳನ್ನ (CCTV DVR) ಯಾವುದೇ ಅನುಮತಿಯಿಲ್ಲದೇ ತೆಗದುಕೊಂಡಿದ್ದಾರೆ ಎಂದು ಆರೋಪಿಸಿದ್ರು.

Indian Youth Congress protested at Bharat Mandapam during the India AI Impact Summit 2026 Delhi

ಜೊತೆಗೆ ಅಪಹರಣ ಪ್ರಕರಣ ದಾಖಲಿಸಿ, ವಾಹನಗಳನ್ನೂ ವಶಕ್ಕೆ ಪಡೆದಿದ್ದರು. ಈ ವೇಳೆ ಶಿಮ್ಲಾ-ದೆಹಲಿ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತು. ಕೊನೆಗೆ ಮೂವರು ಆರೋಪಿಗಳನ್ನ ಕರೆದುಕೊಂಡು ಹೋಗಲು ಅನುವು ಮಾಡಿಕೊಟ್ಟ ಬಳಿಕ 24 ಗಂಟೆಗಳ ನಂತರ ಘರ್ಷಣೆ ಶಮನವಾಯಿತು.

ನಂತರ ಬಂಧಿತ ಮೂವರು ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ಶಿಮ್ಲಾ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ಉಪಸ್ಥಿತರಿದ್ದರು. ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ 10,00,00,000 ಫಾಲೋವರ್ಸ್‌ ದಾಟಿದ ಮೊದಲ ವಿಶ್ವನಾಯಕ ಮೋದಿ

ಏನಿದು ಹೈಡ್ರಾಮಾ?
ದೆಹಲಿಯಲ್ಲಿ ನಡೆದ ಇತ್ತೀಚೆಗೆ ನಡೆದ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಭಟನೆ ನಡೆಸಿದ್ದರು. ಈ ಬೆನ್ನಲ್ಲೇ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಇತರ ನಾಯಕರನ್ನ ಬಂಧಿಸಿದ್ದರು. ಇನ್ನುಳಿದ ಮೂವರು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರು ಪ್ರದೇಶದಲ್ಲಿ ಆಶ್ರಯ ಪಡೆಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದು ದೆಹಲಿ ಪೊಲೀಸರು ಆರೋಪಿಗಳನ್ನ ಪತ್ತೆ ಮಾಡಿ ಬಂಧಿಸಿದ್ದರು. ಬಳಿಕ ಬುಧವಾರ ತಡರಾತ್ರಿ ಶಿಮ್ಲಾದ ದೀನ್ಡಿಯಾಲ್ ಉಪಾಧ್ಯಾಯ ವಲಯ ಆಸ್ಪತ್ರೆಯಲ್ಲಿ ಮೂವರು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಕರೆ ತರುತ್ತಿದ್ದರು. ಇದು ಭಾರೀ ರಾಜಕೀಯ ವಾಗ್ವಾದಕ್ಕೂ ಕಾರಣವಾಗಿದೆ.

Delhi Police 3

ಈ ಬಗ್ಗೆ ಮಾಹಿತಿ ಪಡೆದ ಶಿಮ್ಲಾದ ಪೊಲೀಸರು, ಕೂಡಲೇ ಕ್ರಮ ಕೈಗೊಂಡಿದ್ದಾರೆ. ಧರ್ಮಪುರ ಬಳಿಯ ಚಂಡೀಗಡ- ಕಲ್ಕಾ- ಶಿಮ್ಲಾ ಹೆದ್ದಾರಿಯಲ್ಲಿ ಬ್ಯಾರಿಕೇಡ್ ನಿರ್ಮಿಸಿ ದೆಹಲಿ ಪೊಲೀಸರನ್ನ ತಡೆದಿದ್ದಾರೆ. ಅಲ್ಲದೆ 20 ರಷ್ಟಿದ್ದ ದೆಹಲಿ ಪೊಲೀಸರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿ, ಅವರ ವಾಹನಗಳನ್ನೂ ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: ದೆಹಲಿಗೆ ಇಂದ್ರಪ್ರಸ್ಥ ಹೆಸರನ್ನು ಮರುನಾಮಕರಣ ಮಾಡಿ – ಶಾಗೆ ಬಿಜೆಪಿ ಸಂಸದನಿಂದ ಪತ್ರ

ನಂತರ ಶಿಮ್ಲಾ ಪೊಲೀಸರು, ಮೂವರು ಸಿಬ್ಬಂದಿ ಮಾತ್ರ ಆರೋಪಿಗಳನ್ನ ಕರೆದುಕೊಂಡು ರಾಜಧಾನಿಗೆ ಹಿಂತಿರುಗಬಹುದು. ಉಳಿದವರು ತಮ್ಮ ವಿರುದ್ಧ ದಾಖಲಾಗಿರುವ ಅಪಹರಣ ಪ್ರಕರಣದ ತನಿಖೆಗೆ ಸಹಾಯ ಮಾಡಲು ಶಿಮ್ಲಾದಲ್ಲಿಯೇ ಇರಬೇಕಾಗುತ್ತದೆ ಎಂದು ಹೇಳಿದ್ರು. ಜೊತೆಗೆ ವಶಕ್ಕೆ ಪಡೆದಿರುವ ಡಿವಿಆರ್‌ಗಳನ್ನು ಹಿಂದಿರುಗಿಸುವಂತೆ ಕೇಳಿದ್ರು. ಇದ್ಯಾವುದಕ್ಕೂ ಒಪ್ಪದ ದೆಹಲಿ ಪೊಲೀಸರು, ತಮ್ಮ ಯಾವುದೇ ಸಿಬ್ಬಂದಿಯನ್ನ ಹಿಂದೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದ್ರು. ಬಳಿಕ ಶೋಘಿ ಗಡಿಯಲ್ಲಿ ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆಯಲಾಯಿತು. ಈ ಘರ್ಷಣೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಇದನ್ನೂ ಓದಿ: ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ

TAGGED:AI SummitDelhi PoliceShimla Policeyouth congressಎಐ ಶೃಂಗಸಭೆಡಿವಿಆರ್ದೆಹಲಿ ಪೊಲೀಸ್ಯುವ ಕಾಂಗ್ರೆಸ್ಶಿಮ್ಲಾ ಪೊಲೀಸ್‌
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Parameshwar 3
Bengaluru City

Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

Public TV
By Public TV
2 minutes ago
KKR
Cricket

ಕೆಕೆಆರ್‌ ಆಲ್‌ರೌಂಡ್‌ ಆಟಕ್ಕೆ ಸನ್‌ ಬರ್ನ್‌ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
21 minutes ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
22 minutes ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
2 hours ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
2 hours ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?