ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ (Mobile Ban) ಮಾಡುವ ಚರ್ಚೆ ಜೋರಾಗಿದೆ. ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಮುನ್ನ ಮಕ್ಕಳ (Students) ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಕಾರ್ಯಕರ್ತ ನಾಗಸಿಂಹ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಸರ್ಕಾರ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಿ ಸಂಶೋಧನೆ ನಡೆಸುವಂತೆ ನಿರ್ಧರಿಸಲಾಗಿದೆ. ಆದರೆ ಈ ನಿರ್ಧಾರದಲ್ಲಿ ಮಕ್ಕಳ ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕು. ಮಕ್ಕಳ ಅಭಿಪ್ರಾಯ ಪಡೆಯುವ ಯಾವುದೇ ಪ್ರಯತ್ನ ನಡೆದಿಲ್ಲ. ಮಕ್ಕಳು ತಮಗೆ ಸಂಬಂಧಿಸಿದ ಎಲ್ಲಾ ವಿಷಯಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳುವ ಹಕ್ಕು ಹೊಂದಿದ್ದಾರೆ. ಈ ಅಭಿಪ್ರಾಯಗಳನ್ನು ಅವರ ವಯಸ್ಸು ಮತ್ತು ಪ್ರಬುದ್ಧತೆಗೆ ಅನುಗುಣವಾಗಿ ಗೌರವಿಸಬೇಕು. ಮಕ್ಕಳ ನಿರ್ಧಾರಗಳನ್ನು ಪರಿಗಣಿಸಬೇಕು. ಹೀಗಾಗಿ ಮಕ್ಕಳ ಅಭಿಪ್ರಾಯ ತೆಗೆದುಕೊಳ್ಳಬೇಕೆಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: 9 ರೂಪಾಯಿ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್ – 10 ರೂ. ಲೋನ್ ಕಟ್ಟಿ 66 ಪೈಸೆ ವಾಪಸ್ ಕೊಡಿ ಅಂತ ಗ್ರಾಹಕ ಪಟ್ಟು
ಈ ವಿಚಾರದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತಾಡಿ, ಮೊಬೈಲ್ ಬ್ಯಾನ್ ವಿಚಾರ ಸಂಬಂಧ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಿಎಂ ಕೂಡ ಸಲಹೆ ನೀಡಿದ್ದಾರೆ. ಹೇಗೆ ಮಾಡಬೇಕು ಅನ್ನೋ ಚರ್ಚೆ ಕೂಡ ಆಗುತ್ತಿದೆ. ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಮಕ್ಕಳ ಕೈಗೆ ಮೊಬೈಲ್ ಕೊಡೋದು ಪೋಷಕರಿಂದಲೇ ಸಮಸ್ಯೆ ಶುರುವಾಗಿದೆ. ಯಾವುದೇ ತೀರ್ಮಾನ ಆದರೂ ಮಕ್ಕಳ ಹಿತದೃಷ್ಟಿಯಿಂದ ತೀರ್ಮಾನ ಮಾಡುತ್ತೇವೆ. ಪೋಷಕರ ಜೊತೆ ಸಭೆಯಾಗಬೇಕಾ, ಅಥವಾ ಮಕ್ಕಳ ಜೊತೆ ಚರ್ಚೆ ಮಾಡಬೇಕ ಅನ್ನೋ ತೀರ್ಮಾನ ಮಾಡುತ್ತೇವೆ. ಈ ಎಲ್ಲಾ ವಿಚಾರಗಳನ್ನ ಸಿಎಂ ಅವರಿಗೆ ತಿಳಿಸಿ ಅವರ ಮಾರ್ಗದರ್ಶನದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಹೊರೆಯಾದ್ರೂ ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ: ಡಿಕೆಶಿ

